ಸರ್ಕಾರಿ ಶಾಲೆಗಳಿಗೂ ಬಂತು ಈಗ ಡಿಮಾಂಡ್‌!


Team Udayavani, Jun 9, 2019, 9:53 AM IST

Udayavani Kannada Newspaper

ವಿಶೇಷ ವರದಿ
ದಾವಣಗೆರೆ:
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ 32 (ಹರಪನಹಳ್ಳಿ ತಾಲೂಕು ಸೇರಿ) ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾಗಿದ್ದು, ಜೂನ್‌ 7ರ ವರೆಗೆ ಒಟ್ಟು 843 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಕಳೆದ ಮೇ 29ರಂದು ಶಾಲಾ ಪ್ರಾರಂಭೋತ್ಸವದೊಂದಿಗೆ ಆಂಗ್ಲ ಮಾಧ್ಯಮಕ್ಕೂ ಚಾಲನೆ ನೀಡಲಾಗಿದ್ದು, ಕೆಲವೊಂದು ಶಾಲೆಗಳಲ್ಲಿ ಅತಿ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆಂಗ್ಲ ಮಾಧ್ಯಮಕ್ಕಾಗಿಯೇ ಹೊಸದಾಗಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆದಿಲ್ಲ. ಈಗಾಗಲೇ ಸೇವೆಯಲ್ಲಿರುವ ಶಿಕ್ಷಕರಲ್ಲೇ ಇಬ್ಬರನ್ನು ಆಯ್ಕೆ ಮಾಡಿ ಆಂಗ್ಲ ಮಾಧ್ಯಮ ಹೊಣೆಗಾರಿಕೆ ವಹಿಸಲಾಗಿದೆ. ಜಿಲ್ಲಾ ಮತ್ತು ಶಿಕ್ಷಣ ತರಬೇತಿ ಸಂಸ್ಥೆ (ಡಯಟ್)ನಲ್ಲಿ 15 ದಿನಗಳ ಕಾಲ ಶಿಕ್ಷಕರಿಗೆ ಆಂಗ್ಲ ಮಾಧ್ಯಮದ ಬಗ್ಗೆ ವಿಶೇಷ ತರಬೇತಿ ಸಹ ನೀಡಲಾಗಿದೆ.

ಆಂಗ್ಲ ಮಾಧ್ಯಮ ಪ್ರವೇಶಕ್ಕೆ ಈ ವರ್ಷ ಶಿಕ್ಷಣ ಇಲಾಖೆ 30 ವಿದ್ಯಾರ್ಥಿಗಳ ನಿಗದಿಪಡಿಸಿಕೊಂಡಿದೆ. ಆದರೆ, ಕೆಲವೊಂದು ಶಾಲೆಗಳಲ್ಲಿ ನಿಗದಿಗಿಂತ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವುದು ಶಿಕ್ಷಣ ಇಲಾಖೆ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಕಳೆದ 10 ದಿನಗಳಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ಕೆಲವೊಂದು ಶಾಲೆಯಲ್ಲಿ ನಿರೀಕ್ಷಿತ ದಾಖಲಾತಿ ನಡೆದಿಲ್ಲ. ಈ ಶೈಕ್ಷಣಿಕ ಸಾಲಿನಲ್ಲಿ ಆಂಗ್ಲ ಮಾಧ್ಯಮಕ್ಕೆ ಸದ್ಯ 946 ಅರ್ಜಿ ವಿತರಣೆಯಾಗಿದ್ದು, ಅದರಲ್ಲಿ 843 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಈ ಪೈಕಿ ಬಾಲಕರು 433 ಹಾಗೂ ಬಾಲಕಿಯರು 410 ಇದ್ದಾರೆ. ಆಂಗ್ಲ ಮಾಧ್ಯಮ ಪ್ರವೇಶಕ್ಕೆ ಜೂನ್‌ 30ರ ವರೆಗೂ ಅವಕಾಶ ಇದೆ.

ಆಂಗ್ಲ ಮಾಧ್ಯಮಕ್ಕೆ ಈ ಸಾಲಿನಲ್ಲಿ ಅತಿ ಕಡಿಮೆ ಅಂದರೆ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದರೆ, ಹರಪನಹಳ್ಳಿ ತಾಲೂಕಿನ ಹಲುವಾಗಲು ಶಾಲೆಯಲ್ಲಿ 112 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಹೈಯರ್‌ ಪ್ರಾಥಮಿಕ ಶಾಲೆ ಹಾಗೂ ಹೊನ್ನಾಳಿ ತಾಲ್ಲೂಕಿನ ದೇವನಾಯ್ಕನಹಳ್ಳಿ ಶಾಲೆಯಲ್ಲಿ ತಲಾ 8 ಹಾಗೂ ಜಗಳೂರು ಜಿಎಚ್ಪಿಎಸ್‌ (ಬಾಲಕರು)ನಲ್ಲಿ 11 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಕೆಲವು ಶಾಲೆಗಳಲ್ಲಿ 15 ರಿಂದ 40 ವಿದ್ಯಾರ್ಥಿಗಳು ದಾಖಲಾಗಿದ್ದು, ಅರ್ಜಿ ಪಡೆದ ಇನ್ನೂ 103 ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೆ ಸೇರಿಸಬೇಕಿದೆ. ಪ್ರವೇಶಕ್ಕೆ 20 ದಿನ ಕಾಲಾವಕಾಶ ಇರುವುದರಿಂದ ಮತ್ತಷ್ಟು ವಿದ್ಯಾರ್ಥಿಗಳು ದಾಖಲಾಗಬಹುದೆಂದು ನಿರೀಕ್ಷಿಸಲಾಗಿದೆ.

ಜಿಲ್ಲೆಯ 32 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗಿದೆ. ಈ ಸಾಲಿನಲ್ಲಿ ಒಂದು ಶಾಲೆಗೆ 30 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲವೆಡೆ ಕಡಿಮೆ ಇದ್ದರೆ ಹಲವೆಡೆ ನಿರೀಕ್ಷೆಗಿಂತ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಗೆ ಜೂನ್‌ 30ರ ವರೆಗೆ ಅವಕಾಶ ಇದೆ. ಸದ್ಯ ಮೊದಲಿದ್ದ ಶಿಕ್ಷಕರಿಗೇ ತರಬೇತಿ ನೀಡಿ, ಆಂಗ್ಲ ಮಾಧ್ಯಮಕ್ಕೆ ನಿಯೋಜಿಸಲಾಗಿದೆ. ಮುಂದೆ ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 120 ಹಾಗೂ ಹರಪನಹಳ್ಳಿ ತಾಲೂಕಿನಲ್ಲಿ 120 ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಸದ್ಯ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಂದೆ ತರಗತಿ, ಶಿಕ್ಷಕರ ಕೊರತೆ ಉಂಟಾಗಬಹುದು.
ಸಿ.ಆರ್‌. ಪರಮೇಶ್ವರಪ್ಪ,
ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.