ಅರಣ್ಯ ಉಳಿವಿಗೆ ಎಲ್ಲರ ಸಹಕಾರ ಅಗತ್ಯ
Team Udayavani, Jun 6, 2019, 5:00 PM IST
ಶೃಂಗೇರಿ: ಜೆಸಿಬಿಎಂ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ನ್ಯಾಯಾಧೀಶ ಎಸ್. ಸೂರ್ಯನಾರಾಯಣ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು.
ಶೃಂಗೇರಿ: ಪಟ್ಟಣ ಹಾಗೂ ನಗರ ಅಭಿವೃದ್ಧಿ ಹೊಂದುತ್ತಿರುವ ಸಂದರ್ಭದಲ್ಲಿ ಅರಣ್ಯ ನಾಶವಾಗುವುದು ಸಹಜವಾದರೂ, ಅದು ಮಿತಿ ಮೀರಿದ್ದರ ಪರಿಣಾಮ ಕಳೆದ ವರ್ಷ ಕೊಡಗಿನ ದುರಂತವೇ ಸಾಕ್ಷಿಯಾಗಿದೆ ಎಂದು ಸಿವಿಲ್ ಜಡ್ಜ್ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಎಸ್. ಸೂರ್ಯನಾರಾಯಣ ಅಭಿಪ್ರಾಯಪಟ್ಟರು.
ಅವರು ಶ್ರೀ ಜೆಸಿಬಿಎಂ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಅರಣ್ಯ ಇಲಾಖೆ, ಎನ್ನೆಸ್ಸೆಸ್, ಅರಣ್ಯ ಇಲಾಖೆ ಆಶ್ರಯದಲ್ಲಿ ಬುಧವಾರ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರಣ್ಯೀಕರಣ ಕೇವಲ ಕಡತದಲ್ಲಿ ಮಾಡಿದರೆ ಸಾಕಾಗದು. ಅದನ್ನು ವಸ್ತುಶಃ ಕಾರ್ಯರೂಪಕ್ಕೆ ತರಬೇಕು. ಸರಕಾರ ಮಾತ್ರ ಅರಣ್ಯ ಉಳಿಸಲು, ಬೆಳೆಸಲು ಪ್ರಯತ್ನಿಸದರೆ ಅದು ಸಾಧ್ಯವಾಗದು. ನಾವು ನಮ್ಮ ಕೈಲಾದ ಹೋರಾಟವನ್ನು ಪರಿಸರ ಉಳಿವಿಗಾಗಿ ಮಾಡಲೇಬೇಕಾದ ಅನಿವಾರ್ಯತೆ ಇದೆ. ಹೈಕೋರ್ಟ್ ನಿರ್ದೇಶನದಂತೆ ತಾಲೂಕಿನಲ್ಲಿ 15 ಸಾವಿರ ಗಿಡ ನೆಡುವ ಯೋಜನೆ ಹೊಂದಲಾಗಿದೆ ಎಂದರು.
ವೃತ್ತ ನಿರೀಕ್ಷಕ ಆರ್.ವಿ. ಗಂಗಾಧರಪ್ಪ ಮಾತನಾಡಿ, ಗಿಡ ನೆಡುವುದೇ ಪರಿಸರ ದಿನಾಚರಣೆಯಾಗದೇ, ಸ್ವಚ್ಚ ಗಾಳಿ, ನೀರು ಇರುವಂತೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಮನುಷ್ಯರ ದುರಾಸೆಯ ಫಲ ಕಾಡು ಕಡಿಮೆಯಾಗಿದ್ದು, ಕಾಡಿನ ಪ್ರಾಣಿಗಳು ಆಹಾರ ಅರಸಿ ನಗರದತ್ತ ಮುಖ ಮಾಡಿದೆ. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿದರೆ ಮಾತ್ರ ಪರಿಸರ ಉಳಿಯುತ್ತದೆ ಎಂದರು. ವಕೀಲರ ಸಂಘದ ಅಧ್ಯಕ್ಷ ಕೆ.ಆರ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ವಲಯಾರಣ್ಯಾಧಿಕಾರಿ ಸಂಪತ್ ಕುಮಾರ್ ಪಟೇಲ್, ಬಿಇಒ ದಯಾವತಿ, ಜೆಸಿಬಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ. ಸ್ವಾಮಿ, ಎನ್ನೆಸ್ಸೆಸ್ ಸಂಯೋಜಕ ಎ.ಜಿ. ಪ್ರಶಾಂತ್, ಬಿ.ಡಿ. ಸಂತೋಷ್, ಅಶ್ವಥ್ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಜೆಸಿಬಿಎಂ ಕಾಲೇಜು ಎದುರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
MUST WATCH
ಹೊಸ ಸೇರ್ಪಡೆ
T20 World Cup: ಇಂದು ಭಾರತ ತಂಡ ಪ್ರಕಟ?
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್