ಕಡಿಮೆ ವಿದ್ಯಾರ್ಥಿಗಳಿರುವ ವಿಭಾಗ ನಡೆಸದಂತೆ ಸೂಚನೆ
Team Udayavani, Jun 9, 2019, 3:00 AM IST
ಬೆಂಗಳೂರು: ಸರ್ಕಾರಿ ಪದವಿ ಕಾಲೇಜಿನಲ್ಲಿ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗುವ ವಿಭಾಗ ಅಥವಾ ಕಾಂಬಿನೇಷನ್ ನಡೆಸಬಾರದೆಂದು ಹಿಂದಿನ ಸಾಲಿನಲ್ಲಿ ನೀಡಿರುವ ಸೂಚನೆಯನ್ನೇ ಮುಂದುವರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ, ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಿದೆ.
ಕಾಯಂ ಉಪನ್ಯಾಸಕರ ಕಾರ್ಯಭಾರ ನಿಯೋಜನೆ ಹಾಗೂ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು. ದಾಖಲಾತಿ ಸಂದರ್ಭದಲ್ಲೇ ಈ ವಿಷಯವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು.
ಬಿಎ, ಬಿ.ಕಾಂ, ಬಿಬಿಎಂ, ಭಾಷೆ ಹಾಗೂ ಐಚ್ಛಿಕ ವಿಷಯದ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 99ಕ್ಕಿಂತ ಅಧಿಕವಾದಾಗ ಹಾಗೂ ಬಿ.ಎಸ್ಸಿ ತರಗತಿಯಲ್ಲಿ 66ಕ್ಕಿಂತ ಅಧಿಕ ವಿದ್ಯಾರ್ಥಿಗಳು ಇದ್ದಾಗ ಎರಡನೇ ವಿಭಾಗ ತೆರೆದು ವಿದ್ಯಾರ್ಥಿಗಳ ಹಂಚಿಕೆ ಮಾಡಬೇಕು. ಅದರಂತೆಯೇ ಉಪನ್ಯಾಸಕರಿಗೆ ಕಾರ್ಯಭಾರ ನಿಯೋಜನೆ ಮಾಡಬೇಕು ಎಂದು ಇಲಾಖೆಯು ಪ್ರಾಂಶುಪಾಲರಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು