ಮಳೆಗಾಲಕ್ಕೂ ಮುನ್ನ ಸಾಂಕ್ರಾಮಿಕ ರೋಗ ಭೀತಿ


Team Udayavani, Jun 8, 2019, 9:34 AM IST

hubali-tdy-1..

ಧಾರವಾಡ: ಮಳೆಗಾಲದ ಹೊಸ್ತಿಲಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗಿದೆ. ಬಿಸಿಲಿನ ಹೊಡೆತಕ್ಕೆ ಕಾವೇರಿರುವ ಭೂಮಿ ಆಗಾಗ ಸುರಿಯುತ್ತಿರುವ ಮಳೆಗೆ ತಣ್ಣಗಾಗುತ್ತಿದ್ದರೂ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಇದೇ ಪ್ರಶಸ್ತ ಸಮಯವಾಗಿದೆ.

ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಚರಂಡಿ ನೀರು ಸೇರುವಿಕೆ, ಪರಿಸರದಲ್ಲಿ ಸ್ವಚ್ಛತೆ ಕೊರತೆ, ತಾಜ್ಯ ನಿರ್ವಹಣೆ ಕೊರತೆ, ಗ್ರಾಮೀಣ ಪ್ರದೇಶದಲ್ಲಿನ ಬಯಲು ಶೌಚಾಲಯ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತಿದೆ.

ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಹಾಗೂ ಪಾಲಿಕೆ ಲೋಕಸಭಾ ಚುನಾವಣಾ ಕಾರ್ಯದಲ್ಲಿ ಮಗ್ನಗೊಂಡಿತ್ತು. ಫಾಗಿಂಗ್‌ ಮಾಡುವ ಕಾರ್ಯಕ್ಕೂ ಪಾಲಿಕೆ ಕೊಕ್ಕೆ ಹಾಕಿತ್ತು. ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮುಖ್ಯ ಕಾರಣವಾಗಿದ್ದು, ಈವರೆಗೂ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಸದ್ಯ ಚುನಾವಣೆ ಕಾರ್ಯ ಮುಗಿದಿದ್ದು, ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮೊದಲೇ ಪಾಲಿಕೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬುದು ಜನಾಗ್ರಹವಾಗಿದೆ.

ನಗರದಲ್ಲಿಯೇ ಹೆಚ್ಚು: ಜೂ.7ರಂದು ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಅನ್ವಯ ಜಿಲ್ಲೆಯಲ್ಲಿ 2019ರ ಜನೇವರಿಯಿಂದ ಜೂ. 7ರ ವರೆಗೆ ಮಲೇರಿಯಾ ರೋಗಕ್ಕೆ 4 ಜನ ತುತ್ತಾಗಿದ್ದರೆ ಡೆಂಘೀ 7, ಚಿಕುನ್‌ಗುನ್ಯಾ 8 ಜನರಲ್ಲಿ ಪತ್ತೆ ಆಗಿದೆ. ಸೂಕ್ತ ಚಿಕಿತ್ಸೆ ಲಭಿಸಿದ ಕಾರಣ ಯಾರೂ ಮೃತಪಟ್ಟಿಲ್ಲ. ಗ್ರಾಮೀಣಕ್ಕಿಂತ ನಗರ ಪ್ರದೇಶದಲ್ಲಿಯೇ ಹೆಚ್ಚು ಸಾಂಕ್ರಾಮಿಕ ರೋಗಗಳು ಪ್ರತಿವರ್ಷದಂತೆ ಈ ಸಲವೂ ಕಂಡು ಬಂದಿವೆ

ಮಲೇರಿಯಾ-ಡೆಂಘೀ ಆತಂಕ:
2010ರಲ್ಲಿ 309 ಜನರಲ್ಲಿ ಕಾಣಿಸಿಕೊಂಡಿದ್ದ ಮಲೇರಿಯಾ 2018ರಲ್ಲಿ 25 ಜನರಲ್ಲಿ ಕಾಣಿಸಿಕೊಂಡಿತ್ತು. ಈ ವರ್ಷದ ಐದು ತಿಂಗಳಲ್ಲಿ ಹುಬ್ಬಳ್ಳಿ ನಗರದಲ್ಲಿ 1 ಹಾಗೂ ನವಲಗುಂದದಲ್ಲಿ 3 ಜನರಲ್ಲಿ ಕಾಣಸಿಕೊಂಡಿದೆ. 2017ರಲ್ಲಿ 172 ಜನರಲ್ಲಿ ಕಾಣಸಿಕೊಂಡು ಆತಂಕಕ್ಕೆ ಕಾರಣವಾಗಿದ್ದ ಡೆಂಘೀ ಆಗ 3 ಜನರನ್ನು ಬಲಿ ಪಡೆದಿತ್ತು. ಈ ಪೈಕಿ ಧಾರವಾಡ ನಗರದಲ್ಲಿ ಇಬ್ಬರು ಹಾಗೂ ಕುಂದಗೋಳದಲ್ಲಿ ಒಬ್ಬ ವ್ಯಕ್ತಿ ಡೆಂಘೀಗೆ ಮೃತಪಟ್ಟಿದ್ದರು. 2018ರಲ್ಲಿ 112 ಜನರಲ್ಲಿ ಕಾಣಸಿಕೊಂಡಿದ್ದ ಡೆಂಘೀ ಹುಬ್ಬಳ್ಳಿ ನಗರದಲ್ಲಿ 55 ಹಾಗೂ ಧಾರವಾಡ ನಗರದಲ್ಲಿ 21 ಜನರಲ್ಲಿ ಕಾಣಿಸಿಕೊಂಡಿತ್ತು. ಈ ವರ್ಷದ ಐದು ತಿಂಗಳಲ್ಲಿ ಹುಬ್ಬಳ್ಳಿ ನಗರದಲ್ಲಿಯೇ ಆರು ಜನರು ಡೆಂಘೀಗೆ ತುತ್ತಾಗಿದ್ದರೆ ಧಾರವಾಡ ನಗರದಲ್ಲಿ ಒಬ್ಬರಲ್ಲಿ ಕಾಣಿಸಿಕೊಂಡಿದೆ.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಾ ಇದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಮ್ಮ ವ್ಯಾಪ್ತಿಗೆ ಬರದು. ಆದರೆ ಪಾಲಿಕೆಯೊಂದಿಗೆ ಸಮನ್ವತೆ ಇದ್ದು, ಅವಳಿ ನಗರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆಯಲಾಗುವುದು.•ಆರ್‌.ಎನ್‌. ದೊಡ್ಡಮನಿ, ಜಿಲ್ಲಾ ಆರೋಗ್ಯಾಧಿಕಾರಿ
ಆರ್ಭಟಿಸಿ ತಣ್ಣಗಾದ ಚಿಕೂನ್‌ಗುನ್ಯಾ:
2009ರಲ್ಲಿ 308 ಜನರಲ್ಲಿ ಕಾಣಿಸಿಕೊಂಡು ಆರ್ಭಟಿಸಿದ್ದ ಚಿಕೂನಗುನ್ಯಾ 2017ರಲ್ಲಿ 11ಜನರಲ್ಲಿ ಕಾಣಿಸಿಕೊಂಡು ತಣ್ಣಗಾಗಿತ್ತು. ಆದರೆ 2018ರಲ್ಲಿ ವಿಧಾನಸಭಾ ಚುನಾವಣೆಯ ಗುಂಗಿನಲ್ಲಿ ಜಿಲ್ಲಾಡಳಿತ ಮಗ್ನರಾಗಿದ್ದರಿಂದ 85 ಜನರಲ್ಲಿ ಕಾಣಿಸಿಕೊಂಡಿತ್ತು. ಈ ಪೈಕಿ ಹುಬ್ಬಳ್ಳಿ ನಗರದಲ್ಲಿ 30, ಧಾರವಾಡ ನಗರದಲ್ಲಿಯೇ 21 ಜನರು ತುತ್ತಾಗಿದ್ದರು. ಈಗ ಐದು ತಿಂಗಳಲ್ಲಿ 8 ಜನರಲ್ಲಿ ಚಿಕೂನ್‌ಗುನ್ಯಾ ಕಂಡುಬಂದಿದೆ. ಧಾರವಾಡ, ಹುಬ್ಬಳ್ಳಿ, ಕಲಘಟಗಿಯಲ್ಲಿ ತಲಾ 2, ನವಲಗುಂದ ಹಾಗೂ ಹುಬ್ಬಳ್ಳಿ ನಗರದಲ್ಲಿ ತಲಾ ಒಬ್ಬರಲ್ಲಿ ಕಾಣಿಸಿಕೊಂಡಿದೆ. ಇನ್ನೂ ಮೆದುಳು ಜ್ವರಕ್ಕೆ 2018ರಲ್ಲಿ ಒಬ್ಬ ಬಲಿಯಾಗಿದ್ದು, ಈ ವರ್ಷದಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಿಲ್ಲ.
ಹೆಚ್ಚಾಗುತ್ತಾ ಇದೆ ಕಜ್ಜಿಯ ಕಿರಿಕಿರಿ:
ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಫೋಗಲ್, ಕಜ್ಜಿಯಂತಹ ಚರ್ಮ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಈ ಪೈಕಿ ಕಜ್ಜಿ ರೋಗಕ್ಕೆ ತುತ್ತಾದ ಜನರೇ ಹೆಚ್ಚು. ತುರಿಕೆ ಶಮನಕ್ಕಾಗಿ ಆಸ್ಪತ್ರೆಗಳ ಬಾಗಿಲು ತಟ್ಟುವಂತಾಗಿದೆ. ಇದಕ್ಕೆ ಈಗ ನೀಡುತ್ತಿರುವ ಔಷಧಿಯೂ ಕೆಲ ರೋಗಿಗಳಿಗೆ ನಾಟುತ್ತಿಲ್ಲ. ಔಷಧಿಗಳ ನಿಯಂತ್ರಣಕ್ಕೂ ಬಾರದ ಕಜ್ಜಿ ವೈರಾಣು ತನ್ನ ಹರಡುವಿಕೆ ಸಾಮರ್ಥಯ ಹೆಚ್ಚಿಸಿಕೊಂಡಿರುವ ಕಾರಣ ರೋಗಿಗಳು ಪರದಾಡುವಂತಾಗಿದೆ.
•ಶಶಿಧರ ಬುದ್ನಿ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.