52 ಇಲ್ಲವೇ 70 ಸಾಧಕರಿಗಷ್ಟೇ ಕೆಂಪೇಗೌಡ ಪ್ರಶಸ್ತಿ
ಈವರೆಗಿನ ಮೇಯರ್ಗಳು ಅಥವಾ ಪಾಲಿಕೆ ರಚನೆಯಾದ ವರ್ಷಕ್ಕೆ ತಕ್ಕಂತೆ ಸಂಖ್ಯೆ ನಿಗದಿ
Team Udayavani, Jun 7, 2019, 7:10 AM IST
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನೀಡುವ ಪ್ರಶಸ್ತಿಯ ಗೌರವ ಉಳಿಸಲು ಮುಂದಾಗಿರುವ ಬಿಬಿಎಂಪಿ, ಪ್ರಶಸ್ತಿ ಪುರಸ್ಕೃತರಿಗಾಗಿ ಸಮಿತಿ ರಚಿಸುತ್ತಿದ್ದು, ಪ್ರಶಸ್ತಿ ಪುರಸ್ಕೃರ ಸಂಖ್ಯೆಯನ್ನು 52 ಅಥವಾ 70ಕ್ಕೆ ಸೀಮಿತಗೊಳಿಸಲು ಸಜ್ಜಾಗಿದೆ.
ಮೇಯರ್ ಸಂಪರ್ರಾಜ್ ಅವರ ಅವಧಿಯಲ್ಲಿ ಯಾವುದೇ ಮಾನದಂಡಗಳನ್ನು ಅನುಸರಿದೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿ ಅನರ್ಹರಿಗೆ ಪ್ರಶಸ್ತಿ ನೀಡಲಾಗಿತ್ತು. ಜತೆಗೆ ವೇದಿಕೆಯಲ್ಲಿ ಪುರಸ್ಕೃತರನ್ನು ಆಯ್ಕೆ ಮಾಡಿ ಪ್ರಶಸ್ತಿ ವಿತರಣೆ ಮಾಡಿದರಿಂದ ಪುರಸ್ಕೃತರ ಸಂಖ್ಯೆ 542 ದಾಟಿತ್ತು. ಇದರಿಂದಾಗಿ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೇಕ್ಷಕರಿಗಂತಲೂ ಪ್ರಶಸ್ತಿ ಪುರಸ್ಕೃತರ ಸಂಖ್ಯೆ ಹೆಚ್ಚಾಗಿತ್ತು. ಪಾಲಿಕೆಯ ಈ ಧೋರಣೆಗೆ ಸಾರ್ವಜನಿಕರಿಂದ ಕಟುಟೀಕೆಗಳು ವ್ಯಕ್ತವಾಗಿದ್ದವು.
ಇದರಿಂದ ಎಚ್ಚೆತ್ತುಕೊಂಡಿರುವ ಮೇಯರ್ ಗಂಗಾಂಬಿಕೆ, ಈ ಬಾರಿ ಕೆಂಪೇಗೌಡ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ತಜ್ಞರ ಸಮಿತಿ ರಚಿಸಲು ಮುಂದಾಗಿದ್ದು, ಪುರಸ್ಕೃತರ ಸಂಖ್ಯೆಯನ್ನು ಮೇಯರ್ಗಳ ಸಂಖ್ಯೆಗೆ ಅನುಗುಣವಾಗಿ ಅಥವಾ ಬಿಬಿಎಂಪಿ ರಚನೆಯಾದ ವರ್ಷಕ್ಕೆ ಅನುಗುಣವಾಗಿ 52 ಅಥವಾ 70ಕ್ಕೆ ಸೀಮಿತಗೊಳಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಆ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಲಾಗಿದ್ದು, ಕೆಂಪೇಗೌಡ ಜಯಂತಿಯನ್ನು ಜುಲೈ ತಿಂಗಳ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲು ಹಾಗೂ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡ ಆಯ್ಕೆ ಸಮಿತಿ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಸಕ್ತ ಸಾಲಿನಲ್ಲಿ ನಡೆಯುವ ಕೆಂಪೇಗೌಡ ಜಯಂತಿಯಲ್ಲಿ ಅರ್ಹ ಪರಸ್ಕೃತರನ್ನು ಆಯ್ಕೆ ಮಾಡಲು ಶಿಕ್ಷಣ, ಕಲೆ, ಕೃಷಿ, ಸಮಾಜ ಸೇವೆ ಸೇರಿದಂತೆ ಇನ್ನಿತರ ಕ್ಷೇತ್ರಗಳಿಗೆ ಓರ್ವ ತಜ್ಞರನ್ನು ನಿಯೋಜಿಸಲಾಗುತ್ತದೆ. ಆ ತಜ್ಞರು ಆಯಾ ಕ್ಷೇತ್ರದಲ್ಲಿ ನಿಪುಣರಾಗಿರಲಿದ್ದು, ಪ್ರಶಸ್ತಿಗೆ ಅರ್ಜ ಪುರಸ್ಕೃತರನ್ನು ಆಯ್ಕೆ ಮಾಡಲಿದ್ದಾರೆ. ಜತೆಗೆ ಪ್ರಶಸ್ತಿಗೆ ಆಯ್ಕೆ ಮಾಡುವ ಗೊಂದಲವೂ ನಿವಾರಣೆಯಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಅರ್ಜಿ ಆಹ್ವಾನ: ಜುಲೈನಲ್ಲಿ ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಿದ್ದು, ಪ್ರಶಸ್ತಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹರು ಜೂ.20 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ವಿದ್ದು, ರಾಜಕಾರಣಿ, ಬಿಬಿಎಂಪಿ ಕಾರ್ಪೊರೇಟ ರ್ಗಳ ಪ್ರಭಾವ ನಡೆಯುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು