ಆಧಾರ್‌ ಕಾರ್ಡ್‌ಗೆ ಗ್ರಾಮೀಣರ ಪರದಾಟ

ಬ್ಯಾಂಕುಗಳಿಗೆ ನಿತ್ಯವೂ ಹಳ್ಳಿಗರ ಅಲೆದಾಟ • ಆಧಾರ್‌ ಕೇಂದ್ರಗಳಾಗದ ಗ್ರಾಪಂ ಕೇಂದ್ರಗಳು

Team Udayavani, Jun 7, 2019, 7:54 AM IST

mandya-tdy-1..

ಮಂಡ್ಯ ನಗರದ ಸಕ್ಕರೆ ವೃತ್ತದ ಐಸಿಐಸಿಐ ಬ್ಯಾಂಕ್‌ ಮುಂದೆ ಜಿಲ್ಲೆಯ ವಿವಿಧ ಭಾಗಗಳಿಂದ ಆಧಾರ್‌ ಕಾರ್ಡ್‌ ಹಾಗೂ ತಿದ್ದುಪಡಿಗೆ ಆಗಮಿಸಿ ಕಾದು ಕುಳಿತಿರುವ ಜನಸಾಮಾನ್ಯರು.

ಮಂಡ್ಯ: ಹೊಸದಾಗಿ ಆಧಾರ್‌ ಕಾರ್ಡ್‌ ಮಾಡಿಸಲು ಹಾಗೂ ಅವುಗಳ ತಿದ್ದುಪಡಿಗೆ ಜನರು ಪರದಾಡುತ್ತಿರುವ ಸ್ಥಿತಿ ಹೇಳತೀರದಾಗಿದೆ. ನಿತ್ಯವೂ ಗ್ರಾಮೀಣ ಪ್ರದೇಶದಿಂದ ನೂರಾರು ಜನರು ಬ್ಯಾಂಕುಗಳಿಗೆ ಅಲೆದಾಡುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಹಳ್ಳಿಗಾಡಿನ ಜನರಿಗೆ ಅನುಕೂಲವಾಗಲೆಂಬ ಕಾರಣಕ್ಕೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಆಧಾರ್‌ ಕೇಂದ್ರ ತೆರೆಯಬೇಕೆಂಬ ಸರ್ಕಾರಿ ಆದೇಶ ಕಾಗದಕ್ಕೆ ಸೀಮಿತವಾಗಿದೆ. ಅದಕ್ಕೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಇದರಿಂದ ಆಧಾರ್‌ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ.

20 ಟೋಕನ್‌ ಮಾತ್ರ: ದಿನವೂ ಸೂರ್ಯ ಉದಯಿಸುವ ಮುನ್ನವೇ ಗ್ರಾಮೀಣ ಪ್ರದೇಶಗಳಿಂದ ಬರುವ ಜನರು ಟೋಕನ್‌ಗಳನ್ನು ಪಡೆಯಲು ಬ್ಯಾಂಕುಗಳ ಬಾಗಿಲ ಬಳಿ ಬಂದು ನಿಲ್ಲುತ್ತಿದ್ದಾರೆ. ಬೆಳಗ್ಗೆ 10.30ಕ್ಕೆ ಬ್ಯಾಂಕುಗಳು ಬಾಗಿಲು ತೆರೆಯುವುದನ್ನೇ ಕಾದು ಟೋಕನ್‌ ಪಡೆಯುತ್ತಿದ್ದಾರೆ. ಬ್ಯಾಂಕುಗಳಲ್ಲಿ ಪ್ರತಿದಿನ ಜನರಿಗೆ 20 ಟೋಕನ್‌ ಮಾತ್ರ ವಿತರಣೆ ಮಾಡುತ್ತಿದೆ. ಇದರಿಂದ ಹೊಸದಾಗಿ ಆಧಾರ್‌ ಕಾರ್ಡ್‌ ಮಾಡಿಸುವವರಿಗೆ ಹಾಗೂ ಕಾರ್ಡ್‌ ತಿದ್ದುಪಡಿ ಮಾಡಿಸುವವರಿಗೆ ತೀವ್ರ ತೊಂದರೆಯಾಗುತ್ತಿದೆ.

ಗ್ರಾಪಂಗಳಲ್ಲಿ ಕೇಂದ್ರ ತೆರೆದಿಲ್ಲ: ಪುಟ್ಟ ಮಕ್ಕಳಿಗೂ ಆಧಾರ್‌ ಕಾರ್ಡ್‌ ಮಾಡಿಸಲು ಅವುಗಳೊಂದಿಗೆ ಜನರು ಬ್ಯಾಂಕುಗಳ ಬಳಿ ಬಂದು ನಿಲ್ಲುತ್ತಿದ್ದು, ತಿಂಡಿಯನ್ನೂ ತಿನ್ನದೆ ಹಸಿವಿನಿಂದ ಆಧಾರ್‌ ಕಾರ್ಡ್‌ಗಾಗಿ ಕಾದು ಕೂರುವ ಸನ್ನಿವೇಶ ಎಲ್ಲರ ಮನಕಲಕುತ್ತಿದೆ. ಹೊಸ ಆಧಾರ್‌ ಕಾರ್ಡ್‌ ಹಾಗೂ ತಿದ್ದುಪಡಿಗೆ ಜನರ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಆಧಾರ್‌ ಕೇಂದ್ರಗಳನ್ನು ತೆರೆಯುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆದೇಶ ಹೊರಡಿಸಿದೆ. ಆದೇಶ ಹೊರಬಿದ್ದು ವರ್ಷವಾಗುತ್ತಿದೆ. ಅಧಿಕಾರಿಗಳು ಮಾತ್ರ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿಲ್ಲ.

ಗ್ರಾಮೀಣರಿಗೆ ಅಲೆದಾಟ: ಸರ್ವರ್‌ ಸಮಸ್ಯೆಯ ನೆಪವೊಡ್ಡಿ ಪಂಚಾಯಿತಿ ಕಚೇರಿಗಳಲ್ಲಿ ಆಧಾರ್‌ ಕೇಂದ್ರಗಳನ್ನು ತೆರೆಯದೆ ಗ್ರಾಮೀಣರು ನಗರ ಹಾಗೂ ಪಟ್ಟಣ ಪ್ರದೇಶಗಳಿಗೆ ಅಲೆದಾಡುವಂತೆ ಮಾಡುತ್ತಿದ್ದಾರೆ. ಇದರಿಂದ ಹಳ್ಳಿಗಾಡಿನ ಜನರು ನಿತ್ಯ ತೊಂದರೆಗೆ ಸಿಲುಕಿದ್ದಾರೆ. ಬ್ಯಾಂಕುಗಳ ಎದುರು ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಿರುವುದರಿಂದ ಬ್ಯಾಂಕಿನ ಕಾರ್ಯಚಟುವಟಿಕೆಗಳೂ ಸುಗಮವಾಗಿ ನಡೆಯುವುದಕ್ಕೆ ಅಡ್ಡಿಯಾಗಿದೆ.

ತಿದ್ದುಪಡಿಗೂ ಅವಕಾಶ: ಈ ಹಿಂದೆ ತಾಲೂಕು ಕಚೇರಿ, ಅಂಚೆ ಕಚೇರಿ ಹಾಗೂ ಜಿಲ್ಲಾಡಳಿತದಿಂದ ಅನುಮತಿ ಪಡೆದ ಕೆಲವೊಂದು ಖಾಸಗಿ ಏಜೆನ್ಸಿಗಳು ಹೊಸ ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆ ಸಮಯದಲ್ಲಿ ಹಳ್ಳಿಗಾಡಿನ ಜನರು ಸುಲಭವಾಗಿ ತಮ್ಮ ವಾಸಸ್ಥಳದ ದೃಢೀಕರಣ ಪತ್ರ ಸೇರಿದಂತೆ ಇನ್ನಿತರ ದಾಖಲಾತಿಗಳನ್ನು ನೀಡಿ ಸುಲಭವಾಗಿ ಹೊಸ ಕಾರ್ಡ್‌ ಮತ್ತು ಅದರಲ್ಲಿನ ತಿದ್ದುಪಡಿಯನ್ನು ಮಾಡಿಸಿಕೊಳ್ಳುತ್ತಿದ್ದರು. ಇದು ಒಂದು ರೀತಿಯಲ್ಲಿ ಜನರಿಗೆ ಅನುಕೂಲವಾಗಿತ್ತು.

ಪ್ರಾಧಾನ್ಯತೆ ನೀಡುತ್ತಿಲ್ಲ: ಇದೀಗ ಹೊಸದಾಗಿ ಆಧಾರ್‌ ಕಾರ್ಡ್‌ ಮಾಡುವುದು ಹಾಗೂ ತಿದ್ದುಪಡಿ ಮಾಡುವ ಜವಾಬ್ದಾರಿಯನ್ನು ಖಾಸಗಿ ಏಜೆನ್ಸಿಗಳಿಂದ ಹಿಂಪಡೆದು ಬ್ಯಾಂಕುಗಳಿಗೆ ಮಾತ್ರ ವಹಿಸಲಾಗಿದೆ. ಬ್ಯಾಂಕಿನವರು ಆಧಾರ್‌ ಕಾರ್ಡ್‌ ಮಾಡುವ ಪ್ರಕ್ರಿಯೆಗೆ ಅಷ್ಟೊಂದು ಪ್ರಾಧಾನ್ಯತೆ ನೀಡುತ್ತಿಲ್ಲ. ಬ್ಯಾಂಕಿನ ಕೆಲಸ ಕಾರ್ಯಗಳೇ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಲವು ಬ್ಯಾಂಕುಗಳು ಆಧಾರ್‌ ಕಾರ್ಡ್‌, ತಿದ್ದುಪಡಿ ಮಾಡಲಾಗುವುದಿಲ್ಲವೆಂದು ನೇರವಾಗಿ ಹೇಳಿ ವಾಪಸ್‌ ಕಳುಹಿಸುತ್ತಿದ್ದಾರೆ. ಕೆಲವೊಂದು ಬ್ಯಾಂಕುಗಳು ಸರ್ವರ್‌ ಸಿಗುತ್ತಿಲ್ಲವೆಂಬ ನೆಪ ಹೇಳಿ ಗ್ರಾಮೀಣ ಜನರನ್ನು ಅಲೆಯುವಂತೆ ಮಾಡುತ್ತಿದ್ದಾರೆ.

ಈಗ ಆಧಾರ್‌ ಕಾರ್ಡ್‌ ಪುಟ್ಟ ಮಕ್ಕಳಿಂದ ಆರಂಭವಾಗಿ ದೊಡ್ಡವರವರೆಗೂ ಅವಶ್ಯಕವಾಗಿ ಬೇಕಿದೆ. ಅದಕ್ಕಾಗಿ ಎಲ್ಲರೂ ಬ್ಯಾಂಕುಗಳಿಗೆ ಎಡತಾಕುತ್ತಿದ್ದಾರೆ. ಬ್ಯಾಂಕುಗಳನ್ನು ಹೊರತುಪಡಿಸಿ ಮತ್ತೆಲ್ಲಿಯೂ ಆಧಾರ್‌ ಕಾರ್ಡ್‌ ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ನಿತ್ಯವೂ ಬ್ಯಾಂಕುಗಳೆದುರು ಗಂಟೆಗಟ್ಟಲೆ ಕಾದು ಕೂರುವುದು ಸಾಮಾನ್ಯವಾಗಿದೆ.

ಗ್ರಾಮ ಪಂಚಾಯಿತಿ ಕೇಂದ್ರಗಳ ಬೇಜವಾಬ್ದಾರಿ ತನದಿಂದಾಗಿ ಗ್ರಾಮೀಣ ಜನತೆ ತೊಂದರೆ ಎದುರಿಸುತ್ತಿದ್ದಾರೆ. ಆಧಾರ್‌ ಕೇಂದ್ರ ಆರಂಭಿಸುವ ಸತ್ಯವನ್ನು ಮರೆ ಮಾಚಿ ಕೇವಲ ಪಂಚಾಯಿತಿ ಕೆಲಸಗಳಿಗಷ್ಟೇ ತಮ್ಮ ಕಾರ್ಯ ಸೀಮಿತಗೊಳಿಸಿ ಕೊಂಡು ಗ್ರಾಮ ಪಂಚಾಯಿತಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಡೆಸಿವೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.