ತರಾತುರಿಯಲ್ಲಿ ಕ್ರಿಯಾಯೋಜನೆ ಅನುಮೋದನೆ: ಆರೋಪ
Team Udayavani, Jun 6, 2019, 2:45 PM IST
ಕನಕಗಿರಿ: ಪಟ್ಟಣ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಸದಸ್ಯರು ಸಭೆ ನಡೆಸಿದರು.
ಕನಕಗಿರಿ: ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಶಾಸಕ ಬಸವರಾಜ ದಢೇಸುಗೂರು ಅವರು ಮುಖ್ಯಮಂತ್ರಿ ವಿಮೋಚನಾ ನಿಧಿಯಡಿ 2018-19ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನವನ್ನು ಸದಸ್ಯರ ಗಮಕ್ಕೆ ತರದೆ ಮೇ 24ರಂದು ಶಾಸಕರ ಅಧ್ಯಕ್ಷತೆಯಲ್ಲಿ ಪಪಂಯಲ್ಲಿ ಕ್ರಿಯಾ ಯೋಜನೆ ಮಾಡಿದ್ದಾರೆ. ತರಾತುರಿಯಲ್ಲಿ ಚುನಾವಣೆ ನೀತಿ ಸಂಹಿತೆಯಿರುವಾಗ ಕ್ರಿಯಾ ಯೋಜನೆ ಅವಸರವೇನಿತ್ತು ಎಂದು ಪಪಂ ಕಾಂಗ್ರೆಸ್ ಸದಸ್ಯ ಶರಣಪ್ಪ ಭತ್ತದ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಬಂದಿರುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸದಸ್ಯರ ಗಮನಕ್ಕೆ ತರದೇ ಕ್ರಿಯಾ ಯೋಜನೆ ಮಾಡದಿರುವುದು ಸರಿಯಲ್ಲ. ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಏಕ ಪಕ್ಷೀಯವಾಗಿ ಶಾಸಕರು ಈ ರೀತಿ ಮಾಡಿರುವುದು ಖಂಡನೀಯ. ಸಭೆ ಕರೆದು ಜೂ. 4ರಂದು ಕ್ರಿಯಾ ಯೋಜನೆ ವಿರುದ್ಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪಪಂ ಸದಸ್ಯರಾದ ಕಾಂಗ್ರೆಸ್ ಹುಲುಗಪ್ಪ ವಾಲೇಕಾರ, ರವಿ ಭಜಂತ್ರಿ, ಮಂಜುನಾಥ ಗಡಾದ್, ಸೈಯದ್ ಮಹ್ಮದ್ ಪಾಷಾ, ಹುಸೇನಸಾಬ್ ಸುಳೇಕಲ್, ಖಾಜಾ ಮೈನುದ್ದೀನ್, ಇಬ್ರಾಹಿಂಸಾಬ್, ಪರಸಪ್ಪ ಚೌಡ್ಕಿ, ಕನಕದಾಸ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ