ಕೆ.ಆರ್.ಪೇಟೆ: ವಾರಕ್ಕೊಮ್ಮೆ ಮಾತ್ರ ನೀರು
ತಾಲೂಕಿನಲ್ಲಿ ಮೂರು ನದಿ ಹರಿದರೂ ಪಟ್ಟಣಕ್ಕೆ ಸಮರ್ಪಕ ನೀರು ಪೂರೈಸುತ್ತಿಲ್ಲ
Team Udayavani, Jun 7, 2019, 7:59 AM IST
.ಆರ್.ಪೇಟೆ ಪಟ್ಟಣದಲ್ಲಿ ಮಹಿಳೆಯರು ಕುಡಿಯುವ ನೀರು ಪಡೆಯಲು ಕೈ ಪಂಪುಗಳ ಮೊರೆ ಹೋಗಿರುವುದು.
ಕೆ.ಆರ್.ಪೇಟೆ: ದೀಪದ ಕೆಳಗೆ ಕತ್ತಲು ಎಂಬ ಮಾತಿನಂತೆ ಹೇಮಾವತಿ, ಕಾವೇರಿ, ಲಕ್ಷ್ಮಣ ತೀರ್ಥ ನದಿಗಳು ತಾಲೂಕಿನಲ್ಲಿ ಹರಿಯುತ್ತಿದ್ದರೂ ಪಟ್ಟಣ ನಾಗರೀಕರಿಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.
ಸುಮಾರು 40 ಸಾವಿರ ಜನಸಂಖ್ಯೆ ಇರುವ ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಒದಗಿಸಲು ಸ್ಥಳೀಯ ಪುರಸಭೆ ಮತ್ತು ಜಿಲ್ಲಾಡಳಿತ ವಿಫಲವಾಗಿರುವುದು ವಿಪರ್ಯಾಸವೇ ಸರಿ. ಏಕೆಂದರೆ ತಾಲೂಕಿನಲ್ಲಿ ಪ್ರಮುಖ ಮೂರು ನದಿಗಳು ಹರಿಯುತ್ತವೆ. ಜೊತೆಗೆ ತಾಲೂಕು ಕೇಂದ್ರದಿಂದ ಕೇವಲ 10 ಕಿ.ಮೀ. ದೂರದ ಹೇಮಗಿರಿಯಲ್ಲಿ ಬೇಸಿಗೆ ಕಾಲದ ಎರಡು ತಿಂಗಳಲ್ಲಿ ನೀರಿನ ಪ್ರಮಾಣ ಸ್ವಲ್ಪ ಕಡಿಮೆಯಾಗುವುದನ್ನು ಹೊರತುಪಡಿಸಿದರೆ ವರ್ಷ ಪೂರ್ತಿ ಹೇಮೆ ಹರಿಯುತ್ತಾಳೆ. ಅಲ್ಲಿಯೇ ಪುರಸಭೆಯಿಂದ ಮೋಟಾರ್ ಅಳವಡಿಸಿ ಅಲ್ಲಿಂದ ಪೈಪ್ಗ್ಳ ಮೂಲಕ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಆಡಳಿತ ವರ್ಗದ ನಿರ್ಲಕ್ಷ್ಯ: ಹೇಮಾವತಿ ನದಿಯಲ್ಲಿ ನೀರಿಗೆ ಸಮಸ್ಯೆ ಆಗುವುದಿಲ್ಲ. ಆದರೆ ಅಧಿಕಾರಿಗಳು ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ ಹಳ್ಳಕ್ಕೆ ಹರಿಸುವುದರಿಂದ ನೀರು ನೇರವಾಗಿ ಕೆಆರ್ಎಸ್ ಅಣೆಕಟ್ಟೆ ಸೇರುತ್ತಿದೆ. ಇದರ ಜೊತೆಗೆ ವಿದ್ಯುತ್ ಸಮಸ್ಯೆ, ನೀರು ಸೋರಿಕೆ, ಅಸಮರ್ಪಕ ನಿರ್ವಹಣೆಯಿಂದಾಗಿ ಪಟ್ಟಣದಲ್ಲಿ ವಾರಕ್ಕೆ ಒಂದು ದಿನ ಪುರಸಭೆಯವರು ನಲ್ಲಿಗಳಲ್ಲಿ ನೀರು ಹರಿಸುತ್ತಾರೆ. ಇದರಿಂದ ಬಡ ಕುಟುಂಬದವರಿಗೆ ನೀರಿನ ಸಮಸ್ಯೆ ಹೆಚ್ಚಳವಾಗಿದ್ದು ಕೆಲ ಸಮಯದಲ್ಲಿ ಶೌಚಕ್ಕೂ, ಕುಡಿಯುವುದಕ್ಕೂ ನೀರನ್ನು ಕೊಳವೆ ಬಾವಿಗಳನ್ನು ಹೊಂದಿರುವ ಸಿರಿವಂತರ ಮನೆಗಳ ಮುಂಭಾಗದಲ್ಲಿ ಖಾಲಿ ಕೊಡಗಳು ಹಿಡಿದುಕೊಂಡು ನಿಲ್ಲುವಂತಾಗಿದೆ. ಇದರ ಜೊತೆಗೆ ಕೆಲವು ಬಡಾವಣೆಗಳಲ್ಲಿ ವಾರಕ್ಕೆ ಒಂದು ದಿನವೂ ಸ್ನಾನ ಮಾಡಲು ಆಗದಂತಹ ಸ್ಥತಿಯಲ್ಲಿ ಜನಜೀವನ ನಡೆಸುತ್ತಿದ್ದಾರೆ.
● ಎಚ್.ಬಿ.ಮಂಜುನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ