ಮಳೆಗಾಲಕ್ಕೂ ಮುನ್ನ ಸಾಂಕ್ರಾಮಿಕ ರೋಗ ಭೀತಿ
Team Udayavani, Jun 8, 2019, 9:34 AM IST
ಧಾರವಾಡ: ಮಳೆಗಾಲದ ಹೊಸ್ತಿಲಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗಿದೆ. ಬಿಸಿಲಿನ ಹೊಡೆತಕ್ಕೆ ಕಾವೇರಿರುವ ಭೂಮಿ ಆಗಾಗ ಸುರಿಯುತ್ತಿರುವ ಮಳೆಗೆ ತಣ್ಣಗಾಗುತ್ತಿದ್ದರೂ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಇದೇ ಪ್ರಶಸ್ತ ಸಮಯವಾಗಿದೆ.
ಕುಡಿಯುವ ನೀರಿನ ಪೈಪ್ಲೈನ್ ಒಡೆದು ಚರಂಡಿ ನೀರು ಸೇರುವಿಕೆ, ಪರಿಸರದಲ್ಲಿ ಸ್ವಚ್ಛತೆ ಕೊರತೆ, ತಾಜ್ಯ ನಿರ್ವಹಣೆ ಕೊರತೆ, ಗ್ರಾಮೀಣ ಪ್ರದೇಶದಲ್ಲಿನ ಬಯಲು ಶೌಚಾಲಯ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತಿದೆ.
ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಹಾಗೂ ಪಾಲಿಕೆ ಲೋಕಸಭಾ ಚುನಾವಣಾ ಕಾರ್ಯದಲ್ಲಿ ಮಗ್ನಗೊಂಡಿತ್ತು. ಫಾಗಿಂಗ್ ಮಾಡುವ ಕಾರ್ಯಕ್ಕೂ ಪಾಲಿಕೆ ಕೊಕ್ಕೆ ಹಾಕಿತ್ತು. ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮುಖ್ಯ ಕಾರಣವಾಗಿದ್ದು, ಈವರೆಗೂ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಸದ್ಯ ಚುನಾವಣೆ ಕಾರ್ಯ ಮುಗಿದಿದ್ದು, ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮೊದಲೇ ಪಾಲಿಕೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬುದು ಜನಾಗ್ರಹವಾಗಿದೆ.
ನಗರದಲ್ಲಿಯೇ ಹೆಚ್ಚು: ಜೂ.7ರಂದು ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಅನ್ವಯ ಜಿಲ್ಲೆಯಲ್ಲಿ 2019ರ ಜನೇವರಿಯಿಂದ ಜೂ. 7ರ ವರೆಗೆ ಮಲೇರಿಯಾ ರೋಗಕ್ಕೆ 4 ಜನ ತುತ್ತಾಗಿದ್ದರೆ ಡೆಂಘೀ 7, ಚಿಕುನ್ಗುನ್ಯಾ 8 ಜನರಲ್ಲಿ ಪತ್ತೆ ಆಗಿದೆ. ಸೂಕ್ತ ಚಿಕಿತ್ಸೆ ಲಭಿಸಿದ ಕಾರಣ ಯಾರೂ ಮೃತಪಟ್ಟಿಲ್ಲ. ಗ್ರಾಮೀಣಕ್ಕಿಂತ ನಗರ ಪ್ರದೇಶದಲ್ಲಿಯೇ ಹೆಚ್ಚು ಸಾಂಕ್ರಾಮಿಕ ರೋಗಗಳು ಪ್ರತಿವರ್ಷದಂತೆ ಈ ಸಲವೂ ಕಂಡು ಬಂದಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು