ರೇಷ್ಮೆ ಬೆಳೆಗಾರರು ನರೇಗಾ ಸದ್ಬಳಕೆ ಮಾಡಿಕೊಳ್ಳಿ

ವೈಯಕ್ತಿಕ ಅಭಿವೃದ್ಧಿ ಕಾರ್ಯಗಳ ಜತೆ ಕಾರ್ಮಿಕರಿಗೂ ಕೂಲಿ ಸಿಗುತ್ತೆ: ಉಪನಿರ್ದೇಶಕ ಪ್ರಭಾಕರ್‌ ಸಲಹೆ

Team Udayavani, Jun 9, 2019, 1:16 PM IST

kolar-tdy-2..

ಬಂಗಾರಪೇಟೆ: ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕವಾಗಿ ರೇಷ್ಮೆ ಕೃಷಿ ಅಭಿವೃದ್ಧಿ ಪಡಿಸಿಕೊಳ್ಳಲು ಹಾಗೂ ಸ್ಥಳೀಯ ಕೂಲಿಕಾರ್ಮಿಕರಿಗೆ ಉದ್ಯೋಗ ನೀಡಲು ಬೆಳೆಗಾರರು ಈ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಂ.ಕೆ.ಪ್ರಭಾಕರ್‌ ಸಲಹೆ ನೀಡಿದರು.

ತಾಲೂಕಿನ ಕುಪ್ಪನಹಳ್ಳಿ ರೇಷ್ಮೆ ಕೃಷಿ ಕ್ಷೇತ್ರದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಹಮ್ಮಿಕೊಂಡಿದ್ದ ಕ್ಷೇತ್ರೋತ್ಸವ ಹಾಗೂ ರೇಷ್ಮೆ ಬೆಳೆಗಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2 ಮತ್ತು 3ನೇ ವರ್ಷ ಹಿಪ್ಪುನೇರಳೆ ತೋಟಗಳಿಗೆ ನರೇಗಾ ಯೋಜನೆಯಡಿ ಸೌಲಭ್ಯವಿದ್ದು, ರೈತರು ತಮ್ಮ ತೋಟಗಳಿಗೆ ಹೆಚ್ಚಿನ ರೀತಿಯಲ್ಲಿ ಕೊಟ್ಟಿಗೆ ಗೊಬ್ಬರ ನೀಡಿ ನಿರ್ವಹಣೆ ಮಾಡಿದಲ್ಲಿ ದ್ವಿತಳಿ ರೇಷ್ಮೆ ಗೂಡನ್ನು ಉತ್ಪಾದನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬಹುದೆಂದು ಸಲಹೆ ನೀಡಿದರು.

ರೈತರ ಜತೆ ಚರ್ಚೆ:ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿಗಳಾದ ಡಾ.ಹರಿರಾಜು ಮತ್ತು ಡಾ.ಶಿವಶಂಕರ್‌ ಮಾತನಾಡಿ, ಗುಣಮಟ್ಟದ ದ್ವಿತಳಿ ಗೂಡುಗಳನ್ನು ಬೆಳೆಯುವುದರ ಮಹತ್ವ, ಬೆಳೆದ ನಂತರ ಆ ಗೂಡುಗಳನ್ನು ನಿರ್ವಹಣೆ ಮಾಡುವುದು, ಮಾರುಕಟ್ಟೆ ಮಾಡುವ ರೀತಿ, ಗುಣಮಟ್ಟದ ರೇಷ್ಮೆಗೆ ಇರುವ ಬೇಡಿಕೆ, ಅದಕ್ಕೆ ಇಲಾಖೆ ಮತ್ತು ಕೇಂದ್ರ ರೇಷ್ಮೆ ಮಂಡಳಿ ತೆಗೆದುಕೊಂಡಿರುವ ಕ್ರಮಗಳು ಮತ್ತು ದೊರೆಯುವ ಸೌಲಭ್ಯಗಳ ಬಗ್ಗೆ ವಿವರವಾಗಿ ರೈತರೊಂದಿಗೆ ಚರ್ಚೆ ಮಾಡಿದರು.

ರೈತರಿಂದ ಮಾಹಿತಿ: ಕೋಲಾರ ಟಮಕದ ತೋಟಗಾರಿಕಾ ಮಹಾವಿದ್ಯಾಲಯ ಉಪನ್ಯಾಸಕ ಡಾ.ನೂರುಲ್ಲಾ ಮತ್ತು ಡಾ.ಶಶಿಧರ್‌ ಮಾತನಾಡಿ, ಹಿಪ್ಪುನೇರಳೆ ತೋಟಗಳಲ್ಲಿ ಬೇರು ಕೊಳೆ ರೋಗ, ಬೇರು ಗಂಟು ರೋಗ, ಕಾಂಡ ಕೊಳೆ ರೋಗಗಳು ಹೆಚ್ಚಾಗಿ ಕಾಣುತ್ತಿದ್ದು, ಅದರ ನಿಯಂತ್ರಣ ಕ್ರಮಗಳ ಬಗ್ಗೆ ಮತ್ತು ಪೋಷಕಾಂಶಗಳ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ವರದಾನ: ಮೈರಾಡ ಸಂಸ್ಥೆಯಿಂದ ಆಗಮಿಸಿದ್ದ ವೆಂಕಟರೆಡ್ಡಿ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಗಳು, ಅವುಗಳ ಸ್ಥಾಪನೆ ಮಾಡುವ ವಿಧಾನ ಮತ್ತು ಉದ್ದೇಶ, ಅದರಿಂದ ರೈತರಿಗೆ ಆಗುವ ಉಪಯೋಗಗಳು, ಸಿಗುವ ಸೌಲಭ್ಯಗಳ ಬಗ್ಗೆ ವರವಾಗಿದೆ ಎಂದು ಹೇಳಿದರು

ನಿರ್ವಹಣೆ ಮಾಡಿ: ನೆಟಾಫಿಮ್‌ ಕಂಪನಿ ತಜ್ಞರಾದ ಆಂಜಿನಪ್ಪ ಮಾತನಾಡಿ, ಹನಿನೀರಾವರಿ ಅಳವಡಿಕೆ ವಿಧಾನಗಳು, ಅವುಗಳ ನಿರ್ವಹಣೆ ಮಾಡುವ ವಿಧಾನ, ರೈತರು ಮಾಡುವ ಅನೇಕ ತಪ್ಪುಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದಲ್ಲಿ ಬಹಳ ವರ್ಷಗಳು ಬಾಳಿಕೆ ಬರುವುದೆಂದು ರೈತರಿಗೆ ಸಲಹೆ ನೀಡಿದರು.

ಕ್ಲಸ್ಟರ್‌ ವಿಜ್ಞಾನಿಗಳಾದ ಡಾ.ಮೋರಿಸನ್‌ ಮಾತನಾಡಿ, ಇತ್ತೀಚೆಗೆ ಅತಿ ಹೆಚ್ಚಿನ ಶೀತಾಂಶ ಮತ್ತು ವಾತಾವರಣದಲ್ಲಿನ ಏರುಪೇರುಗಳಿಂದ ದ್ವಿತಳಿ ಬೆಳೆಗಳಿಗೆ ತೊಂದರೆ ಆಗುತ್ತಿದ್ದು, ರೈತರು ತಮ್ಮ ಮನೆಗಳಲ್ಲಿ ಚೆನ್ನಾಗಿ ಗಾಳಿ ಬಿಡುವುದು, ತೆಳುವಾಗಿಡುವುದು, ಸುಣ್ಣ ಹೆಚ್ಚಾಗಿ ಬಳಕೆ ಮಾಡುವುದು, ಗುಣಮಟ್ಟದ ಸೊಪ್ಪು ನೀಡುವ ಬಗ್ಗೆ ಸಲಹೆ ನೀಡಿದರು.

ಭಾಗವಹಿಸಿ: ರೇಷ್ಮೆ ಸಹಾಯಕ ನಿರ್ದೇಶಕ ಶ್ರೀನಿವಾಸ ಮಾತನಾಡಿ, ಪ್ರತಿಯೊಬ್ಬ ರೈತ ಕಾರ್ಯಕ್ರಮದಲ್ಲಿ ಸಕಾಲಕ್ಕೆ ಹಾಜರಾದ್ರೆ ತಜ್ಞರು ನೀಡುವ ಮಾಹಿತಿ ಪಡೆದು, ತಾವು ಉತ್ತಮ ಬೆಳೆ ಬೆಳೆಯುವ ಮೂಲಕ ಖರ್ಚಿನಲ್ಲಿ ಹೆಚ್ಚು ಲಾಭಗಳಿಸಬಹುದೆಂದು ಕಿವಿಮಾತು ಹೇಳಿದರು. ರೇಷ್ಮೆ ವಿಸ್ತರಣಾಧಿಕಾರಿಗಳಾದ ಜಯ ಶ್ರೀನಿವಾಸಲು, ಜಿ.ಶ್ರೀನಿವಾಸ, ಕೇಂದ್ರ ಮತ್ತು ರೇಷ್ಮೆ ಇಲಾಖೆ ಸಿಬ್ಬಂದಿ, 170ಕ್ಕೂ ಹೆಚ್ಚಿನ ರೈತರು, ಚಾಕಿ ಕೇಂದ್ರದ ಮಾಲಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.