“ನಲಿ-ಕಲಿ’ಯಲ್ಲೂ ಪರಿಣಾಮಕಾರಿ ಇಂಗ್ಲಿಷ್‌ ಬೋಧನೆ

ಆಂಗ್ಲ ಮಾಧ್ಯಮ ಕೈತಪ್ಪುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸಾಂತ್ವನ ಸೂತ್ರ

Team Udayavani, Jun 8, 2019, 5:59 AM IST

KAN

ಮಂಗಳೂರು: ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮದ ಜತೆಗೆ ಅವುಗಳ ಕನ್ನಡ ಮಾಧ್ಯಮ ತರಗತಿಗಳಲ್ಲೂ “ನಲಿ-ಕಲಿ’ ಕಲಿಕಾ ವ್ಯವಸ್ಥೆಯಡಿ ಇಂಗ್ಲಿಷ್‌ ಬೋಧನೆಯನ್ನು ಪರಿಣಾಮಕಾರಿಯಾಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಒಂದು ಸಾವಿರ ಶಾಲೆ ಗಳಲ್ಲಿನ ಆಂಗ್ಲ ಮಾಧ್ಯಮಕ್ಕೆ ಬೇಡಿಕೆ ಹೆಚ್ಚಿದೆ. ಆದರೆ 30ಮಕ್ಕಳಿಗೆ ಸಂಖ್ಯೆ ಮಿತಿಗೊಳಿಸಿರುವ ಕಾರಣ ಹೆತ್ತವರಿಗೆ ನಿರಾಶೆ ಯಾಗಿದೆ. ಹೀಗಾಗಿ “ನಲಿ-ಕಲಿ’ಯಲ್ಲಿ ಆಟ- ಚಟುವಟಿಕೆಗಳ ಮೂಲಕ ಇಂಗ್ಲಿಷ್‌ ಕಲಿಸಲು ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ 43 ಸಾವಿರ ಸರಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇಂಗ್ಲಿಷ್‌ ಮಾಧ್ಯಮ ಆರಂಭವಾದ 1 ಸಾವಿರ ಶಾಲೆಗಳ ಕನ್ನಡ ಮಾಧ್ಯಮದ 1ರಿಂದ 3ನೇ ತರಗತಿಗಳಿಗೆ “ನಲಿ-ಕಲಿ’ ಇಂಗ್ಲಿಷ್‌ ಪಠ್ಯದ ಜತೆಗೆ ಆ್ಯಕ್ಟಿವಿಟಿ ಕಾರ್ಡ್‌ ಕೂಡ ನೀಡಲಾಗುತ್ತದೆ. ಇದರ ಯಶಸ್ಸನ್ನು ಅಧರಿಸಿ ಮುಂದಿನ ವರ್ಷ ಎಲ್ಲ ಶಾಲೆಗಳಿಗೆ ವಿಸ್ತರಿಸುವ ಯೋಜನೆ ಇಲಾಖೆ ಹೊಂದಿದೆ.

ಶಿಕ್ಷಕರಿಗೆ ತರಬೇತಿ
ಆಯ್ಕೆಯಾದ ಶಿಕ್ಷಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿದ್ದು, ಅವರು ಚಟುವಟಿಕೆ ಆಧಾರಿತ ಇಂಗ್ಲಿಷ್‌ ಕಲಿಸುವರು. ಕೆಲವೆಡೆ 4 ಮತ್ತು 5ನೇ ತರಗತಿಯ ಆಂಗ್ಲ ಶಿಕ್ಷಕರನ್ನು ಇದಕ್ಕೆ ಗೊತ್ತುಪಡಿಸಲಾಗಿದೆ ಎನ್ನುತ್ತಾರೆ ಸರ್ವ ಶಿಕ್ಷಾ ಅಭಿಯಾನದ ಪ್ರಮುಖರು.

ಏನಿದು ಆ್ಯಕ್ಟಿವಿಟಿ ಕಾರ್ಡ್‌?
ಇದು ಚಟುವಟಿಕೆ ಆಧಾರಿತ ಇಂಗ್ಲಿಷ್‌ ಕಲಿಕೆ ವಿಧಾನ. ಕಾರ್ಡ್‌ ಎಂಬುದು ಹೆಸರಷ್ಟೆ, 1ರಿಂದ 3ನೇ ತರಗತಿಗಳ ಮಕ್ಕಳನ್ನು ತಲಾ 30 ವಿದ್ಯಾರ್ಥಿಗಳ ಯೂನಿಟ್‌ಗಳಾಗಿ ವಿಂಗಡಿಸಲಾಗುತ್ತದೆ. ಪ್ರತೀ ಯೂನಿಟ್‌ಗೆ ಒಂದರಂತೆ ಕಲಿಕಾ ಸಾಮಗ್ರಿ ಮತ್ತು ಕಲಿಕಾ ವಿಧಾನ ಒಳಗೊಂಡ ಒಂದು ಸೆಟ್‌ ಆ್ಯಕ್ಟಿವಿಟಿ ಕಾರ್ಡ್‌ ನೀಡಲಾಗುತ್ತದೆ. ಇದರಲ್ಲಿರುವ ಸೂಚನೆಗಳ ಅನುಸಾರ ಶಿಕ್ಷಕರು ಬೋಧಿಸಬೇಕು. ಮೊದಲ 3 ತಿಂಗಳಲ್ಲಿ ಪದ, ಉಚ್ಚಾರ, ಆಲಿಸುವಿಕೆ, ಸಂಭಾಷಣೆ, ಬರವಣಿಗೆ ಸಂಬಂಧಿತ ಆಟಗಳು ಮೂಲಕ ಇಂಗ್ಲಿಷ್‌ ಕಲಿಕೆ; ಓದುವುದು, ಬರವಣಿಗೆಗೆ ಒತ್ತು ನೀಡಲಾಗುತ್ತದೆ.

ಪ್ರಸಕ್ತ ವರ್ಷವೇ ಪ್ರಾರಂಭ
ಸರಕಾರಿ ಶಾಲೆಗಳಲ್ಲಿ ಕನ್ನಡದಷ್ಟೇ ಇಂಗ್ಲಿಷ್‌ ಭಾಷೆಗೂ ಒತ್ತು ನೀಡಲು ಸರಕಾರ ಸೂಚಿಸಿದೆ. ಆಂಗ್ಲ ಮಾಧ್ಯಮ ಆರಂಭ ವಾದ 1 ಸಾವಿರ ಶಾಲೆಗಳಲ್ಲಿ “ನಲಿ-ಕಲಿ’ ವ್ಯವಸ್ಥೆಯಡಿ ಪರಿಣಾಮ ಕಾರಿ ಆಂಗ್ಲ ಶಿಕ್ಷಣ ನೀಡಲಾಗುವುದು. ದಾಖಲಾತಿ ಪೂರ್ಣಗೊಂಡ ಬಳಿಕ ಮಕ್ಕಳ ಸಂಖ್ಯೆ ಆಧರಿಸಿ ಆ್ಯಕ್ಟಿವಿಟಿ ಕಾರ್ಡ್‌ ಹಂಚಲಾಗುತ್ತದೆ.
-ಗುಣವತಿ,
ಜೂನಿಯರ್‌ ಪ್ರೋಗ್ರಾಮ್‌ ಆಫೀಸರ್‌
ನಲಿಕಲಿ ಯೋಜನೆ

ಪರಿಣಾಮಕಾರಿ ಅಧ್ಯಯನ
“ನಲಿ-ಕಲಿ’ಯಲ್ಲಿ ಪರಿಚಯ ಭಾಷೆಯಾಗಿ ಇಂಗ್ಲಿಷ್‌ ಬೋಧನೆ ಇತ್ತು. ಆದರೆ ಇಂಗ್ಲಿಷ್‌ ಮಾಧ್ಯಮ ಆರಂಭವಾದ ಕಾರಣ ದಾಖಲಾತಿ ಹೆಚ್ಚುತ್ತಿದೆ. ಅಂತಹ ಮಕ್ಕಳೂ ಇಂಗ್ಲಿಷನ್ನು ಕಲಿಯಲೆಂದು ಚಟುವಟಿಕೆ ಆಧಾರಿತ ಬೋಧನೆ ಆರಂಭವಾಗುತ್ತಿದೆ.
ವೈ. ಶಿವರಾಮಯ್ಯ
ಡಿಡಿಪಿಐ ದ.ಕ. 

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.