ಅಲೆಕ್ಕಾಡಿ: ಚಿಣ್ಣರ ಸೆಳೆಯುವ ಮಕ್ಕಳ ಮನೆ

ಮಗು ಸ್ನೇಹಿ ಶಿಕ್ಷಣದ ಪರಿಕಲ್ಪನೆಯ ಪೂರ್ವ ಪ್ರಾಥಮಿಕ ಶಾಲೆ ಆರಂಭ

Team Udayavani, Jun 7, 2019, 5:50 AM IST

f-38

ಬೆಳ್ಳಾರೆ: ಖಾಸಗಿಯಂತೆ ಸರಕಾರಿ ಶಾಲೆಗಳಲ್ಲೂ ಎಲ್‌.ಕೆ.ಜಿ., ಯು.ಕೆ.ಜಿ. ಮಾದರಿಯ ಪೂರ್ವ ಪ್ರಾಥಮಿಕ ಶಿಕ್ಷಣ ಈ ವರ್ಷದಿಂದ ಆರಂಭಗೊಂಡಿದೆ. ಒಂದನೇ ತರಗತಿಗೆ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ತಾಲೂಕಿನ ಮುರುಳ್ಯ ಅಲೆಕ್ಕಾಡಿ ಶಾಲೆಯಲ್ಲಿ ಮಕ್ಕಳ ಹೆತ್ತವರೇ ಮುತುವರ್ಜಿ ವಹಿಸಿ “ಮಕ್ಕಳ ಮನೆ’ ಆರಂಭಿಸಿದ್ದಾರೆ. ಆಕರ್ಷಕ ವಿನ್ಯಾಸ, ಸ್ಮಾರ್ಟ್‌ ಕ್ಲಾಸ್‌, ಆಟದ ಮೈದಾನ ಮಕ್ಕಳನ್ನು ಕೈಬೀಸಿ ಕರೆಯುತ್ತಿದೆ. ಸಮವಸ್ತ್ರ, ಶೂ, ಪುಸ್ತಕ, ಶಿಕ್ಷಣ ಶುಲ್ಕ ಎಲ್ಲವನ್ನೂ ಮಕ್ಕಳಿಗೆ ಉಚಿತವಾಗಿ ನೀಡಿ ಖರ್ಚನ್ನು ಹೆತ್ತವರೇ ಭರಿಸಿ ಮಕ್ಕಳ ಮನೆ ಆರಂಭಿಸಿರುವುದು ಇಲ್ಲಿನ ವಿಶೇಷ.

25ಕ್ಕೂ ಹೆಚ್ಚು ಚಿಣ್ಣರ ದಾಖಲಾತಿ
ಅಲೆಕ್ಕಾಡಿ ಮುರುಳ್ಯ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಮನೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ 25ಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದು, ಇನ್ನೂ 10 ವಿದ್ಯಾಥಿಗಳು ಹೆಸರು ನೋಂದಾಯಿಸಿದ್ದಾರೆ. ಸುಮಾರು 6 ಲಕ್ಷ ರೂ.ವೆಚ್ಚದ ಈ ಯೋಜನೆಗೆ ಸಹಕರಿಸಲು ಊರವರು ಹಾಗೂ ಹೆತ್ತವರು ಮುಂದೆ ಬಂದಿರುವುದು ವಿಶೇಷ. ಎಣ್ಮೂರು, ಎಡಮಂಗಲ, ಮುರುಳ್ಯ, ನಿಂತಿಕಲ್ಲು, ಬಾಳಿಲ ಭಾಗದ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ.

ಎಲ್ಲವೂ ಉಚಿತ
ಸರಕಾರಿ ಶಾಲೆಯನ್ನು ಖಾಸಗಿ ಶಾಲೆಯ ಮಾದರಿಯಲ್ಲಿ ರೂಪುಗೊಳಿಸಿರುವ ಹೆತ್ತವರು ಹಾಗೂ ದಾನಿಗಳು ಮಕ್ಕಳಿಗೆ ಹೊರೆಯಾಗದಂತೆ ಸಂಪೂರ್ಣ ಉಚಿತ ಶಿಕ್ಷಣ ನೀಡಲು ಮುಂದಾಗಿದ್ದಾರೆ. 4 ವರ್ಷ 5 ತಿಂಗಳು ತುಂಬಿದ ಮಕ್ಕಳನ್ನು ಇಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿ ದಾಖಲಾತಿ ಪಡೆಯುವ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಿ ದಾನಿಗಳ ನೆರವಿನಿಂದ ಊಟ ಇನ್ನಿತರ ಖರ್ಚುವೆಚ್ಚಗಳನ್ನು ಭರಿಸಲು ನಿರ್ಧರಿಸಲಾಗಿದೆ.

ಹೀಗಿದೆ ಮಕ್ಕಳ ಮನೆ
ಮಕ್ಕಳ ಮನೆಯ ಒಳಹೊಕ್ಕರೆ ಇದು ಸರಕಾರಿ ಶಾಲೆಯೋ ಎಂಬ ಸಂಶಯ ಬಾರದಿರದು. ಚಿಣ್ಣರ ಸೆಳೆಯಲು ಆಕರ್ಷಕ ಗೋಡೆ ಚಿತ್ತಾರವನ್ನು ರಚಿಸಲಾಗಿದೆ. ವಿವಿಧ ಪ್ರಾಣಿ, ಪಕ್ಷಿ, ತರಕಾರಿ, ಅಕ್ಷರಗಳನ್ನು ಮಕ್ಕಳ ಮನೆಯ ಗೋಡೆಗಳಲ್ಲಿ ಆಕರ್ಷಕವಾಗಿ ಚಿತ್ರಿಸಲಾಗಿದೆ. ವಿದ್ಯಾರ್ಥಿಗಳಿಗೆ ಡಿಜಿಟಲ್‌ ಮಾಧ್ಯಮದ ಮೂಲಕ ಕಲಿಯಲು ಎಲ್‌.ಇ.ಡಿ. ಅಳವಡಿಸಲಾಗಿದೆ. ಸಾಮಾಜಿಕ ಸಂದೇಶವುಳ್ಳ ಕಥಾ ಪುಸ್ತಕಗಳ ಗ್ರಂಥಾಲಯವಿದೆ. ರೇಡಿಯೋ ಮತ್ತು ದುರದರ್ಶನದ ಮೂಲಕ ಪಾಠ ಕೇಳಲು ವ್ಯವಸ್ಥೆ ಮಾಡಲಾಗಿದೆ. ಚಿಣ್ಣರ ಆಟದ ಮೈದಾನವನ್ನೂ ವಿಶೇಷವಾಗಿ ರಚಿಸಲಾಗಿದೆ. ಪಠ್ಯ ಪೂರಕ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗಿದ್ದು, ಗುಣಮಟ್ಟದ ಶಿಕ್ಷಣ ನೀಡಲು ತರಬೇತಿ ಪಡೆದ ಒಬ್ಬರು ಶಿಕ್ಷಕಿ ಹಾಗೂ ಸಹಾಯಕಿಯನ್ನು ನೇಮಿಸಲಾಗಿದೆ. ಒಟ್ಟಿನಲ್ಲಿ ಮಗು ಸ್ನೇಹಿ ಶಿಕ್ಷಣದ ಪರಿಕಲ್ಪನೆಯಲ್ಲಿ ಮಕ್ಕಳ ಮನೆಯನ್ನು ವಿನ್ಯಾಸಗೊಳಿಸಲಾಗಿದೆ.

ಟಾಪ್ ನ್ಯೂಸ್

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.