ಟ್ರಾಫಿಕ್ ಸಮಸ್ಯೆಯದ್ದೇ ದೂರು ಅಧಿಕ
Team Udayavani, Jun 9, 2019, 9:17 AM IST
ಹುಬ್ಬಳ್ಳಿ: ಪೊಲೀಸ್ ಆಯುಕ್ತರು ತಮ್ಮ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಿದರು.
ಹುಬ್ಬಳ್ಳಿ: ಅವಳಿ ನಗರದ ಸಮಸ್ಯೆಗಳ ಕುರಿತು ಹಾಗೂ ಸಂಚಾರ ಸುಧಾರಣೆ, ಅಭಿವೃದ್ಧಿಗೆ ಸಂಬಂಧಿಸಿ ಪೋಲಿಸ್ ಆಯುಕ್ತರು ಶನಿವಾರ ತಮ್ಮ ಕಚೇರಿಯಲ್ಲಿ ಎರಡನೇ ಫೋನ್-ಇನ್ ಕಾರ್ಯಕ್ರಮ ನಡೆಸಿದರು. ಈ ವೇಳೆ ಒಂದೂವರೆ ಗಂಟೆಗಳ ಕಾಲ ಸುಮಾರು 50ಕ್ಕೂ ಹೆಚ್ಚಿನ ಕರೆಗಳಲ್ಲಿ ಬಹುತೇಕವು ಟ್ರಾಫಿಕ್ ಜಾಮ್ ಸಮಸ್ಯೆ ಬಗ್ಗೆಯೇ ಇದ್ದವು.
ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ ಅವರು, ಇಂಗಳೇಶ್ವರ ನಗರದಲ್ಲಿ ಕುಡುಕರಿಂದ ತುಂಬಾ ಸಮಸ್ಯೆ ಎದುರಿಸುತ್ತಿದ್ದೇವೆ. ಅವರಿಂದ ಪ್ರತಿದಿನ ಕಿರಿಕಿರಿಯಾಗುತ್ತಿದ್ದು, ಗಸ್ತು ಹೆಚ್ಚಿಸಬೇಕೆಂದು ಮನವಿ ಮಾಡಿದರು. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ನ್ನು ಭೇಟಿ ಮಾಡಿ ಅಲ್ಲಿನ ಸಮಸ್ಯೆ ತಿಳಿಸುವಂತೆ ಹೇಳಿದರು.
ಉಣಕಲ್ಲ ನಿವಾಸಿ ಸೋಮಲಿಂಗ ಅವರು, ಬಿಆರ್ಟಿಎಸ್ ಮೇಲ್ಸೇತುವೆ ಕಾರಣದಿಂದ ತುಂಬಾ ಅನಾನುಕೂಲತೆ ಆಗುತ್ತಿದೆ. ಭೈರಿದೇವರಕೊಪ್ಪದಲ್ಲಿ ಪ್ರತಿ ಶನಿವಾರ ಹೆಚ್ಚಿನ ಜನ ಸಂತೆಗೆ ಬರುತ್ತಿದ್ದು, ಈ ವೇಳೆ ಮಿಶ್ರ ವಾಹನಗಳ ಸಂಚಾರ ದಟ್ಟಣೆ ಹಾಗೂ ಬಿಆರ್ಟಿಎಸ್ ಬಸ್ಗಳು ವೇಗವಾಗಿ ಸಂಚರಿಸುವುದರಿಂದ ತುಂಬಾ ಸಮಸ್ಯೆ ಆಗುತ್ತಿದೆ. ಇದನ್ನು ನಿಯಂತ್ರಿಸಲು ಹೆಚ್ಚುವರಿ ಸಂಚಾರ ಪೇದೆ ನಿಯೋಜಿಸಬೇಕೆಂದು ಕೋರಿದರು.
ಕೇಶ್ವಾಪುರ ನಿವಾಸಿ ವಿನೋದ ಪಾಟಕರ ಅವರು, ಪೂರ್ವ ಸಂಚಾರ ಠಾಣೆ ವ್ಯಾಪ್ತಿಯ ಮಧುರಾ ಕಾಲೋನಿ ಸಮೀಪ ಸಂಚಾರ ದಟ್ಟಣೆ ನಿಯಂತ್ರಿಸಬೇಕೆಂದು ಮನವಿ ಮಾಡಿದರು. ಆಯುಕ್ತರು ಸ್ಪಂದಿಸಿ, ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಪೊಲೀಸರು ಎಲ್ಲ ಬಗೆಯ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಭರವಸೆ ನೀಡಿದರು.
ದುರ್ಗದ ಬಯಲು ಪ್ರದೇಶದಲ್ಲಿ ಅಕ್ರಮವಾಗಿ ಹಲವು ಅಂಗಡಿಗಳು ಸ್ಥಾಪನೆಯಾಗಿವೆ. ಅವನ್ನು ಆದಷ್ಟು ಬೇಗ ತೆರವುಗೊಳಿಸಬೇಕೆಂದು ನಗರದ ವ್ಯಕ್ತಿಯೊಬ್ಬರು ಕೋರಿದರು. ಆಯುಕ್ತರು ಸಂಬಂಧಪಟ್ಟ ಅಧಿಕಾರಿಯೊಂದಿಗೆ ಸಂಪರ್ಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?