ಬೇಸಗೆಯಲ್ಲೂ ಬತ್ತದ ಬರಮೇಲು ಗೌರಿ ತೀರ್ಥ

ಶ್ರೀ ಮಹಾಕಾಳಿ ಕ್ಷೇತ್ರದಲ್ಲಿ ಉಕ್ಕೇರುತ್ತಿರುವ ನೀರು

Team Udayavani, Jun 8, 2019, 6:00 AM IST

g-18

ಬೆಳ್ಳಾರೆ: ಜಲಕ್ಷಾಮದ ಭೀಕರತೆ ಎಲ್ಲೆಲ್ಲೂ ಜನಸಾಮಾನ್ಯರನ್ನು ತಟ್ಟಿದೆ. ಆದರೆ ಐವರ್ನಾಡು ಗ್ರಾಮದ ಬರಮೇಲು ಶ್ರೀ ಮಹಾಕಾಳಿ ಕ್ಷೇತ್ರದಲ್ಲಿ ಉಕ್ಕೇರುತ್ತಿರುವ ಗೌರಿ ತೀರ್ಥದಲ್ಲಿ ನಿರಂತರವಾಗಿ ನೀರು ಹರಿದುಬರುತ್ತಿದೆ. ಬಿರುಬೇಸಗೆಯಲ್ಲೂ ಕಳೆದ 15 ದಿನಗಳಿಂದ ಇಲ್ಲಿ ಜಲಸಾಂದ್ರತೆ ಮತ್ತಷ್ಟೂ ಹೆಚ್ಚಿದ್ದು ಕೂತೂಹಲಕ್ಕೆ ಕಾರಣವಾಗಿದೆ.

ಐವರ್ನಾಡು ಗ್ರಾಮದ ಬರಮೇಲು ಎನ್ನುವಲ್ಲಿ ಉದ್ಭವ ಶ್ರೀ ಮಹಾಕಾಳಿ ಕ್ಷೇತ್ರವಿದೆ. ಸುತ್ತಲೂ ಹಸುರು ಕಾನನದಿಂದ ಕಂಗೊಳಿಸುತ್ತಿರುವ ಈ ಕ್ಷೇತ್ರ ಅತಿ ಪುರಾತನವಾದ ಆದಿಶಕ್ತಿ ಮಹಾಕಾಳಿಯ ದಕ್ಷಿಣದ ಶಕ್ತಿ ಪೀಠವೆಂದು ಪರಿಗಣಿಸಲ್ಪಟ್ಟಿದೆ. ಈ ಕ್ಷೇತ್ರದ ಪಕ್ಕದಲ್ಲೇ ಇರುವ ಗುಡ್ಡದ ತುದಿಯಿಂದ ಕ್ಷೇತ್ರಕ್ಕೆ ನೀರು ಹರಿದು ಬರುತ್ತಿದೆ. ಗುಡ್ಡದ ತುದಿಯು ಕ್ಷೇತ್ರದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿದೆ. ಅಲ್ಲಿಂದ ಪೈಪ್‌ ಮೂಲಕ ನೀರನ್ನು ಕ್ಷೇತ್ರಕ್ಕೆ ಹರಿಸಲಾಗಿದೆ.

ಅತೀ ಶುದ್ಧ ನೀರು
ಗುಡ್ಡದ ತುದಿಯ ಮಣ್ಣಿನ ಅಡಿಯಿಂದ ನೀರು ಉಕ್ಕೇರಿ ಬರುತ್ತಿರುವುದರಿಂದ ಈ ನೀರು ಅತೀ ಶುದ್ಧವಾಗಿದೆ. ಈ ಪರಶುದ್ಧವಾದ ನೀರಧಾರೆ ಕ್ಷೇತ್ರಕ್ಕೆ ಹರಿದು ಬರುತ್ತಿರುವುದರಿಂದ ಇದನ್ನು ಗೌರಿ ತೀರ್ಥವೆಂದು ಹೆಸರಿಸಲಾಗಿದೆ. ಶುದ್ಧ ನೀರಾಗಿರುವ ಕಾರಣಕ್ಕೆ ದೇವಿ ಸಾನ್ನಿಧ್ಯದ ಎದುರಿಗೆ ನೀರು ಬಂದು ಬೀಳುವಂತೆ ವ್ಯವಸ್ಥೆ ಮಾಡಲಾಗಿದೆ.

ಸಾಂದ್ರತೆ ಹೆಚ್ಚಳ
ಮುಂಗಾರು ಪೂರ್ವ ಮಳೆಯೂ ಕೈಕೊಟ್ಟ ಕಾರಣ ಎಲ್ಲೂ ನೀರಿನ ಹರಿವು ಕಾಣ ಸಿಗುತ್ತಿಲ್ಲ ಆದರೆ ಈ ಕ್ಷೇತ್ರದಲ್ಲಿ ಹರಿದು ಬರುವ ಗೌರಿ ತೀರ್ಥದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕಳೆದ 15 ದಿನಗಳಿಂದ ನೀರಿನ ಸಾಂದ್ರತೆ ಹೆಚ್ಚಾಗುತ್ತಿದ್ದು, ದಿನದ 24 ಗಂಟೆಯೂ ಅಂದಾಜು ಅರ್ಧ ಇಂಚಿನಷ್ಟು, ದಿನಕ್ಕೆ 9 ಸಾವಿರ ಲೀಟರ್‌ ನೀರು ಹರಿದು ಬರುತ್ತಿದೆ. ಭಕ್ತರ ಸಂಖ್ಯೆಯೂ ಈಗ ಜಾಸ್ತಿಯಾಗಿದ್ದು, ಪ್ರತಿದಿನ ಭಕ್ತರು ಬಾಟಲಿಗಳಲ್ಲಿ ತೀರ್ಥವನ್ನು ತುಂಬಿಸಿಕೊಂಡು ಹೋಗುತ್ತಿರುವುದುಕಂಡು ಬರುತ್ತಿದೆ.

ಕ್ಷೇತ್ರದ ಕಾರಣಿಕ ಶಕ್ತಿ
ವರ್ಷದ 365 ದಿನವೂ ಇಲ್ಲಿ ನೀರು ಹರಿದು ಬರುತ್ತಿದೆ. ಹಲವು ವರ್ಷದಿಂದ ಈ ನೀರು ಉಕ್ಕೇರಿ ಬರುತ್ತಿರುವುದನ್ನು ಗಮನಿಸಿದ್ದೇನೆ. ಕಳೆದ 15 ದಿನಗಳಿಂದ ನೀರಿನ ಹರಿವು ಹೆಚ್ಚಾಗಿರುವುದು ಶ್ರೀ ಕ್ಷೇತ್ರದ ಕಾರಣಿಕ ಶಕ್ತಿಯೆಂದು ನಂಬಿರುವ ಭಕ್ತರು ಪುಳಕಿತರಾಗಿದ್ದಾರೆ. ಇದರಿಂದ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆಯೂ ಅಧಿಕವಾಗಿದೆ.
– ಕರುಣಾಕರ ಗೌಡ ಬರಮೇಲು ಧರ್ಮರಸು, ಬರಮೇಲು ಕ್ಷೇತ್ರ

ಉಮೇಶ್‌ ಮಣಿಕ್ಕಾರ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.