36 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ಕೃಷಿಗೆ ಸಿದ್ಧತೆ

ಜಿಲ್ಲೆಯಲ್ಲಿ ಶೇ 80 ಮಳೆ ಕ್ಷೀಣ ; ಭತ್ತದ ಕೃಷಿಯಲ್ಲಿ ಗುರಿ ಕಡಿತ

Team Udayavani, Jun 8, 2019, 6:00 AM IST

0406UDTP01

ಉಡುಪಿ: ಕೃಷಿ ಇಲಾಖೆ ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಒಟ್ಟು 36,000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಕೃಷಿ ಮಾಡಲು ಉದ್ದೇಶಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಕೆಲವೇ ದಿನದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಜೂನ್‌ ಎರಡನೇ ವಾರದಿಂದ ಭತ್ತದ ಬೀಜ ಬಿತ್ತನೆ ಕಾರ್ಯ ನಡೆಯಲಿದೆ. ಈಗಾಗಲೇ ಕೆಲವೊಂದು ಪ್ರದೇಶದಲ್ಲಿ ಒಣ ಬೀಜ ಬಿತ್ತನೆ ಆರಂಭವಾಗಿದೆ.

ಕಡಿಮೆ ಬಿತ್ತನೆ ಗುರಿ
ಇಲಾಖೆಯು 2018-19ನೇ ಸಾಲಿನಲ್ಲಿ ಮುಂಗಾರಿನಲ್ಲಿ 44,000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತವನ್ನು ಬೆಳೆಸುವ ಗುರಿ ತಲುಪುವಲ್ಲಿ ವಿಫ‌ಲವಾಗಿದೆ.ಆದರಿಂದ ಈ ಬಾರಿಯಲ್ಲಿ ಗುರಿಯನ್ನು 8,000 ಹೆಕ್ಟೇರ್‌ ಪ್ರದೇಶ ಕಡಿತಗೊಳಿಸಲಾಗಿದೆ.ಪ್ರಸಕ್ತ ಉಡುಪಿ ತಾಲೂಕಿನಲ್ಲಿ 15,500 ಹೆಕ್ಟೇರ್‌, ಕುಂದಾಪುರ ತಾಲೂಕಿನಲ್ಲಿ 14,000 ಹೆಕ್ಟೇರ್‌ ಹಾಗೂ ಕಾರ್ಕಳ ತಾಲೂಕಿನಲ್ಲಿ 6,500 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದೆ.

ಎಂಓ4 ತಳಿಗೆ ಬೇಡಿಕೆ ಹೆಚ್ಚು
ಜಿಲ್ಲೆಯಲ್ಲಿ ಎಂಒ4 ತಳಿ ಹೆಚ್ಚಿನ ಬೇಡಿಕೆಯಿದೆ. ಇಲಾಖೆಯಿಂದ ಈಗಾಗಲೇ 1,900 ಕ್ವಿಂ., ಎಂ16 ತಳಿ 10 ಕ್ವಿಂ., ಜ್ಯೋತಿ ತಳಿ 20 ಕ್ವಿಂ., ಜಯ ತಳಿ 10 ಕ್ವಿಂ. ಸೇರಿದಂತೆ ಒಟ್ಟು 2,950 ಬಿತ್ತನೆ ಬೀಜಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಈಗಾಗಲೇ ಒಟ್ಟು 1,528 ಕ್ವಿಂಟಾಲ್‌ ಭತ್ತದ ಬಿತ್ತನೆ ಬೀಜ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನಿರಿಸಲಾಗಿದೆ.

1,528.75 ಕ್ವಿಂ. ಭತ್ತದ ಬೀಜ ವಿತರಣೆ
ಈವರೆಗೆ 3,448 ಮಂದಿ ರೈತರಿಗೆ 1,528.75 ಕ್ವಿಂ. ಬಿತ್ತನೆ ಬೀಜ ವಿತರಿಸಲಾಗಿದೆ. ಸಾಮಾನ್ಯ ವರ್ಗದವರಿಗೆ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ 8 ರೂ. ಹಾಗೂ ಪ.ಜಾತಿ, ಪಂ.ಕ್ಕೆ 12 ರೂ. ಸಹಾಯಧನ ನೀಡಲಾಗುತ್ತದೆ.ರೈತರು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆಯಬಹುದು. ಎಕರೆಗೆ 25 ಕೆಜಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತದೆ.

ರಸಗೊಬ್ಬರ 8,500 ಟನ್‌ ಬೇಡಿಕೆ
ಜಿಲ್ಲೆಯಲ್ಲಿ ರಸಗೊಬ್ಬರಸ ದಾಸ್ತಾನು ಸಮರ್ಪಕವಾಗಿದೆ. 2019-20ನೇ ಸಾಲಿನಲ್ಲಿ 8,500 ಟನ್‌ ಬೇಡಿಕೆಯಿದೆ. ಮೇ ತಿಂಗಳಲ್ಲಿ 2,300 ಟನ್‌ ರಸಗೊಬ್ಬರ ದಾಸ್ತಾನಾಗಿದೆ. ಅದರಲ್ಲಿ 750 ಟನ್‌ ರಸಗೊಬ್ಬರ ವಿತರಿಸಲಾಗಿದೆ.

ಪರಿಷ್ಕೃತ ದರದಲ್ಲಿ ಖರೀದಿಸಿ
ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರಗಳು ಲಭ್ಯವಿದ್ದು, ಸಂಬಂಧಿತ ರೈತ ಸಂಪರ್ಕ ಕೇಂದ್ರದಲ್ಲಿ ಪಡೆಯಬಹುದು. ರೈತರು ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಖರೀದಿ ಮಾಡುವಾಗ ಪರಿಷ್ಕೃತ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡಿರುವ ಕುರಿತು ಖಚಿತಪಡಿಕೊಳ್ಳಬೇಕು.

ವಾಡಿಕೆಗಿಂತ ಕಡಿಮೆ ಮಳೆ
ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜನವರಿಯಿಂದ ಮೇ 31 ವರೆಗೆ ಜಿಲ್ಲೆಯಲ್ಲಿ 201.6 ಮಿಲಿ ಮೀಟರ್‌ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 20.6 ಮಿ.ಮೀ ಮಳೆಯಾಗಿದೆ. ಶೇ. 80ಮಳೆ ಕ್ಷೀಣಿಸಿದೆ.

ಉತ್ತಮ ಗುಣಮಟ್ಟದ ಬಿತ್ತನೆ
ರೈತರು ಸ್ವಂತ ಬಿತ್ತನೆ ಬೀಜ ಉಪಯೋಗಿಸುವ ಮೊದಲು 1 ಕೆಜಿ ಉಪ್ಪು ಹಾಗೂ 4 ಲೀ. ನೀರಿನ ಪ್ರಮಾಣದ ದ್ರಾವಣ ತಯಾರಿಸಿ, ಅದರಲ್ಲಿ ಬಿತ್ತನೆ ಬೀಜವನ್ನು ಅದ್ದಿ, ಶುದ್ಧ ನೀರಿನಿಂದ ತೊಳೆದು, ಉತ್ತಮ ಗುಣಮಟ್ಟದ ಬಿತ್ತನೆ ಬೀಜವನ್ನು ಆಯ್ಕೆ ಮಾಡಬೇಕು.
-ಸತೀಶ್‌ ಬಿ, ಕೃಷಿ ಅಧಿಕಾರಿ, ಉಡುಪಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.