ಬಾಕಿ ಶುಲ್ಕ ಮರುಪಾವತಿಗೆ ಆಗ್ರಹ

5.5 ಕೋಟಿ ರೂ.ಬಾಕಿ : ಸಮಸ್ಯೆ ಮುಂದುವರಿದರೆ ಪ್ರತಿಭಟನೆ

Team Udayavani, Jun 9, 2019, 1:57 PM IST

tk-tdy-2..

ತುಮಕೂರು ನಗರದ ಮಾರುತಿ ಇಂಟರ್‌ನ್ಯಾಷನಲ್ ಸ್ಕೂಲ್ನಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅನುದಾನ ರಹಿತ ಶಾಲೆಗಳ ಸಂಘದ ಅಧ್ಯಕ್ಷ ಹಾಲನೂರು ಲೇಪಾಕ್ಷ ಮಾತನಾಡಿದರು.

ತುಮಕೂರು : ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಗೆ ಹಿಂದಿನ ವರ್ಷ, 2018-19 ನೇ ಸಾಲಿನ ಶುಲ್ಕ ಮರು ಪಾವತಿ 5.5 ಕೋಟಿ ರೂ. ಇನ್ನು ಬಾಕಿ ಯಿದೆ. ಅನುದಾನ ರಹಿತ ಶಾಲೆಗಳಿಗೆ ಸರ್ಕಾರ ಮತ್ತು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಈ ರೀತಿಯ ಸಮಸ್ಯೆ ಮುಂದುವರಿದರೆ ಜೂ. 30 ರೊಳಗೆ ಪ್ರತಿಭಟನೆ ಮಾಡು ವುದಾಗಿ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘದ ಅಧ್ಯಕ್ಷ ಹಾಲನೂರು ಲೇಪಾಕ್ಷ ತಿಳಿಸಿದರು.

ನಗರದ ಮಾರುತಿ ಇಂಟರ್‌ನ್ಯಾಷನಲ್ ಸ್ಕೂಲ್ನಲ್ಲಿ ಶನಿವಾರ ಏರ್ಪ ಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಆರ್‌ಟಿಇ ಕಾಯ್ದೆ ಪ್ರಕಾರ ಜ.31 ರೊಳಗೆ ಪಾವತಿಯಾಗಬೇಕಿದ್ದ ಹಣವನ್ನು ಈವರೆಗೆ ಕೇವಲ ಒಂದು ಕಂತು ಮಾತ್ರ ಕಳೆದ ತಿಂಗಳು ಬಾಕಿಯಿದ್ದು, ಇನ್ನು ಹೆಚ್ಚಿನ ಶುಲ್ಕವು ಬಾಕಿಯಿದೆ. ಶಾಲಾ ಬ್ಯಾಗ್‌, ಪಠ್ಯ ಪುಸ್ತಕಗಳ ಸಂಬಂಧಿಸಿದಂತೆ ಶೇ.75 ರಷ್ಟು ಪುಸ್ತಕಗಳು ಮಾರಾಟ ವಾಗಿದ್ದು, 25 ರಷ್ಟು ಹಾಗೆ ಉಳಿದಿವೆ. ಇದರಲ್ಲಿ ಹಲವು ಲೋಪದೋಷಗಳಿವೆ. ಶಾಲೆಗಳಲ್ಲಿ ಸರ್ಕಾರ ತುಂಬಿರುವ ಆರ್‌ಟಿಇ ಸೀಟುಗಳು 20-30 ಸಂಖ್ಯೆಯಲ್ಲಿ ಬಿಟ್ಟುಹೋಗಿರುವ ನಿಟ್ಟಿನಲ್ಲಿ ಖಾಲಿ ಯಾಗಿವೆ, ಇವುಗಳ ನಷ್ಟವನ್ನು ಸರ್ಕಾರ ಭರಿಸಬೇಕು ಎಂದರು.

ಅನುದಾನ ರಹಿತ ಶಾಲೆಗಳಿಗೆ ಅಧಿಕಾರಗಳು ಭೇಟಿ ನೀಡಿ ಕಿರುಕುಳ ನೀಡುತ್ತಿದ್ದು, ಅಧಿಕಾರಿಗಳ ಹಾಗೂ ರಾಜ್ಯ ಸರ್ಕಾರದ ಕೆಂಗಣ್ಣು ಖಾಸಗಿ ಶಾಲೆಗಳ ಮೇಲೆ ಬಿದ್ದಿದೆ. ಶಾಲೆಯಲ್ಲಿ ಮೂಲಭೂತ ಸೌಲಭ್ಯ, ಬ್ಯಾಗ್‌, ಹಾಗೂ ಪಠ್ಯಪುಸ್ತಕಗಳ ಶುಲ್ಕವನ್ನು ಸಾಮಾನ್ಯ ವಾಗಿ ತೆಗೆದುಕೊಳ್ಳದೇ ಜಿಎಸ್ಟಿ ನೆಪವೊಡ್ಡಿ ಹೆಚ್ಚಿನ ಶುಲ್ಕವನ್ನು ಪಡೆಯುತ್ತಿದ್ದಾರೆ. ಸೆಪ್ಟೆಂಬರ್‌ 2018 ರಲ್ಲೇ ಹಣ ಪಾವತಿ ಸಿದ್ದರೂ ಪುಸ್ತಕ ಇನ್ನೂ ನೀಡಿಲ್ಲ. ಕಳೆದ ವರ್ಷ ಈ ಸಮಸ್ಯೆಯನ್ನು ಎದುರಿ ಸಿದ್ದೇವೆ. ಪ್ರಸಕ್ತ ವರ್ಷವು ಕೂಡ ಈ ರೀತಿಯ ಸಮಸ್ಯೆಯ ಆತಂಕವಿದೆ ಎಂದು ಮಾತನಾಡಿದರು.

ಅನುದಾನ ರಹಿತ ಶಾಲೆಗಳ ಸಂಘದ ಮುಖ್ಯಸ್ಥರಾದ ಡಾ.ಜಯರಾಮ್‌ ರಾವ್‌, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್‌ರಾವ್‌, ಪ್ರಕಾಶ್‌ ರಾವ್‌, ಜಂಟಿ ಕಾರ್ಯದರ್ಶಿ ಲೋಕೇಶ್‌, ಮಂಜುನಾಥ್‌, ಖಜಾಂಚಿ ಚಂದ್ರ ಶೇಖರ್‌ ಪದಾಧಿಕಾರಿಗಳಾದ ನಿಖೀಲ್, ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.