ಶೀಘ್ರವೇ ಕಾಂಗ್ರೆಸ್ ಪಕ್ಷ ವಿಸರ್ಜನೆ: ಶೆಟ್ಟರ್
Team Udayavani, Jun 8, 2019, 3:04 AM IST
ಹುಬ್ಬಳ್ಳಿ: “ಕಾಂಗ್ರೆಸ್ ಪಕ್ಷದ ಇತ್ತೀಚಿನ ಬೆಳವಣಿಗೆ ನೋಡಿದರೆ ಶೀಘ್ರದಲ್ಲೇ ಪಕ್ಷ ವಿಸರ್ಜನೆಯಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕರ್ನಾಟಕ ಸೇರಿ ತೆಲಂಗಾಣ, ರಾಜಸ್ಥಾನ, ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದಲ್ಲಿ ಕಚ್ಚಾಟ ಶುರುವಾಗಿವೆ. ಕಾಂಗ್ರೆಸ್ನಲ್ಲಿ ಉಳಿಗಾಲವಿಲ್ಲ ಎಂದು ಪಕ್ಷಾಂತರ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ನೋಡಿದರೆ ಕಾಂಗ್ರೆಸ್ ವಿಸರ್ಜನೆಯಾಗುವುದು ಖಚಿತವಾಗಿದೆ. ಮಹಾತ್ಮ ಗಾಂಧಿ ಸ್ವಾತಂತ್ರಾ ನಂತರ ಕಾಂಗ್ರೆಸ್ ವಿಸರ್ಜಿಸುವಂತೆ ಸೂಚಿಸಿದ್ದರು. ಅವರ ಮಾತನ್ನು ಕಾಂಗ್ರೆಸ್ ನಾಯಕರು ಈಗ ಪಾಲನೆ ಮಾಡುತ್ತಿದ್ದಾರೆ’ ಎಂದರು.
ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಂ ಬಾಂಬ್ ಫಿಕ್ಸ್ ಮಾಡಿದ್ದಾರೆ ಎಂದು ಹೇಳಿದ್ದೆ. ಇದೀಗ ಅವರದೇ ಪಕ್ಷದ ನಾಯಕರು ಬಹಿರಂಗವಾಗಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ರೋಷನ್ ಬೇಗ್ ಅವರು ಸಿದ್ದರಾಮಯ್ಯ, ದಿನೇಶ ಗುಂಡೂರಾವ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಬಗ್ಗೆ ತೀರಾ ನಿಕೃಷ್ಟವಾಗಿ ಮಾತನಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗದಂತಹ ದಯನೀಯ ಸ್ಥಿತಿ ಕಾಂಗ್ರೆಸ್ಗೆ ಎದುರಾಗಿದೆ ಎಂದರು.
ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಂಡು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಗ್ರಾಮ ವಾಸ್ತವ್ಯಕ್ಕೆ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ. ಹಿಂದೆ ಮಾಡಿದ್ದ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಜಗಜ್ಜಾಹೀರವಾಗಿದೆ. ಜನರನ್ನು ದಾರಿ ತಪ್ಪಿಸುವುದು ಇವರ ಮೂಲ ಉದ್ದೇಶ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್