ತ್ಯಾಜ್ಯ ವೈಜ್ಞಾನಿಕ ವಿಲೇವಾರಿಯಿಂದ ಹಾನಿಯಿಲ್ಲ

ಕಣ್ವ ಗ್ರಾಮದ ನಾಗರಿಕರಿಂದ ವಿಲೇವಾರಿಗೆ ವಿರೋಧ

Team Udayavani, Jun 9, 2019, 2:10 PM IST

ramanagar-tdy-1

ರಾಮನಗರ: ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಗಡಿ ಭಾಗ ಕಣ್ವ ಗ್ರಾಮದ ಬಳಿಯ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮತ್ತೆ ವಿರೋಧ ವ್ಯಕ್ತವಾಗಿದೆ. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಕಣ್ವ ಗ್ರಾಮದ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಕಣ್ವ ಗ್ರಾಮದ ಬಳಿಯ ಗೋಮಾಳ ಸ್ಥಳ ಇಳಿಜಾರಿನದ್ದಾಗಿದೆ. ಇಲ್ಲಿ ತಾಜ್ಯ ವಿಲೇವಾರಿ ಘಟಕ ಸ್ಥಾಪಿಸಿದರೆ, ಕಲುಷಿತ ನೀರು ಜನವಸತಿ ಪ್ರದೇಶಗಳಿಗೆ ಹರಿದು ಬರುತ್ತದೆ. ಪಕ್ಕದಲ್ಲೇ ಇರುವ ಕಣ್ವ ನದಿ ಮಲೀನಗೊಳ್ಳುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸದಿದರು.

ಕಸದಿಂದ ಈಗಾಗಿರುವ ಅನಾಹುತವೇ ಸಾಕು: ರೈತ ಸಂಘದ  ಘಟಕದ ಅಧ್ಯಕ್ಷ ಕೆ.ಎಸ್‌. ಲಕ್ಷ್ಮಣ ಸ್ವಾಮಿ ಮಾತನಾಡಿ ಕೆಲವು ವರ್ಷಗಳ ಹಿಂದೆ ಕಣ್ವ ಗ್ರಾಮದ ಬಳಿಯ ಗೋಮಾಳದಲ್ಲಿ ಅವೈಜ್ಞಾನಿಕವಾಗಿ ಚನ್ನಪಟ್ಟಣ ಮತ್ತು ರಾಮನಗರ ನಗರಸಭೆಗಳು ಇಲ್ಲಿ ಟನ್‌ಗಟ್ಟಲೆ ಕಸ ಸುರಿದಿವೆ. ಮಳೆಗಾಲದಲ್ಲಿ ಈ ಕಸ ತೋಯ್ದು, ಕೊಳೆತು, ಇಳಿಜಾರಿನಲ್ಲಿ ಮಲೀನ ನೀರು ಹರಿದಿದೆ. ಕಣ್ವ ನದಿಯನ್ನು ಸೇರಿದೆ. ಸುತ್ತಮುತ್ತಲ ಸ್ಥಳವನ್ನು ಮಲೀನಗೊಳಿಸಿದೆ. ಇದು ಇಡೀ ಪರಿಸರ ವನ್ನು ಮಲೀನಗೊಳಿಸಲು ಆರಂಭಿಸಿದ್ದರಿಂದಲೇ ಪ್ರತಿಭಟನೆಗಳು ನಡೆದಿವೆ. ಕಸ ಸುರಿಯುವುದನ್ನು ತಡೆಯಲಾಗಿದೆ ಎಂದು ಗ್ರಾಮಸ್ಥರ ವಿರೋಧಕ್ಕೆ ಕಾರಣವನ್ನು ಸ್ಪಷ್ಟಪಡಿಸಿದರು.

ತಪ್ಪು ಕಲ್ಪನೆ, ಅಪನಂಬಿಕೆ ಬೇಡ: ಕನ್ನಡ ಸಾಹಿತ್ಯ ಪರಿಷತ್ತಿನ  ಘಟಕದ ಅಧ್ಯಕ್ಷ$ ಸಿಂ.ಲಿಂ. ನಾಗರಾಜ ಮಾತನಾಡಿ, ತ್ಯಾಜ್ಯ ವಿಲೇವಾರಿ ಘಟಕದ ಬಗ್ಗೆ ಆ ಭಾಗದ ಜನರಲ್ಲಿ ಕೆಲ ತಪ್ಪು ಕಲ್ಪನೆ ಮತ್ತು ಅಪನಂಬಿ ಕೆಗಳಿವೆ. ಅದನ್ನು ಹೋಗಲಾಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಮೈಸೂರಿನಲ್ಲಿ ನಿರ್ಮಿಸಲಾದ ತ್ಯಾಜ್ಯ ವಿಲೇವಾರಿ ಘಟಕ ಅತ್ಯಂತ ವೈಜ್ಞಾನಿಕ ಮತ್ತು ಆಧುನಿಕವಾಗಿದೆ. ಕಡಿಮೆ ಸ್ಥಳಾವಕಾಶ ಸಾಕಾಗುತ್ತದೆ ಎಂದು ಹೇಳಿದರು.

ಗ್ರಾಮಸ್ಥರ ಮನವೊಲಿಸುವ ಪ್ರಯತ್ನ: ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಪಿ. ಮುಲ್ಲೆ ಮುಹಿಲನ್‌ ಮಾತನಾಡಿ, ಕಣ್ವ ಗ್ರಾಮದ ಬಳಿಯ ಗೋಮಾಳದಲ್ಲಿ ಉದ್ದೇಶಿಸಲಾಗಿರುವ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಸಂಬಂಧ ಆ ಭಾಗದ ಜನಪ್ರತಿನಿಧಿಗಳು ಮತ್ತು ಪ್ರಮುಖರ ಮನವೊಲಿಸುವ ಪ್ರಯತ್ನ ಮುಂದುವರಿಯಲಿದೆ ಎಂದರು.

ಘಟಕ ಸ್ಥಾಪನೆ ಅನಿವಾರ್ಯ: ಎರಡೂ ನಗರಗಳಲ್ಲಿ ಉತ್ಪಾದನೆಯಾಗುತ್ತಿರುವ ಕಸದ ನಿರ್ವಹಣೆಗೆ ವಿಲೇವಾರಿ ಘಟಕ ಸ್ಥಾಪನೆ ಅನಿವಾರ್ಯ. ಆದರೆ ಸ್ಥಳೀಯರ ವಿರೋಧದಿಂದಾ ಗಿಯೇ ವೈಜ್ಞಾನಿಕ ವಿಲೇವಾರಿ ಯೋಜನೆ ನನೆಗುದಿಗೆ ಬಿದ್ದಿದೆ. ಆ ಭಾಗದ ರೈತ ಮುಖಂಡರು, ಹೋರಾಟ ಗಾರರು, ಎರಡು ನಗರಸಭೆ ಆಯುಕ್ತರು ಸೂಕವಾಗಿ ಚರ್ಚಿಸಿ ನಿರ್ಣಯಕ್ಕೆ ಬರಬೇಕಾಗಿದೆ. ಕಣ್ವ ಬಳಿ ಕಸ ವಿಲೇವಾರಿ ಘಟಕ ಸ್ಥಾಪನೆಯಿಂದ ಪರಿಸರಕ್ಕೆ ಹಾನಿಯಾಗದಂತೆ ಮತ್ತು ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡುವ ಭರವಸೆ ನೀಡಿದರು.

ಗಮನ ಸೆಳೆದ ಕಕಜವೇ ಪದಾಧಿಕಾರಿಗಳು: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್‌ ಗೌಡ, ಜಿಲ್ಲಾ  ಘಟಕದ ಯೋಗೇಶ್‌ ಗೌಡ ತಮ್ಮ ಕುತ್ತಿಗೆಗೆ ಪ್ಲಾಸ್ಟಿಕ್‌ ಬಾಟಲಿ ಮುಂತಾದ ವಸ್ತುಗಳ ಹಾರವನ್ನು ಧರಿಸಿದ್ದು ಗಮನ ಸೆಳೆಯಿತು.ಪ್ಲಾಸ್ಟಿಕ್‌ ಬಳಕೆಯನ್ನು ನಿಯಂತ್ರಿಸಿ ಪರಿಸರ ಉಳಿಸಿ ಎಂಬ ಸಂದೇಶವನ್ನು ಜಿಲ್ಲಾಡಳಿತಕ್ಕೆ ನೀಡಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.