15 ಸಾವಿರ ಸಸಿ ನೆಡುವ ಗುರಿ
ನ್ಯಾಯಾಧೀಶರಿಂದ ಕಕ್ಷಿದಾರರಿಗೆ ಸಸಿ ವಿತರಣೆ•ಧರ್ಮಸ್ಥಳ ಸಂಸ್ಥೆಯಿಂದ ಬೀಜದುಂಡೆ ನಾಟಿ
Team Udayavani, Jun 7, 2019, 1:21 PM IST
ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್ ಕಕ್ಷಿದಾರರಿಗೆ ಸಸಿ ವಿತರಿಸಿದರು.
ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ನ್ಯಾಯಾಧೀಶರು ಕಕ್ಷಿದಾರರಿಗೆ ಸಸಿ ವಿತರಿಸಿದರು.
ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನಾದ್ಯಂತ ಈಗಾಗಲೆ ಸಾವಿರಾರು ಸಸಿ ನೆಡಲಾಗಿದೆ. ತಾಲೂಕಿನ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜು, ಹಾಸ್ಟೇಲ್ ಆವರಣದಲ್ಲಿ 10ರಿಂದ 15 ಸಾವಿರ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು.
ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸೇರಿದಂತೆ ಉತ್ತಮ ಪರಿಸರ ಕೊಡುವುದು ನಮ್ಮ ಕರ್ತವ್ಯ. ಕಕ್ಷಿದಾರರು ತಾವು ಪಡೆದಿರುವ ಸಸಿಗಳನ್ನು ತಮ್ಮ ಮನೆ, ಕಣಗಳ ಆವರಣ ಅಥವಾ ಜಮೀನುಗಳಲ್ಲಿ ನೆಟ್ಟು, ಪೋಷಣೆ ಮಾಡಬೇಕು ಎಂದರು.
2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅವಿನಾಶ್ ಚಿಂದು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಿದ್ದರಾಜು, ವಕೀಲರ ಸಂಘದ ಅಧ್ಯಕ್ಷ ನಾಗರಾಜು ಹಲವಾಗಲು, ಎಪಿಪಿ ಷಂಶೀರ್ ಅಲಿಖಾನ್, ಹಿರಿಯ ವಕೀಲರಾದ ಶ್ರೀನಿವಾಸ ಕಲಾಲ್, ಎಸ್.ಪ್ರಸನ್ನಕುಮಾರ್, ರಾಜಶೇಖರ್, ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ