ಬಂಟ್ವಾಳ-ಸಿದ್ದಕಟ್ಟೆ ರಸ್ತೆಯ ಹಲವು ವ್ಯಥೆ


Team Udayavani, Jun 7, 2019, 5:50 AM IST

f-46

ಪುಂಜಾಲಕಟ್ಟೆ: ಮಳೆಗಾಲ ಪೂರ್ವಭಾವಿಯಾಗಿ ಸಂಬಂಧಪಟ್ಟ ಇಲಾಖೆಗಳು ಇನ್ನೂ ಸಿದ್ಧತೆಗಳನ್ನು ನಡೆಸದ ಪರಿಣಾಮ ಬಂಟ್ವಾಳ-ಮೂಡುಬಿದಿರೆ ರಸ್ತೆ ಸಮಸ್ಯೆಗಳ ತಾಣವಾಗಿದೆ.

ಈ ರಸ್ತೆಯ ಬಂಟ್ವಾಳದಿಂದ ಪುಚ್ಚೆಮೊಗರುವರೆಗೆ ಬಂಟ್ವಾಳ ತಾಲೂಕಿಗೆ ಸಂಬಂಧಿಸಿ ಚರಂಡಿಗಳ ನಿರ್ವಹಣೆಯಾಗಿಲ್ಲ. ಕಳೆದ ವರ್ಷ ಈ ಹೊತ್ತಿಗೆ ಮಳೆಗಾಲದಲ್ಲಿ ರಸ್ತೆಯ ಸ್ಥಿತಿ ಶೋಚನೀಯವಾಗಿ ಪ್ರಯಾಣಿಕರು, ವಾಹನಗಳು ಪರದಾಡುವ ಸ್ಥಿತಿ ಎದುರಾಗಿತ್ತು. ಈ ಬಾರಿ ಮತ್ತೆ ಮಳೆಗಾಲ ಆರಂಭವಾಗಲಿದೆ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ.

ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ರಸ್ತೆ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಕಾರ್ಕಳ-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ ಎಂದು ಘೋಷಣೆಯಾಗಿದೆ. ಪ್ರಸ್ತುತ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಕಳೆದ ಬಾರಿಯೂ ರಸ್ತೆ ಚರಂಡಿ ಸರಿಯಾಗಿಲ್ಲದ ಕಾರಣ ರಸ್ತೆ‌ಯಲ್ಲಿ ನೀರು ಹರಿದು ಹೋಗಿ ರಸ್ತೆ ಬದಿ ಹೊಂಡಕ್ಕೆ ಕಾರಣವಾಗಿತ್ತು ಬುಧವಾರ ರಾತ್ರಿ ಸುರಿದ ಮಳೆಗೆ ಕೆಲವೆಡೆ ಕಚ್ಚಾ ಒಳ ರಸ್ತೆಯ ಮಣ್ಣು ಕೊಚ್ಚಿ ಹೋಗಿ ಮುಖ್ಯ ರಸ್ತೆಗೆ ಸೇರಿ ಕೆಸರುಮಯವಾಗಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಇದು ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿದೆ. ಬೇಸಗೆಯಲ್ಲಿ ವಿವಿಧ ಕಾರಣಗಳಿಗೆ ರಸ್ತೆ ಬದಿ ಮಣ್ಣು ತೆಗೆದು ಹಾಗೇ ಬಿಟ್ಟಿದ್ದರಿಂದ ಮಳೆ ಬರುತ್ತಿದ್ದಂತೆ ರಸ್ತೆಗೆ ಬಂದು ಸೇರಿದೆ. ಪೈಪ್‌ಲೈನ್‌ಗಾಗಿ ತೆಗೆದ ಗುಂಡಿಗಳು ಬಾಯ್ದೆರೆಯತೊಡಗಿವೆ.

ಬಂಟ್ವಾಳ ಪುರಸಭೆ ವ್ಯಾಪ್ತಿ ಸಹಿತ ಅಮಾrಡಿ, ಪಂಜಿಕಲ್ಲು, ರಾಯಿ, ಸಂಗಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ರಸ್ತೆ ಹಾದು ಹೋಗುತ್ತಿದ್ದು, ನಿರ್ವಹಣೆ ಲೋಕೋಪಯೋಗಿ ಇಲಾಖೆಗೆ ಸೇರಿದ್ದಾಗಿದೆ. ಕಳೆದ ಬಾರಿ ಹದಗೆಟ್ಟಿದ್ದ ರಸ್ತೆಗೆ ಮರು ಡಾಮರು ಕಾಮಗಾರಿ ನಡೆದಿದೆ. ಆದರೆ ಕೆಲವೆಡೆ ಗುಂಡಿ ಬೀಳಲಾರಂಭವಾಗಿದ್ದು, ಮಳೆಗಾಲದಲ್ಲಿ ರಸ್ತೆ ಹೊಂಡಗಳಾಗುವ ಆತಂಕವಿದೆ.

ರಸ್ತೆ ಬದಿಯ ಗಿಡ, ಕುರುಚಲು ಗಿಡಗಳು, ಬಳ್ಳಿಗಳನ್ನು ತೆಗೆದು ಚರಂಡಿ ಹೂಳು ತೆರವು ಗೊಳಿಸಿದಲ್ಲಿ ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿದು ಹೋಗಲು ಸಾಧ್ಯವಾಗುತ್ತದೆ. ಅಣ್ಣಳಿಕೆ ಬಳಿ ಇಳಿಜಾರು, ತಿರುವಿನಲ್ಲಿ ಡಾಮರು ರಸ್ತೆಗೆ ತಾಗಿಕೊಂಡು ಚರಂಡಿಯಿದ್ದು, ಅಪಾಯಕಾರಿಯಾಗಿದೆ.

ಕೆಲವೆಡೆ ರಸ್ತೆಯ ಎಚ್ಚರಿಕೆ ಸೂಚನಾ ಫಲಕಗಳಿಗೆ ಬಳ್ಳಿ ಸುತ್ತಿ ಕಾಣದಂತಾಗಿದೆ. ರಸ್ತೆ ಬದಿ ಬಳ್ಳಿ ಹರಡಿ ಪಾದಚಾರಿಗಳು ನಡೆದಾಡದಂತಾಗಿದೆ.

ರಸ್ತೆ ಬದಿ ತ್ಯಾಜ್ಯ
ಅಲ್ಲಲ್ಲಿ ರಸ್ತೆ ಬದಿ ಎಸೆದ ತ್ಯಾಜ್ಯಗಳು, ಪ್ಲಾಸ್ಟಿಕ್‌ ಬಾಟಲ್‌ಗ‌ಳು, ಪ್ಲಾಸ್ಟಿಕ್‌ ಚೀಲಗಳು ಚರಂಡಿಯನ್ನು ಮುಚ್ಚಿ ಹಾಕಿವೆ. ಇದನ್ನು ತೆರವುಗೊಳಿಸದಿದ್ದಲ್ಲಿ ಅನಾರೋಗ್ಯಕ್ಕೂ ಕಾರಣವಾಗಬಹುದು. ಜನಪ್ರತಿನಿಧಿ ಗಳು ಈ ಬಗ್ಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖಾಧಿಕಾರಿಗಳಿಗೆ ಸೂಚಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.