ನಿವೇಶನ ಮಂಜೂರಾದರೂ ಕಟ್ಟಡವಿಲ್ಲ!

ಸಿಟಿಒ ಗುಡ್ಡೆಯ ಸ್ತ್ರೀಶಕ್ತಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ

Team Udayavani, Jun 8, 2019, 5:50 AM IST

Udayavani Kannada Newspaper

ನಗರ: ಹಲವು ವರ್ಷಗಳಿಂದ ಬಾಡಿಗೆ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ಸ್ವಂತ ಕಟ್ಟಡವಿಲ್ಲ. ಸರಕಾರ ಇಲಾಖೆಗೆ 8.5 ಸೆಂಟ್ಸ್‌ ನಿವೇಶನ ಮುಂಜೂರು ಮಾಡಿದೆ. ಆದರೆ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಆಗಬೇಕಷ್ಟೇ.

ತಾಲೂಕಿನಲ್ಲಿ 370 ಅಂಗನವಾಡಿ ಕೇಂದ್ರಗಳಿವೆ. ಅವುಗಳ ನಿರ್ವಹಣೆ ಜವಾಬ್ದಾರಿಯ ಜತೆಗೆ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮತ್ತು ಅಭಿವೃದ್ಧಿಯ ಹೊಣೆ ಹೊತ್ತಿರುವ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿ ಹಲವು ವರ್ಷಗಳಿಂದ ಬಾಡಿಕೆ ಕಟ್ಟಡವನ್ನೇ ಆಶ್ರಯಿಸಿದ್ದಾರೆ.

ಆರಂಭದಿಂದಲೂ ಬಾಡಿಗೆ
ಇಲಾಖೆ ಮಾಹಿತಿಯ ಪ್ರಕಾರ 1983ರಲ್ಲಿ ಪುತ್ತೂರಿನಲ್ಲಿ ಸಿಡಿಪಿಒ ಕಚೇರಿ ಕಾರ್ಯಾರಂಭ ಮಾಡಿತ್ತು. ತಾ.ಪಂ.ನ ಹಳೆಯ ಕಟ್ಟಡವೊಂದರಲ್ಲಿ ಬಾಡಿಗೆ ನೆಲೆಯಲ್ಲಿ 2015ರ ತನಕ ಕೆಲಸ ಮಾಡಿತು. ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದ್ದರೂ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರು, ಸ್ವಂತ ಕಟ್ಟಡಕ್ಕಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ಇತ್ತೀಚೆಗೆ ಈ ಬೇಡಿಕೆಗೆ ಸ್ಪಂದನೆ ಸಿಕ್ಕಿ, ನಗರದ ಹೊರವಲಯದಲ್ಲಿರುವ ಸಿಟಿಒ ಗುಡ್ಡೆಯಲ್ಲಿರುವ ಕೊರಗ ಸಮುದಾಯ ಭವನದ ಸಮೀಪ 8.5 ಸೆಂಟ್ಸ್‌ ನಿವೇಶನ ಮಂಜೂರಾಗಿದೆ. ಪಹಣಿ ಪತ್ರವೂ ಇಲಾಖೆಯ ಹೆಸರಿನಲ್ಲಿ ಆಗಿದೆ. ಅದರ ಬೆನ್ನಲ್ಲೇ ಕಟ್ಟಡಕ್ಕೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಟ್ಟಡವಾಗುವ ತನಕ ಬಾಡಿಗೆ ಕಚೇರಿಯೇ ಗತಿ ಎನ್ನುವಂತಾಗಿದೆ.

ಈಗ ಸಿಟಿಒ ಗುಡ್ಡೆಯಲ್ಲಿರುವ ಸ್ತ್ರೀಶಕ್ತಿ ಭವನದಲ್ಲಿ ಕಚೇರಿ ಇದೆ. ಹಾಲಿ ಮಂಜೂರಾದ ನಿವೇಶನವೂ ಅದೇ ಪರಿಸರದಲ್ಲಿದೆ. ತಾ.ಪಂ. ಹಳೆಯ ಕಟ್ಟಡ ತೆರವುಗೊಳಿಸಿದ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸುತ್ತಿದ್ದು, ಅದರಲ್ಲೇ ಮತ್ತೆ ಬಾಡಿಗೆ ನೆಲೆಯಲ್ಲಿ ಕಚೇರಿಗೆ ಸ್ಥಳಾವಕಾಶ ಒದಗಿಸುವಂತೆಯೂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೆಲವು ಸಮಯಗಳಿಂದ ಸಿಡಿಪಿಒ ಹುದ್ದೆಯೂ ಖಾಲಿ ಇದ್ದು, ಭಾರತಿ ಜೆ.ಕೆ. ಅವರು ಪ್ರಭಾರ ಸಿಡಿಪಿಒ ಆಗಿದ್ದಾರೆ. 16 ಮೇಲ್ವಿಚಾರಕ ಹುದ್ದೆಗಳಿದ್ದರೂ ಇರುವುದು 12 ಮಂದಿ ಮಾತ್ರ. ಪ್ರಥಮ ದರ್ಜೆ ಸಹಾಯಕರ 6 ಹುದ್ದೆಗಳಿದ್ದು, ಎಲ್ಲವೂ ಖಾಲಿ ಇವೆ. 4 ಮಂದಿ ಕಂಪ್ಯೂಟರ್‌ ಆಪರೇಟರ್ ಹಾಗೂ ಒಬ್ಬರು ವಾಹನ ಚಾಲಕರು ಇದ್ದಾರೆ.

ಹುದ್ದೆಯೂ ಖಾಲಿ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೆಲವು ಸಮಯಗಳಿಂದ ಸಿಡಿಪಿಒ ಹುದ್ದೆಯೂ ಖಾಲಿ ಇದ್ದು, ಭಾರತಿ ಜೆ.ಕೆ. ಅವರು ಪ್ರಭಾರ ಸಿಡಿಪಿಒ ಆಗಿದ್ದಾರೆ. 16 ಮೇಲ್ವಿಚಾರಕ ಹುದ್ದೆಗಳಿದ್ದರೂ ಇರುವುದು 12 ಮಂದಿ ಮಾತ್ರ. ಪ್ರಥಮ ದರ್ಜೆ ಸಹಾಯಕರ 6 ಹುದ್ದೆಗಳಿದ್ದು, ಎಲ್ಲವೂ ಖಾಲಿ ಇವೆ. 4 ಮಂದಿ ಕಂಪ್ಯೂಟರ್‌ ಆಪರೇಟರ್ ಹಾಗೂ ಒಬ್ಬರು ವಾಹನ ಚಾಲಕರು ಇದ್ದಾರೆ.

ಕೇಂದ್ರ ಸ್ಥಳದಲ್ಲೇ ಕಚೇರಿ ಇರಲಿ
ಪ್ರಸ್ತುತ ನಗರದ ಹೊರವಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಇರುವುದರಿಂದ ಕೆಲಸ ಮಾಡುವ ಮಹಿಳೆಯರಿಗೆ ಹಾಗೂ ಕಚೇರಿ ಸೌಲಭ್ಯಗಳಿಗಾಗಿ ಬರುವವರಿಗೆ ಸಮಸ್ಯೆ ಆಗುತ್ತಿದೆ. ಈಗ ಲಭಿಸಿದ ನಿವೇಶನವೂ ನಗರದ ಹೊರವಲಯದಲ್ಲೇ ಇರುವುದರಿಂದ ಅಲ್ಲಿ ಕಟ್ಟಡ ನಿರ್ಮಾಣ ಮಾಡಿದರೂ ಸಮಸ್ಯೆಯೇ. ಕೇಂದ್ರ ಸ್ಥಳದಲ್ಲಿಯೇ ಕಚೇರಿ ಹೆಚ್ಚು ಅನುಕೂಲವಾಗುತ್ತದೆ
– ಶಾಂತಿ ಹೆಗ್ಡೆ, ನಿವೃತ್ತ ಸಿಡಿಪಿಒ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.