ಸಜಂಕಾಡಿ ಅರಣ್ಯ ಪ್ರದೇಶ: ಕೋಳಿ ತ್ಯಾಜ್ಯದ ದುರ್ನಾತ
Team Udayavani, Jun 9, 2019, 6:13 AM IST
ಬಡಗನ್ನೂರು: ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುವನ್ನೂರು ಗ್ರಾಮದ ಸಜಂಕಾಡಿ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ನಿರಂತರ ಒಂದು ತಿಂಗಳಿಂದ ಗೋಣಿಕಟ್ಲೆ ಕೋಳಿ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಪರಿಸರ ನಾಶ ಮಾಡುವ ಕೃತ್ಯ ಕಿಡಿಗೇಡಿಗಳಿಂದ ನಡೆಯುತ್ತಲೇ ಇದೆ. ಇದರಿಂದ ಈ ಭಾಗದಲ್ಲಿ ದುರ್ವಾಸನೆಯಿಂದ ಜನರಿಗೆ ಮಾರಕ ರೋಗ ಹರಡುವ ಬಗ್ಗೆ ಭಯದ ಭೀತಿ ಹುಟ್ಟಿದೆ.
ಇಲ್ಲಿನ ಸುತ್ತ ಮುತ್ತಲಿನ ನಿವಾಸಿಗಳು ಸಂಪ್ಯ ಗ್ರಾಮಾಂತರ ಠಾಣೆ, ಈಶ್ವರಮಂಗಲ ಹೊರಠಾಣೆ, ಬಡಗನ್ನೂರು ಗ್ರಾ.ಪಂ.ಗೆ ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಇಲಾಖಾಧಿಕಾರಿಗಳಾಗಲಿ, ಜನ ಪ್ರತಿನಿಧಿಗಳಾಗಲಿ ಕ್ರಮ ಕೈಗೊಂಡಿಲ್ಲ.
ಮುುಂದಿನ ಮಳೆಗಾಲದಲ್ಲಿ ಇದೇ ರೀತಿ ಕೊಳೆತ ತ್ಯಾಜ್ಯವನ್ನು ಮೂಟೆಗಟ್ಟಲೆ ತಂದು ಎಸೆದರೆ ಮಳೆ ನೀರಿನ ಜತೆ ಎಲ್ಲೆಡೆ ತ್ಯಾಜ್ಯ ಹರಿದು ಡೆಂಗ್ಯೂ, ಚಿಕೂನ್ ಗುನ್ಯಾದಂತಹ ಭಯಾನಕ ರೋಗಗಳು ಹರಡುವ ಭೀತಿ ಉಂಟಾಗಿದೆ.
ಆದ್ದರಿಂದ ಆರೋಗ್ಯ ಸಂಬಂಧಿ ಸಮಸ್ಯೆ ಪ್ರಾರಂಭಗೊಳ್ಳುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಕಿಡಿಗೇಡಿಗಳನ್ನು ಹಿಡಿದು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸುಳ್ಯ: ಅಯ್ಯನಕಟ್ಟೆಯಿಂದ ಬೇಂಗಮಲೆಯಾಗಿ ಸುಳ್ಯಕ್ಕೆ ಸಂಪರ್ಕ ರಸ್ತೆಯ ಕಳಂಜ ಗ್ರಾಮದ ಕೊಲ್ಲರ್ನೂಜಿ, ಅಮರಪಟ್ನೂರು ಗ್ರಾಮದ ಸುಲುಗೋಡು ಮತ್ತು ಬೇಂಗಮಲೆಯಲ್ಲಿ ದನದ ತಲೆ, ಕೈ ಕಾಲು ಸಹಿತ ತ್ಯಾಜ್ಯ ಎಸೆಯಲಾಗಿದೆ. ರಸ್ತೆಯುದ್ದಕ್ಕೂ ದುರ್ನಾತ ಬೀರುತ್ತಿದೆ.
ಈ ಪರಿಸರದಲ್ಲಿ ನಿರಂತರವಾಗಿ ಗ್ರಾಮಸ್ಥರು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದರೆ, ಅಪರಿಚಿತ ಕಿಡಿಗೇಡಿಗಳು ತ್ಯಾಜ್ಯ ಎಸೆದು ಪರಿಸರ ಮಲಿನಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?