ಅವನತಿಯತ್ತ ಸಾಗಿದೆ ವೆಂಗಯ್ಯನ ಕೆರೆ


Team Udayavani, Jun 9, 2019, 3:05 AM IST

avanati

ಕೆ.ಆರ್‌.ಪುರ: ಒಂದೊಮ್ಮೆ ಪ್ರವಾಸಿಗರನ್ನು ಕೈಬಿಸಿ ತನ್ನತ್ತ ಕರೆಯುತ್ತಿದ್ದ ಕೃಷ್ಣರಾಜಪುರದ ಹಗಲು ಕನಸಿನ ವ್ಯಂಗಯ್ಯನ ಕೆರೆ, ಕಲುಷಿತ ನೀರು ಸೇರ್ಪಡೆ ಮತ್ತು ನಿರ್ವಹಣೆಯಿಲ್ಲದೆ ಅವನತಿಯತ್ತ ಸಾಗಿದೆ.

ಕೆ.ಆರ್‌.ಪುರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕ ಇರುವ ವೆಂಗಯ್ಯನ ಕೆರೆ, ಹಿಂದೆ ಪರಿಸರ ಪ್ರೇಮಿಗಳ ನೆಚ್ಚಿನ ಪ್ರವಾಸಿ ತಾಣವಾಗಿತ್ತು. ವಾರಾಂತ್ಯದ ದಿನಗಳು ಹಾಗೂ ರಜೆ ದಿನಗಳಂದು ಕೆ.ಆರ್‌.ಪುರ ಸುತ್ತಮುತ್ತಲ ಪ್ರದೇಶಗಳು, ಬೆಂಗಳೂರಿನ ವಿವಿಧ ಭಾಗಗಳ ಜನ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಕೆರೆಗೆ ಬಂದು, ಕೆರೆ ಅಂಗಳದಲ್ಲಿ ಕೂರು ಸಂತೋಷದಿಂದ ಸಮಯ ಕಳೆಯುತ್ತಿದ್ದರು.

ಕಾಲ ಕ್ರಮೇಣ ಕೆರೆ ಸುತ್ತಲ ಪ್ರದೇಶದಲ್ಲಿ ಜನವಸತಿ ಪ್ರದೇಶಗಳು ಅಭಿವೃದ್ಧಿ ಹೊಂದಿದವು. ಬಡಾವಣೆಯ ಮನೆಗಳು, ಅಪಾರ್ಟ್‌ಮೆಂಟ್‌ಗಳ ತ್ಯಾಜ್ಯ ನೀರು (ಡ್ರೈನೇಜ್‌ ನೀರು) ರಾಜಕಾಲುವೆಗಳ ಮೂಲಕ ಕೆರೆ ಸೇರಲಾರಂಭಿಸಿತು. ಕೊಳಚೆ ನೀರನ್ನು ಒಡಲೊಳಗೆ ತುಂಬಿಕೊಂಡ ಕೆರೆಯಿಂದ ಕ್ರಮೇಣ ದುರ್ವಾಸನೆ ಹೊಮ್ಮತೊಡಗಿತು.

ಹಾಗೇ ಜನ ಕೂಡ ಕೆರೆಯಿಂದ ದೂರಾಗತೊಡಗಿದರು. ಆದರೆ ಡ್ರೈನೇಜ್‌ ನೀರನ್ನು ಕೆರೆಗೆ ಹರಿಸಿದ್ದನ್ನು ಯಾರೂ ಪ್ರಶ್ನಿಸಲಿಲ್ಲ. ಅಧಿಕಾರಿಗಳಂತೂ ಅತ್ತ ತಿರುಗಿ ಕೂಡ ನೋಡಲಿಲ್ಲ. ಈ ನಡುವೆ ಕೆರೆಯನ್ನು ಅಭಿವೃದ್ಧಿಪಡಿಸಿ ಮತ್ತೂಮ್ಮೆ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು 2000 ದಲ್ಲಿ ಸಂಸ್ಥೆಯೊಂದಕ್ಕೆ 20 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಯಿತು.

ಆದರೆ, ಗುತ್ತಿಗೆ ಅವಧಿ ಮುಗಿಯುವ ಮುನ್ನವೇ ಆ ಸಂಸ್ಥೆ, ಕೆರೆ ನಿರ್ವಹಣೆಯಿಂದ ಹಿಂದೆ ಸರಿಯಿತು. ಕೆರೆ ಮಧ್ಯೆ ದ್ವೀಪ ನಿರ್ಮಿಸಿ, ವಾಕಿಂಗ್‌ ಟ್ರ್ಯಾಕ್‌, ಮಕ್ಕಳ ಆಟಿಕೆ, ದೋಣಿ ವಿಹಾರ ವ್ಯವಸ್ಥೆ ಮಾಡಲಾಗಿತ್ತು. ಆದರೆ, 65 ಎಕರೆ ವಿಸ್ತಿರ್ಣದ ವೆಂಗಯ್ಯನ ಕೆರೆ ಕೊಳಕು ನೀರಿನಿಂದ ತುಂಬಿ, ಜೊಂಡು ಆವರಿಸಿಕೊಂಡು, ಕೆರೆ ನೀರಿನ ಬಣ್ಣ ಕಡುಗಪ್ಪು ಬಣ್ಣಕ್ಕೆ ತಿರುಗಿದ ನಂತರ ದೋಣಿ ವಿಹಾರ ಸ್ಥಗಿತಗೊಂಡಿದೆ. ನೀರು ಕಲುಷಿತಗೊಂಡಿದ್ದರಿಂದ ಮತ್ತು ಆಮ್ಲಜನಕದ ಕೊರತೆಯಿಂದ ಜಲಚರಗಳು ಮೃತಪಟ್ಟಿದೆ.

ಕೆರೆಯ ಪಶ್ಚಿಮ ಭಾಗದಲ್ಲಿ ರಾಮಮೂರ್ತಿನಗರ, ಲಕ್ಷ್ಮಣಮೂರ್ತಿನಗರ, ಕೌದೇನಹಳ್ಳಿ ಭಾಗದ ಚರಂಡಿ ಕೊಳೆಚೆ ನೀರು ಸೇರ್ಪಡೆಯಾದರೆ, ಕೆ.ಆರ್‌.ಪುರದ ಬಡಾವಣೆಗಳ ಕೊಳಚೆ ನೀರು ದಕ್ಷಿಣ ಭಾಗದಲ್ಲಿ ಕೆರೆ ಸೇರುತ್ತದೆ. ಇನ್ನು ಕೆರೆಯ ಪಶ್ಚಿಮ ಭಾಗದಲ್ಲಿ 20 ಎಂಎಲ್‌ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕವಿದ್ದರೂ ಪ್ರಯೋಜನವಾಗುತ್ತಿಲ್ಲ.

ಪ್ರಸುತ್ತ ನಿರ್ವಹಣೆ ಹೊಣೆ ಹೊತ್ತಿರುವ ಅರಣ್ಯ ಇಲಾಖೆ, ಕೆರೆ ಅಭಿವೃದ್ಧಿಗೆ ಹಣವಿಲ್ಲ ಎನ್ನುತ್ತಿದೆ. ಆದರೆ, ಕೆರೆ ಕಲುಷಿತಗೊಳ್ಳಲು ಮತ್ತು ಕೆರೆ ಆವರಣ ಅನೈತಿಕ ಚಟುವಟಿಕೆಗಳ ತಾಣವಾಗಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ಸಾರ್ವಜನಿಕರ ಆರೋಪ.

ಕೆಲವರು ರಾತ್ರೋರಾತ್ರಿ ಕಟ್ಟಡ ತ್ಯಾಜ್ಯ ತಂದು ಕೆರೆಗೆ ಸುರಿಯುತ್ತಿದ್ದಾರೆ. ಕೆ.ಆರ್‌.ಪುರ ಸುತ್ತಮುತ್ತ ಸಂಗ್ರಹವಾಗುವ ಕಸವನ್ನು ಕೆರೆ ಅಂಗಳದಲ್ಲಿ ಬೇರ್ಪಡಿಸಿ ನಂತರ ಕಸಕ್ಕೆ ಬೆಂಕಿ ಇಡುತ್ತಾರೆ. ಇದರಿಂದ ಕೆರೆ ಮತ್ತಷ್ಟು ಮಲಿನಗೊಂಡಿದೆ. ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕೆರೆ ಕಣ್ಮರೆಯಾಗುತ್ತಿದೆ.
-ಲಕ್ಷ್ಮಣ, ರತ್ನ ಭಾರತ ರೈತ ಸಮಾಜದ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.