ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಕುಸಿತ


Team Udayavani, Jun 9, 2019, 1:50 PM IST

tk-tdy-1..

ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಕೊಬ್ಬರಿ ಮಾರುತ್ತಿರುವ ವರ್ತಕರು.

ತಿಪಟೂರು: ತಿಪಟೂರು ಕೊಬ್ಬರಿಯು ರುಚಿ ಮತ್ತು ಗುಣಮಟ್ಟದಲ್ಲಿ ಅತ್ಯುತ್ತಮ ದರ್ಜೆಯಾಗಿರುವ ಕಾರಣ 2019ರ ಆರಂಭದಿಂದ ಏಪ್ರಿಲ್ನಲ್ಲಿ ಕ್ವಿಂಟಾಲ್ ಕೊಬ್ಬರಿ ಬೆಲೆ ರೂ17,600ರ ಗಡಿದಾಟಿತ್ತು. ಕಳೆದ 8-10 ದಿನಗಳಿಂದ ಬೇಡಿಕೆ ದಿಢೀರ್‌ ಕಡಿಮೆ ಯಾಗಿ, ಬೆಲೆಯೂ ತೀವ್ರ ಕುಸಿತ ಕಂಡು ಇಂದಿನ ಹರಾಜು ಕೇವಲ 12ರಿಂದ 13ಸಾವಿರಕ್ಕೆ ಇಳಿಯುವ ಮೂಲಕ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಬ್ಬರಿ ಬೆಲೆ ಮತ್ತಷ್ಟು ಕುಸಿಯುವ ಲಕ್ಷಣಗಳು ಕಂಡುಬಂದಿವೆ.

ವಿಶ್ವಪ್ರಸಿದ್ಧ ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಇಂದಿನ ಶನಿವಾರದ ಕೊಬ್ಬರಿ ಹರಾಜಿನಲ್ಲಿ ಕೊಬ್ಬರಿ ಬೆಲೆ ದಿಢೀರ್‌ ಕುಸಿತ ಕಂಡಿದೆ. ಕಳೆದ 10-12 ದಿನಗಳಿಂದಲೂ ಈ ಬಗ್ಗೆ ಅನುಮಾನಗಳು ಕಂಡು ಬರುತ್ತಿದ್ದು ತೀವ್ರ ಕುಸಿತದ ಬಗ್ಗೆ ಮಾರುಕಟ್ಟೆಯ ತುಂಬಾ ಕೇಳಿಬರುತ್ತಿರುವ ಮಾತುಗಳೆಂದರೆ ಹೆಚ್ಚಾಗಿ ಕೊಬ್ಬರಿ ಬೇಡಿಕೆ ಇರುವ ರಾಜ್ಯಗಳಾದ ಯು.ಪಿ, ಡೆಲ್ಲಿ, ಜೈಪುರ್‌ ಮುಂತಾದ ಕಡೆಗಳಲ್ಲಿ ಇಲ್ಲಿನ ಕೊಬ್ಬರಿಯನ್ನು ಅಲ್ಲಿ ಯಥೇಚ್ಚವಾಗಿ ತಿನ್ನಲು ಉಪ ಯೋಗಿಸುತ್ತಾರೆ.ಏಪ್ರಿಲ್ ನಿಂದ ಪ್ರಾರಂಭವಾದ ಬಿಸಿಲು ಆ ಪ್ರದೇಶದಲ್ಲಿ ಹೆಚ್ಚಿದ್ದು ತೆಂಗು ಬಳಕೆ ಕಡಿಮೆಯಾದ ಕಾರಣ ಬೇಡಿಕೆ ಕುಸಿದಿದೆ. ಮಳೆ ಹಾಗೂ ಚಳಿ ಇದ್ದಾಗ ವಿಪರೀತ ಬೇಡಿಕೆ ಇರುತ್ತದೆ. ಇನ್ನು ಕೊಬ್ಬರಿ ಆಯಿಲ್ ದರವೂ ಕಡಿಮೆಯಾಗಿದೆ. ತೆಂಗಿನ ಕಾಯಿ ದರವೂ ತುಂಬಾ ಕಡಿಮೆಯಾಗಿದೆ. ಇದೆಲ್ಲದರ ಪರಿಣಾಮ ಕೊಬ್ಬರಿ ದರ ತೀವ್ರ ಕುಸಿತ ಕಂಡಿದೆ ಎಂಬುದು ಕೊಬ್ಬರಿ ವರ್ತಕರ ಹಾಗೂ ರವಾನೆದಾರರ ಅಬಿಪ್ರಾಯವಾಗಿದೆ.

ರೋಗಬಾಧೆ: ತೆಂಗು ತಿಪಟೂರು ಮತ್ತು ಅಕ್ಕ ಪಕ್ಕದ ಐದಾರು ಜಿಲ್ಲೆಗಳ 40ರಿಂದ 50ತಾಲೂಕುಗಳ ಜನತೆಯ ಜೀವನಾಡಿಯಾಗಿದೆ. ತೆಂಗಿಗೆ ಕಳೆದ ಹತ್ತಾರು ವರ್ಷಗಳಿಂದ ಪ್ರಕೃತಿ ವಿಕೋಪ, ನುಸಿಪೀಡೆ, ಬೆಂಕಿರೋಗ, ರಸಸೋರುವ ರೋಗ, ಕಪ್ಪುತಲೆ ಹುಳು ಬಾಧೆ ಸೇರಿದಂತೆ ಒಂದಲ್ಲ ಒಂದು ರೋಗಗಳು ಬಿಟ್ಟೂ ಬಿಡದೆ ಪೀಡಿಸುತ್ತಿವೆ. ಜೊತೆಗೆ ಕಾಲಕಾಲಕ್ಕೆ ಮಳೆಯೂ ಇಲ್ಲದ್ದರಿಂದ, ಅಂತರ್‌ಜಲದ ಮಟ್ಟ ಸಾವಿರ ಅಡಿಗೆ ಕುಸಿದು ಹೋಗಿದ್ದು ನೀರುಣಿಸ ಲಾಗುತ್ತಿಲ್ಲ ಆದ್ದರಿಂದ ತೆಂಗು ಅಳಿವಿನಂಚಿಗೆ ತಲುಪಿದ್ದು ಬೆಳೆಗಾರರು ನಿರಂತರ ನಷ್ಠಕ್ಕೊಳಗಾ ಗುತ್ತಿದ್ದಾರೆ. ಇವೆಲ್ಲಾ ಸಮಸ್ಯೆಗಳು ಒಂದೆಡೆಯಾದರೆ, ಪ್ರಮುಖವಾಗಿ ಕೊಬ್ಬರಿ ಬೆಲೆಯೂ ದಿನದಿಂದ ದಿನಕ್ಕೆ ಕುಸಿದು ರೈತರ ಜೀವನದಲ್ಲಿ ಚಲ್ಲಾಟವಾಡುತ್ತಿದೆ.

ನಿರ್ಲಕ್ಷ್ಯಕ್ಕೆ ರೈತರ ಆಕ್ರೋಶ: ಮುಂದೆ ಕೊಬ್ಬರಿ ಬೆಲೆ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದರೂ ಈವರೆವಿಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತ ಕಡೆ ಗಮನ ಹರಿಸದೆ ಇರುವುದು ಶೋಚನೀಯ ಸಂಗತಿಯಾಗಿದೆ. ರಾಜ್ಯ ಹಾಗು ಕೇಂದ್ರ ಸರ್ಕಾರಗಳನ್ನು ಪ್ರತಿ ನಿಧಿ ‌ುವ ತೆಂಗು ಬೆಳೆವ ಜಿಲ್ಲೆಗಳಾದ ತುಮಕೂರು, ಹಾಸನ, ಚಿಕ್ಕಮಂಗಳೂರು, ಬೆಂಗಳೂರು, ಮೈಸೂರು ಸೇರಿ ದಂತೆ ಇನ್ನು ಕೆಲ ಜಿಲ್ಲೆಗಳ ಜನಪ್ರತಿನಿಧಿಗಳ ಇಚ್ಚಾ ಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತಿದೆ ಎಂಬುದು ಬೆಳೆಗಾರರ ಆಕ್ರೋಶವಾಗಿದೆ. ಈ ಹಿನ್ನಲೆ ಯಲ್ಲಿ ಈ ಭಾಗದ ಶಾಸಕರು ಹಾಗೂ ಸಂಸದರ ನಿಯೊಗಗಳು ರಾಜ್ಯ ಹಾಗು ಕೇಂಧ್ರ ಸರ್ಕಾರಗಳ ಮೇಲೆ ನಿರಂತ ವಾಗಿ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡಿ ದರೆ ಕೊಬ್ಬ ರಿಗೆ ಕನಿಷ್ಠ 20ಸಾವಿರ ರೂ. ಬೆಂಬಲ ಬೆಲೆ ಕೊಡಿಸಲು ಸಾಧ್ಯವಾಗಿ ತೆಂಗು ಬೆಳೆಗಾರ ಉಳಿಯಲು ಸಾಧ್ಯ.

ಕೃಷಿ ಹೈರಾಣು: ದಿನದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಆದರೆ ಕೊಬ್ಬರಿ ಬೆಲೆ ಮಾತ್ರ ಹಲ ವಾರು ವರ್ಷಗಳಿದಲೂ ಅಷ್ಟರಲ್ಲೇ ಇದೆ. ಈ ಹಿನ್ನೆಲೆ ಯಲ್ಲಿ ತೆಂಗು ಬೆಳೆಯುವುದಕ್ಕಿಂತ ಬೇರೆ ಬೆಳೆಗಳನ್ನು ಬೆಳೆದು ಬದುಕು ಸಾಗಿಸೋಣವೆಂಬ ಯೋಚನೆ ತೆಂಗು ಬೆಳೆಗಾರರಲ್ಲಿದೆ. ಇದೇ ನೋವಿನಲ್ಲಿ ರೈತರು ತೋಟಗಳಿಗೆ ಬೋರ್‌ವೆಲ್ ತೋಡಿಸಿ ನೀರು, ಗೊಬ್ಬರ ಉಣಿಸುವ ಕೆಲಸಕ್ಕೆ ಗುಡ್‌ಬೈ ಹೇಳುತ್ತಿದ್ದಾರೆ. ಈವರೆಗೂ ಬೆಳೆಗಾರರು ತೋಟಗಳ ನಿರ್ವಹಣೆ ಹಾಗೂ ಹೊಸತೋಟಗಳನ್ನು ಮಾಡಲು ನೀರಿಗಾಗಿ ಬೋರ್‌ವೆಲ್ ಕೊರೆಸಲು, ಗೊಬ್ಬರ, ತಂತಿಬೇಲಿ ಇತ್ಯಾದಿ ಕೆಲಸಗಳಿಗೆ ಬ್ಯಾಂಕ್‌ಗಳಿಂದ ಸಾಲಪಡೆದು ಹೈರಾಣಾಗಿದ್ದಾರೆ. ಬದುಕು ಸಾಗಿಸಲು ಬಹುತೇಕ ಬೆಳೆಗಾರರು ಹೈನೋದ್ಯಮ ಆಶ್ರಯಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರೆ, ಅವರ ಮಕ್ಕಳು ಉದ್ಯೋಗ ಹರಸಿ ನಗರಗಳಿಗೆ ವಲಸೆ ಹೋಗುತ್ತಿ ದ್ದಾರೆ. ಇನ್ನು ಕಳೆದ 3-4ವರ್ಷಗಳಿಂದ ಶೇ.70ರಷ್ಟು ಬೆಳೆಗಾರರ ತೆಂಗಿನ ತೋಟಗಳು ನೀರಿಲ್ಲದೆ ಒಣಗುತ್ತಿವೆ. ಉಳಿದ ಶೇ.30 ರಷ್ಟು ಬೆಳೆಗಾರರ ಕೊಬ್ಬರಿಗೂ ಲಾಭದಯಕ ಬೆಲೆ ಸಿಗದೆ ಕಂಗಾಲಾ ಗುವಂತೆ ಕೊಬ್ಬರಿ ಬೆಲೆ ಬಿದ್ದು ಹೋಗಿದ್ದು ಒಟ್ಟಾರೆ ತೆಂಗು ಬೆಳೆಗಾರರ ಬದುಕು ಮೂರಾಬಟ್ಟೆಯಾಗಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.