ಮಳೆ-ಗಾಳಿಗೆ ಜನಜೀವನ ಅಸ್ತವ್ಯಸ್ತ
•ಧರೆಗುರುಳಿದ ನೂರಾರು ಮರ-ಗಿಡ, ವಿದ್ಯುತ್ ಕಂಬಗಳು•ಅಂಗಡಿಗೆ ನುಗ್ಗಿದ ಚರಂಡಿ ನೀರು
Team Udayavani, Jun 7, 2019, 9:21 AM IST
ಹಾವೇರಿ: ಎಸ್ಪಿ ಕಚೇರಿ ಬಳಿ ಅಂಗಡಿಯೊಂದಕ್ಕೆ ನುಗ್ಗಿದ ಕೊಳಚೆ ನೀರು ಹೊರ ಹಾಕುತ್ತಿರುವ ಅಗ್ನಿಶಾಮಕ ಸಿಬ್ಬಂದಿ.
ಹಾವೇರಿ: ಗುರುವಾರ ನಸುಕಿನಜಾವ ಜಿಲ್ಲೆಯ ವಿವಿಧೆಡೆ ಭಾರಿ ಗಾಳಿ, ಗುಡುಗು, ಮಿಂಚಿನೊಂದಿಗೆ ಅರ್ಧ ತಾಸಿಗೂ ಹೆಚ್ಚು ಕಾಲ ಮಳೆ ಸುರಿಯಿತು.
ಬೆಳಗಿನ ಜಾವ ನಾಲ್ಕು ಗಂಟೆ ಹೊತ್ತಿಗೆ ಗುಡುಗು, ಮಿಂಚಿನೊಂದಿಗೆ ಸುರಿದ ಈ ಪ್ರಥಮ ಮಳೆಯ ಆರ್ಭಟಕ್ಕೆ ಕೆಲವು ಅಂಗಡಿಗಳಿಗೆ ನೀರು ನುಗ್ಗಿ, ಹತ್ತಾರು ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಬ್ಯಾಡಗಿಯಲ್ಲೂ ಗಾಳಿಯ ರಭಸಕ್ಕೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹಾನಗಲ್ಲ ತಾಲೂಕಿನ ಅಕ್ಕಿಆಲೂರು ಬಳಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಿದ್ದಿದೆ. ಸವಣೂರು ತಾಲೂಕಿನಲ್ಲಿ 2 ವಿದ್ಯುತ್ ಕಂಬ ಬಿದ್ದಿದ್ದು ಒಂದು ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದೆ. ರಾಣಿಬೆನ್ನೂರು ತಾಲೂಕಿನಲ್ಲೂ ಸಾಧಾರಣ ಮಳೆಯಾಗಿದೆ. ಇದರಿಂದ ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.
ನಗರದ ಎಸ್ಪಿ ಕಚೇರಿ ಎದುರಿನ ಮೂರ್ನಾಲ್ಕು ಅಂಗಡಿಗಳಿಗೆ ಚರಂಡಿ ನೀರು ತ್ಯಾಜ್ಯ ಸಹಿತ ಬಟ್ಟೆಯ ಅಂಗಡಿಗಳ ಒಳಗೆ ನುಗ್ಗಿತು.
ನೆಲಮಹಡಿಯಲ್ಲಿರುವ ಈ ಅಂಗಡಿಗಳಲ್ಲಿ ನುಗ್ಗಿದ್ದ ನೀರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹೊರಹಾಕಲು ಶ್ರಮಿಸಿದರು. ಚರಂಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಕಟ್ಟಿದ್ದರಿಂದ ಮಳೆ ನೀರು ಹೊರಗೆ ಹರಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬಟ್ಟೆ ನೀರಿನಲ್ಲಿ ಸಿಲುಕಿ ಹಾಳಾಗಿದೆ. ಇಲ್ಲಿಯ ಬಸವೇಶ್ವರ ನಗರ 1ನೇ ಕ್ರಾಸ್ನಲ್ಲಿ ಮರವೊಂದು ಉರುಳಿ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ