ಉಳ್ಳಾಗಡ್ಡಿ ಸಂಗ್ರಹ ಕಾರ್ಖಾನೆ ನಿರ್ಮಾಣಕ್ಕೆ ಯತ್ನ
•ಕಾರ್ಯಕರ್ತರ ಅಭಿನಂದನಾ ಸಮಾರಂಭ •ಮತದಾರರ ಋಣ ತೀರಿಸಲು ಬದ್ಧ ಎಂದ ಸಂಸದ
Team Udayavani, Jun 9, 2019, 11:23 AM IST
ಗಜೇಂದ್ರಗಡ: ಈ ಭಾಗದ ಮತದಾರರ ಋಣ ತೀರಿಸುವ ನಿಟ್ಟಿನಲ್ಲಿ ಇಲ್ಲಿ ಅತಿಹೆಚ್ಚು ಬೆಳೆಯುವ ಉಳ್ಳಾಗಡ್ಡಿ ಫಸಲನ್ನು ಅಧಿಕ ದಿನಗಳ ಕಾಲ ಕೆಡದಂತೆ ಸಂಗ್ರಹಿಸಿಡುವ ಕಾರ್ಖಾನೆ ನಿರ್ಮಾಣಕ್ಕೆ ಶ್ರಮಿಸಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
ಪಟ್ಟಣದ ಶಾಸಕರ ನಿವಾಸ ಆವರಣದಲ್ಲಿ ಶನಿವಾರ ನಡೆದ ಕಾರ್ಯಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗಜೇಂದ್ರಗಡ ಹಾಗೂ ರೋಣ ಭಾಗದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಉಳ್ಳಾಗಡ್ಡಿ ಬೆಳೆಯಲಾಗುತ್ತದೆ. ಆದರೆ ರೈತರು ಬೆಳೆಯನ್ನು ಹೊತ್ತು ಬೆಂಗಳೂರಿನಂತಹ ದೊಡ್ಡ ನಗರಗಳಿಗೆ ಹೊತ್ತೂಯ್ದರೆ, ಸರಿಯಾದ ಬೆಲೆ ಸಿಗದೇ ಸಾಲಕ್ಕೆ ಸಿಲುಕುವಂತೆ ಆಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಮಹಾರಾಷ್ಟ್ರ ರಾಜ್ಯದ ಜಲಗಾಂವ್ನಲ್ಲಿ ಉಳ್ಳಾಗಡ್ಡಿಯಲ್ಲಿನ ನೀರಿನಾಂಶ ಹೀರಿ ಅದು ಕೆಡದಂತೆ ನೋಡಿಕೊಳ್ಳಲು ಬಹುದೊಡ್ಡ ಕಾರ್ಖಾನೆಯಿದೆ. ಆ ಉಳ್ಳಾಗಡ್ಡಿಗೂ ಬೇಡಿಕೆ ಇದೆ. ಈ ಕುರಿತು ವಿಜ್ಞಾನಿಗಳ ಜೊತೆಗೂ ಚರ್ಚಿಸಿದ್ದೇನೆ. ರೋಣ ಭಾಗದಲ್ಲಿ ಇಂತಹ ಕಾರ್ಖಾನೆ ನಿರ್ಮಾಣ ಮಾಡಿದರೆ ರೈತರು ಬೆಳೆದ ಉಳ್ಳಾಗಡ್ಡಿಗೆ ಉತ್ತಮ ಬೆಲೆ ಜೊತೆಗೆ ಬೇಡಿಕೆಯೂ ಬರಬಹುದು ಎನ್ನುವ ಮಹದಾಸೆ ಹೊಂದಿದ್ದೇನೆ. ಜೊತೆಗೆ ನೀರಾವರಿ, ನದಿಗಳ ಜೋಡಣೆ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು ಎಂದರು.
ಶಾಸಕ ಕಳಕಪ್ಪ ಬಂಡಿ ಮಾತನಾಡಿ, ನನ್ನ ಮತ್ತು ಸಂಸದ ಶಿವಕುಮಾರ ಉದಾಸಿ ಅವರ ಗೆಲುವಿಗೆ ಕಾರ್ಯಕರ್ತರೇ ಕಾರಣ. ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ತಳಪಾಯದ ಪಾರ್ಟಿಯಾಗಿದೆ. ಆದರೆ ಬಿಜೆಪಿ ಕಾರ್ಯಕರ್ತರು ಕಟ್ಟಿದ ಪಕ್ಷವಾಗಿದೆ. ಈ ನಿಟ್ಟಿನಲ್ಲಿ ಮತಕ್ಷೇತ್ರದ ಅಭಿವೃದ್ಧಿಗೆ ಸಂಸದರು ಕೇಂದ್ರದಿಂದ ಹಲವಾರು ಯೋಜನೆ ಮಂಜೂರು ತರುವಲ್ಲಿ ಮುಂದಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ವಿಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ರೋಣ ಮತಕ್ಷೇತ್ರ ಸೇರಿದಂತೆ ಗದಗ ಜಿಲ್ಲೆಯಲ್ಲಿ ಅತಿಹೆಚ್ಚು ಮತಗಳು ಸಂಸದ ಶಿವಕುಮಾರ ಉದಾಸಿ ಅವರಿಗೆ ದೊರೆತಿದ್ದು, ಮತದಾರರ ಸೇವೆ ಗೈಯಲು ಮತ್ತೂಮ್ಮೆ ಅವಕಾಶ ಸಿಕ್ಕಿದೆ. ಕೇಂದ್ರದಿಂದ ಹಲವಾರು ಕಾರ್ಯಕ್ರಮ ಅನುಷ್ಠಾನಗಳಿಸಲು ಮುಂದಾಗಬೇಕು. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಿವಕುಮಾರ ಉದಾಸಿ ಅವರಿಗೆ ಸಚಿವ ಸ್ಥಾನ ದೊರೆಯುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಕ್ಕೇದ ದರ್ಗಾದ ಹಜರತ್ ನಿಜಾಮುದ್ದಿಶಾ ಅಶ್ರಫಿ ಸಾನ್ನಿಧ್ಯ ವಹಿಸಿದ್ದರು. ರವಿ ದಂಡಿನ್, ಅಶೋಕ ನವಲಗುಂದ, ರಿಕಬ್ಚಂದ ಬಾಗಮಾರ, ಸಂಗನಗೌಡ ಮಾಲಿಪಾಟೀಲ, ಮುತ್ತಣ್ಣ ಲಿಂಗನಗೌಡ್ರ, ಬಿ.ವಿ. ಕಂಬಳ್ಯಾಳ, ಅಪ್ಪಣ್ಣ ಮಹೇಂದ್ರಕರ, ಶ್ರೀಪಾದರಾವ್ ಕುಲಕರ್ಣಿ, ವಿರೂಪಾಕ್ಷಪ್ಪ ಕರಿಹೊಳಿ, ಎಂ.ಎಸ್. ಕರಿಗೌಡರ, ಮುತ್ತು ಕಡಗದ, ಅಂಬರೀಶ ಬಳಿಗೇರ, ಇಂದಿರಾ ತೇಲಿ, ಭಾಸ್ಕರ ರಾಯಬಾಗಿ, ವಿಜಯಲಕ್ಷ್ಮೀ ಚಟೇrರ, ಸುಮಿತ್ರಾ ತೊಂಡಿಹಾಳ, ಲಕ್ಷ್ಮೀ ಮುದೋಳ, ಕವಿತಾ ಜಾಲಿಹಾಳ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ