ಸೋಲಿನಿಂದ ನಾನು ಕಂಗೆಟ್ಟಿಲ್ಲ

ಮತ್ತೆ ಪಕ್ಷವನ್ನು ಕಟ್ಟುತ್ತೇನೆ ಎಂದ ಎಚ್‌ಡಿಡಿ

Team Udayavani, Jun 8, 2019, 6:00 AM IST

g-42

ಅಭಿನಂದನಾ ಸಮಾರಂಭದಲ್ಲಿ ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಾಯಿತು ಎಂದು ಮನೆಯಲ್ಲಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಆರೋಗ್ಯ ಸರಿಯಿಲ್ಲ. ಆದರೂ ಬಂದಿದ್ದೇನೆ. ಪಕ್ಷದ ಆರೋಗ್ಯ ಸರಿ ಮಾಡುವುದು ನನ್ನ ಕೆಲಸ ಎಂದು ತಿಳಿಸಿದರು.

ಪಕ್ಷ ಸಂಘಟನೆಗೆ ವಯಸ್ಸು ಮುಖ್ಯವಲ್ಲ. ಪಕ್ಷ ಕಟ್ಟೋ ಶಕ್ತಿ ನನಗೆ ಇನ್ನೂ ಇದೆ. ಜೆಡಿಎಸ್‌ಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಲ್ಲಿ 579 ಸ್ಥಾನ ಬಂದಿದೆ. ಅಷ್ಟು ಸ್ಥಾನ ಗೆದ್ದು ನೀವೆಲ್ಲಾ ನಮ್ಮ ಪಕ್ಷದ ಗೌರವ ಕಾಪಾಡಿದ್ದೀರಿ. ನಿಮ್ಮ ಜತೆ ಸೇರಿ ಮತ್ತೆ ಪಕ್ಷ ಕಟ್ಟುತ್ತೇನೆ ಎಂದರು.

ಲೋಕಸಭೆ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಸ್ಥಾನ ಗೆದ್ದದ್ದು ನರೇಂದ್ರಮೋದಿ- ಅಮಿತ್‌ ಶಾ ಚಾಣಾ ಕ್ಷತನ ಅಂತ ನಾನು ಹೇಳಲ್ಲ. ಜನ ಬಿಜೆಪಿಯವರಿಗೆ ಮತ ಕೊಟ್ಟಿ ದ್ದಾರೆ ಅಂತಷ್ಟೇ ಹೇಳಬಲ್ಲೆ. ನಾನು ತುಮ ಕೂರು ಸೋಲು ಒಪ್ಪಿಕೊಂಡಿದ್ದೇನೆ. ನನಗೆ ಸೋಲು ಹೊಸದಲ್ಲ . ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ತಲಾ ಒಂದು ಸ್ಥಾನ ಬಂದಿದೆ. ಆದರೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡನೇ ಸ್ಥಾನ ಗಳಿಸಿದೆ.

ಇದನ್ನು ಕಾರ್ಯಕರ್ತರು ಹಾಗೂ ಮುಖಂಡರು ತಿಳಿದುಕೊಳ್ಳಬೇಕು. ನಮ್ಮ ಪಕ್ಷ ಯಾರಿಂ ದಲೂ ಮುಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಪಕ್ಷದಲ್ಲಿರುವವರು ಯಾರೇ ಆಗಿರಲಿ, ಕುರುಬ, ಒಕ್ಕಲಿಗರ, ಲಿಂಗಾಯಿತ ಸೇರಿ ಯಾವುದೇ ಸಮುದಾಯಕ್ಕೆ ಸೇರಿದ್ದರೂ ಪಕ್ಷಕ್ಕೆ ನಿಷ್ಠರಾಗಿರಿ. ಲಿಂಗಾಯಿತ ಸಮುದಾಯಕ್ಕೆ ನಾನು ಕೊಟ್ಟಷ್ಟು ಅವಕಾಶ ಯಾರೂ ಕೊಟ್ಟಿಲ್ಲ. ಇಷ್ಟಾದರೂ ಪಕ್ಷಕ್ಕೆ ಭವಿಷ್ಯವಿದೆ. ರಾಜ್ಯ ಸರ್ಕಾರದಿಂದ ಎಲ್ಲ ವರ್ಗಗಳಿಗೂ 10 ರಿಂದ 15 ಕೋಟಿ ರೂ. ಅನುದಾನ ಕೊಡಿ ಎಂದು ಹೇಳಿದರು. 17 ರಾಜ್ಯಗಳಲ್ಲಿ ಕಾಂಗ್ರೆಸ್‌ ಇಲ್ಲ. ಮೈತ್ರಿ ಸರ್ಕಾರ ಮಾಡಿದ್ದರಿಂದ ಒಂದು ಸ್ಥಾನ ಬಂದಿದೆ ಅಂತಾರೆ. ಕಾಂಗ್ರೆಸ್‌ನವರು ಅನ್ಯಾಯ ಆಗಿದೆ ಅಂತಾರೆ, ವಿಶ್ಲೇಷಣೆ ಮಾಡಲಿ ಬಿಡಿ ನಾನು ಆ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ನೀಡಿದರು. ನಾನು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ಕುಮಾರಸ್ವಾಮಿ ಸರ್ಕಾರದ ಜವಾಬ್ದಾರಿ ನಿಭಾಯಿಸಲಿದ್ದಾರೆ. ಪಕ್ಷ ಕಟ್ಟುವುದು ನನ್ನ ಜವಾಬ್ದಾರಿ, ಸರ್ಕಾರ ಉಳಿಸಿಕೊಳ್ಳುವುದು ನಿನ್ನ ಜವಾಬ್ದಾರಿ ಎಂದು ವೇದಿಕೆಯಲ್ಲಿದ್ದ ಕುಮಾರಸ್ವಾಮಿಯವರತ್ತ ನೋಡಿ ಹೇಳಿದರು. ನಿಖೀಲ್ ಚುನಾವಣೆಗೆ ಸಿದ್ದರಾಗಿ ಅಂತ ಹೇಳಿಲ್ಲ. ಸರ್ಕಾರ ಸುಭದ್ರವಾಗಿ ನಡೆಯುತ್ತದೆ. ಪಕ್ಷ ಸಂಘಟನೆ ಬಗ್ಗೆಯಷ್ಟೇ ಹೇಳಿದ್ದು. ಮಾಧ್ಯಮದವರು ಸರ್ಕಾರ ಎಷ್ಟು ದಿನ ಉಳಿಯಲು ಬಿಡ್ತಾರೆ ನೋಡೋಣ ಎಂದು ಹೇಳಿದರು.

ಸಿಎಂಗೆ ಹಿಂಸೆ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದ ದಿನದಿಂದ ಕುಮಾರಸ್ವಾಮಿಯವರಿಗೆ ಎಷ್ಟೊಂದು ಹಿಂಸೆ ಕೊಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ ವಿರುದ್ಧವೂ ಬೇಸರ ಹೊರ ಹಾಕಿದರು. ನಮ್ಮ ಪಕ್ಷದಲ್ಲಿ ತಿಂದು ಬೆಳೆದವರೇ ನಮಗೆ ಉಪದೇಶ ಮಾಡ್ತಾರೆ ಎಂದು ಪರೋಕ್ಷವಾಗಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿ ಟೀಕೆ ಮಾಡುತ್ತಿರುವವರ ವಿರುದ್ಧ ಹರಿಹಾಯ್ದರು.

ವಿಶ್ವನಾಥ್‌ ಗೈರು

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್. ವಿಶ್ವನಾಥ್‌ ಅಭಿನಂದನಾ ಸಮಾರಂಭಕ್ಕೆ ಬಂದಿರಲಿಲ್ಲ. ಆದರೆ, ನಿಖೀಲ್ಕುಮಾರಸ್ವಾಮಿ ಬಂದಿದ್ದರು. ವೇದಿಕೆ ಮೇಲೆ ಕೂರದೆ ಮುಂಭಾಗದಲ್ಲಿ ಕಾರ್ಯಕರ್ತರ ನಡುವೆ ಕುರ್ಚಿಯಲ್ಲಿ ಕುಳಿತರು. ವೇದಿಕೆಗೆ ಬರುವಂತೆ ಮುಖಂಡರು ಹೇಳಿದರೂ ಬರಲಿಲ್ಲ.

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.