ಮಳೆಗೆ ನೆನೆಯುತ್ತಿರುವ “ಬಿಳಿಗಿರಿ ರಂಗನಾಥ’


Team Udayavani, Jun 9, 2019, 3:00 AM IST

malege

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಬಿಳಿಗಿರಿರಂಗನಬೆಟ್ಟದಲ್ಲಿರುವ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ಇತ್ತೀಚಿಗೆ ಸುರಿದ ಮಳೆಯಿಂದ ದೇಗುಲದ ಮಾಳಿಗೆ ಸೋರುತ್ತಿದೆ.

ಆಮೆಗತಿ ಕಾಮಗಾರಿ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಶಿಥಿಲಗೊಂಡಿರುವ ನೆಪವೊಡ್ಡಿ 2017 ಮಾರ್ಚ್‌ನಲ್ಲಿ ಪುರಾತತ್ವ ಇಲಾಖೆ ವತಿಯಿಂದ 2.40 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ಆರಂಭಿಸಲಾಗಿತ್ತು. ಶಿವಮೊಗ್ಗದ ಪರಂಪರಾ ಕನ್ಸ್‌ಸ್ಟ್ರಕ್ಷನ್‌ ವತಿಯಿಂದ ಕಾಮಗಾರಿ ಆರಂಭಿಸಲಾಗಿತ್ತು. 20 ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈಗಾಗಲೇ ಶೇ.80 ಕಾಮಗಾರಿ ಮುಗಿಸಲಾಗಿದೆ ಎಂದು ಇಲಾಖೆ ಹೇಳುತ್ತಿದೆ. ಆದರೆ ಕಾಮಗಾರಿ ಇನ್ನೂ ಅಪೂರ್ಣವಾಗಿದ್ದು 2 ವರ್ಷ ಮುಗಿದಿದ್ದರೂ ಪೂರ್ಣಗೊಂಡಿಲ್ಲ.

ಚಾವಣಿ ಸೋರುತ್ತಿದೆ: ದೇಗುಲದ ಚಾವಣಿ ಇತ್ತೀಚೆಗೆ ಸುರಿದ ಮಳೆಯಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದ ದೇಗುಲದ ತುಂಬೆಲ್ಲಾ ನೀರು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಕಾಮಗಾರಿ ಕಳೆದ 5-6 ತಿಂಗಳಿನಿಂದಲೂ ನಿಂತು ಹೋಗಿದೆ. ಇದಕ್ಕೆ ಅನುದಾನದ ಕೊರತೆ ಇರುವುದೇ ಕಾರಣ ಎಂಬ ನೆಪವನ್ನು ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಭಕ್ತರ ಪರದಾಟ: ದೇಗುಲ ಜೀರ್ಣೋದ್ಧಾರ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗದಲ್ಲಿ ಬಾಲಾಲಯ ಮಾಡಿ ಮರದಿಂದ ದೇವರ ಮೂರ್ತಿಯನ್ನು ಕೆತ್ತಿ ಇದಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ. ಈ ಸ್ಥಳ ಕಿರಿದಾಗಿದೆ. ಆದರೂ, ಶನಿವಾರ ಹಾಗೂ ರಜಾ ದಿನಗಳಂದು ಭಕ್ತರ ದಂಡು ಆಗಮಿಸುತ್ತದೆ. ಕಿಷ್ಕಿಂದೆಯಂತಿರುವ ಈ ಸ್ಥಳದಲ್ಲಿ ಕಾಲಿಡಲೂ ಪರದಾಡುವ ಪರಿಸ್ಥಿತಿಯಿದೆ. ದೇವಸ್ಥಾನ ಜೀರ್ಣೋದ್ಧಾರ ಮಾಡಬೇಕಾದ ಇಲಾಖೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಅವ್ಯವಸ್ಥೆಗೆ ಕಾರಣವೆಂದು ದೇಗುಲದ ಮಾಜಿ ಧರ್ಮದರ್ಶಿ ಎನ್‌.ದೊರೆಸ್ವಾಮಿ ಆರೋಪಿಸಿದ್ದಾರೆ.

ಶಾಸಕರ ನಿರ್ಲಕ್ಷ್ಯ: ಸ್ಥಳೀಯ ಶಾಸಕ ಎನ್‌.ಮಹೇಶ್‌ ಆರಂಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಶೀಘ್ರ ಆರಂಭಿಸಿ ಪೂರ್ಣಗೊಳಿಸುವ ಭರವಸೆಯನ್ನು ಇಲ್ಲಿ ನಡೆದ ಅನೇಕ ಸಭೆ ಸಮಾರಂಭಗಳಲ್ಲಿ ನೀಡಿದ್ದರು. ಅಲ್ಲದೆ, ರಥ ಪುನರ್‌ ನಿರ್ಮಿಸುವ ಕೆಲಸಕ್ಕೂ ಚುರುಕು ನೀಡಲಾಗುವುದು ಎಂದಿದ್ದರು. ಆದರೆ ಇನ್ನೂ, ಭರವಸೆ ಈಡೇರಿಲ್ಲ. ಇವರ ನಿರ್ಲಕ್ಷ್ಯವೂ ಕಾಮಗಾರಿ ವಿಳಂಬವಾಗಲು ಕಾರಣ ಎಂಬುದು ಕಾಂತರಾಜು ಸೇರಿದಂತೆ ಹಲವು ಭಕ್ತರ ಆರೋಪವಾಗಿದೆ.

ಶೀಘ್ರ ಕ್ರಮ ವಹಿಸುತ್ತೇನೆ: ದೇವಸ್ಥಾನದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಮೇಲ್ಛಾವಣಿ ಸೋರುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪತ್ರ ರವಾನಿಸಲಾಗಿದೆ. ಆದಷ್ಟು ಬೇಗ ಇದನ್ನು ದುರಸ್ತಿಗೊಳಿಸಿ ದೇಗುಲದ ಉದ್ಘಾಟನೆಗೆ ಕ್ರಮ ವಹಿಸಲಾಗುವುದು ಎಂಬ ಭರವಸೆ ಇದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್‌ ಪ್ರಸಾದ್‌ “ಉದಯವಾಣಿ’ಗೆ ಮಾಹಿತಿ ನೀಡಿದರು.

ತೇರಿನ ಕೆಲಸವೂ ಆರಂಭಗೊಂಡಿಲ್ಲ: ಬಿಳಿಗಿರಿ ರಂಗನಾಥನ ರಥ ಬೀದಿಯಲ್ಲಿನ ದೊಡ್ಡ ತೇರು ಶಿಥಿಲಗೊಂಡಿದೆ. ಇದನ್ನು ದುರಸ್ತಿ ಮಾಡಲು ಈಗಾಗಲೇ 1 ಕೋಟಿ. ರೂ. ಬಿಡುಗಡೆಯಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಈ ಕಾಮಗಾರಿಗೂ ಚಾಲನೆ ನೀಡಿದ್ದರು. ಆದರೆ, ಇದು ಇನ್ನೂ ಆರಂಭಗೊಂಡಿಲ್ಲ. ಕಳೆದ 3 ವರ್ಷಗಳಿಂದಲೂ ರಥೋತ್ಸವವೇ ನಡೆದಿಲ್ಲ. ಇದಕ್ಕೂ ಗ್ರಹಣ ಹಿಡಿದಿದೆ ಎಂಬುದು ಭಕ್ತರ ದೂರು.

* ಫೈರೋಜ್‌ಖಾನ್‌

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.