ಇತಿಹಾಸದ ಪುಟಕ್ಕೆ ಸೇರಿತು ಮಕ್ಕಳ ಮಂಟಪ


Team Udayavani, Jun 9, 2019, 6:10 AM IST

makkala-mantapa

ಪುತ್ತೂರು : ಇಪ್ಪತ್ತನಾಲ್ಕು ವರ್ಷಗಳಿಂದ ಸಾವಿರಾರು ಸಾಹಿತ್ಯ ಸಂಶೋಧನಾತ್ಮಕ ಚಟುವಟಿಕೆ ಗಳ ತಾಣವಾಗಿದ್ದ ಪುತ್ತೂರು ಪರ್ಲಡ್ಕದ ಶಿಕ್ಷಣ ಸಿದ್ಧಾಂತಿ ಡಾ| ಸುಕುಮಾರ ಗೌಡ ಅವರ ಕನಸಿನ ಕೂಸು ಶಿಕ್ಷಣ ಅಧ್ಯಯನ ಕೇಂದ್ರ ಮಕ್ಕಳ ಮಂಟಪ ಇದೀಗ ಇತಿಹಾಸದ ಪುಟ ಸೇರಿದೆ.

ವಿಶೇಷವೆಂದರೆ ಲಂಡನ್‌ ವಿವಿ ಮುದ್ರಣಗೊಳಿಸಿದ ಲರ್ನರ್‌ ಲರ್ನರ್ ಪುಸ್ತಕ ಸಿದ್ಧಗೊಂಡಿದ್ದು ಈ ಮಕ್ಕಳ ಮಂಟಪದಲ್ಲಿಯೇ.

1995ರಲ್ಲಿ ಪರ್ಲಡ್ಕ ಸಮೀಪ ಪ್ರಾರಂಭಗೊಂಡ ಈ ಶಿಕ್ಷಣ ಅಧ್ಯಯನ ಕೇಂದ್ರ ಕಳೆದ ಎಪ್ರಿಲ್ ತಿಂಗಳಿನಿಂದ ತನ್ನ ಚಟುವಟಿಕೆಯನ್ನು ಸ್ಥಗಿತಗೊಳಿಸಿದೆ. ಇಲ್ಲಿ ನಡೆಯುತ್ತಿದ್ದ ಪುಸ್ತಕ ವಿಮರ್ಶೆ, ಸಾಹಿತ್ಯ ಚಟುವಟಿಕೆ, ಪಿಎಚ್‌ಡಿ, ಎಂಫಿಲ್ ಅಧ್ಯಯನ ವಿದ್ಯಾರ್ಥಿಗಳು, ಸದಾ ಲವಲವಿಕೆಯ ತಾಣ ಈಗ ತೆರೆಯ ಮರೆಗೆ ಸರಿದಿದೆ. ಕಡಲತೀರದ ಭಾರ್ಗವ ಡಾ| ಶಿವರಾಮ ಕಾರಂತರು ಉದ್ಘಾಟಿಸಿದ ಈ ಅಧ್ಯಯನ ಕೇಂದ್ರ ಸಾವಿರಾರು ವಿದ್ಯಾರ್ಥಿಗಳ, ಸಾಹಿತಿ ಸಂಶೋಧಕರ ನೆಚ್ಚಿನ ತಾಣವಾಗಿತ್ತು.

ಸಂಶೋಧಕರ ಜ್ಞಾನ ಭಂಡಾರ

ಸಂಶೋಧನ ಅಧ್ಯಯನ ಯೋಗ್ಯವಾದ ಪುಸ್ತಕಗಳ ಭಂಡಾರವೇ ಇಲ್ಲಿದ್ದು, ರಾಜ್ಯದ ಬೆರಳೆಣಿಕೆ ಪುಸ್ತಕ ಭಂಡಾರಗಳ ಪೈಕಿ ಇದೂ ಒಂದೆನಿಸಿದೆ. ಶಿಕ್ಷಣ ಅಧ್ಯಯನ ಕೇಂದ್ರವಾಗಿ ರೂಪುಗೊಂಡಿದ್ದ ಮಕ್ಕಳ ಮಂಟಪ ಇಂಗ್ಲಿಷ್‌ ಭಾಷಾ ಜ್ಞಾನದಲ್ಲಿ ಸಂಶೋಧನೆ ನಡೆಸುವ ಸಂಶೋಧನ ವಿದ್ಯಾರ್ಥಿಗಳಿಗೆ ಜ್ಞಾನ ಭಂಡಾರವಾಗಿತ್ತು. ಲರ್ನರ್‌ ಲರ್ನರ್ ಪುಸ್ತಕ ಇಲ್ಲಿ ಸಿದ್ದಗೊಂಡು, ಅದನ್ನು ಲಂಡನ್‌ ವಿವಿ ಮುದ್ರಿಸಿತು.

ಸಾಹಿತ್ಯ ಸಾಧನೆ

ಕೆನಡಾದಲ್ಲಿ ಭಾಷಾ ವಿಜ್ಞಾನದಲ್ಲಿ ಪಿ.ಎಚ್.ಡಿ. ಮಾಡಿ ಅಧ್ಯಯನ-ಅಧ್ಯಾಪನ ನಡೆಸಿದ ಡಾ| ಸುಕುಮಾರ ಗೌಡ ಅವರು ಮೂಲತಃ ಸುಳ್ಯ ತಾಲೂಕಿನವರಾದರೂ ಪುತ್ತೂರಿನಲ್ಲಿಯೇ ನೆಲೆಸಿದ್ದರು. ಇವರ ಪ್ರಾಬ್ಲೆಮ್ಸ್‌ ಆ್ಯಂಡ್‌ ಪ್ರೋಸ್ಪೆಕ್ಟ್ ಆಫ್ ಅವರ್‌ ಎಜುಕೇಶನ್‌ ಎನ್ನುವ ಪುಸ್ತಕವನ್ನು ಡಾ| ಶಿವರಾಮ ಕಾರಂತ ಅವರು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಪ್ರಖ್ಯಾತ ಶಿಕ್ಷಣ ತಜ್ಞ ಡಾ| ಎ.ಎಸ್‌. ನೀಲ್ ಅವರ ಸಮ್ಮರ್‌ ಹೀಲ್ ಅನ್ನು ಡಾ| ಸುಕುಮಾರ ಗೌಡ ಅವರು ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ. ಈ ಎಲ್ಲ ಕಾರ್ಯಗಳು ನಡೆದದ್ದು ಮಕ್ಕಳ ಮಂಟಪದಲ್ಲಿ. ಇಂತಹ ಮಹಾನ್‌ ಆಂಗ್ಲಭಾಷಾ ತಜ್ಞ ಡಾ| ಸುಕುಮಾರ ಗೌಡ ಅವರೇ ಸ್ಥಾಪಿಸಿದ ಮಕ್ಕಳ ಮಂಟಪ ಇದೀಗ ಅವರ ಕಣ್ಣಮುಂದೆಯೇ ಅವಸಾನದತ್ತ ಸಾಗಿದೆ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.