ಎಫ್ಡಿಎ ನೇಮಕಾತಿ ಪ್ರವೇಶ ಪರೀಕ್ಷೆಗೆ 1,032 ಮಂದಿ ಗೈರು


Team Udayavani, Jun 10, 2019, 3:00 AM IST

fda

ಚಿಕ್ಕಬಳ್ಳಾಪುರ: ರಾಜ್ಯ ಲೋಕಸೇವಾ ಆಯೋಗ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಭಾನುವಾರ ನಡೆಸಿದ ಪ್ರವೇಶ ಪರೀಕ್ಷೆಗೆ ಜಿಲ್ಲಾ ಕೇಂದ್ರದಲ್ಲಿ ಒಟ್ಟು 8 ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದೇ ಪರೀಕ್ಷೆ ಸುಗಮವಾಗಿ ನಡೆದಿದ್ದು, ನೊಂದಾಯಿತರ ಪೈಕಿ ಬರೋಬ್ಬರಿ 1,032 ಮಂದಿ ಪರೀಕ್ಷೆಗೆ ಗೈರಾಗಿದ್ದರು.

ಪ್ರವೇಶ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 3,666 ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು ಆ ಪೈಕಿ ಬೆಳಗ್ಗೆ 10 ರಿಂದ 11.30ರ ವರೆಗೂ ನಡೆದ ಸಾಮಾನ್ಯ ವಿಷಯ ಪರೀಕ್ಷೆಗೆ 3,666 ಮಂದಿ ಪೈಕಿ 2.647 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದು 1,019 ಮಂದಿ ಅಭ್ಯರ್ಥಿಗಳು ಗೈರಾದರೆ ಮಧ್ಯಾಹ್ನ 2 ರಿಂದ 3:30ರ ವರೆಗೂ ನಡೆದ ಸಾಮಾನ್ಯ ಕನ್ನಡ ಹಾಗೂ ಆಂಗ್ಲ ಪರೀಕ್ಷೆಗೆ ನೊಂದಾಯಿತ ಒಟ್ಟು 3,666 ಮಂದಿ ಅಭ್ಯರ್ಥಿಗಳ ಪೈಕಿ 2.634 ಮಂದಿ ಪರೀಕ್ಷೆ ಬರೆದು ಉಳಿದ 1,032 ಪರೀಕ್ಷೆಗೆ ಗೈರಾಗಿದ್ದರೆಂದು ಪರೀಕ್ಷಾ ನೋಡಲ್‌ ಅಧಿಕಾರಿಯಾಗಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್‌ “ಉದಯವಾಣಿ’ಗೆ ತಿಳಿಸಿದರು.

8 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ: ನಗರದ ಸೆಂಟ್‌ ಜೋಸೆಪ್‌ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 642 ಮಂದಿ ಪೈಕಿ ಬೆಳಗØಗೆ 447 ಮಂದಿ ಪರೀಕ್ಷೆ ಬರೆದು 195 ಮಂದಿ ಗೈರಾದರೆ ಮಧ್ಯಾಹ್ನ ನಡೆದ ಪರೀಕ್ಷೆಯಲ್ಲಿ 444 ಮಂದಿ ಪರೀಕ್ಷೆ ಬರೆದು 198 ಗೈರಾಗಿದ್ದರು. ನಗರದ ಸರ್ಕಾರಿ ಪ್ರಾಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 600 ಮಂದಿ ಅಭ್ಯರ್ಥಿಗಳ ಪೈಕಿ 442 ಮಂದಿ ಪರೀಕ್ಷೆ ಬರೆದು ಉಳಿದ 158 ಮಂದಿ ಗೈರಾದರೆ, ಮಧ್ಯಾಹ್ನ ನಡೆದ ಪರೀಕ್ಷೆಯಲ್ಲಿ 441 ಮಂದಿ ಪರೀಕ್ಷೆ ಬರೆದು ಉಳಿದ 159 ಮಂದಿ ಗೈರಾಗಿದ್ದರು.

130 ಮಂದಿ ಗೈರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 480 ವಿದ್ಯಾರ್ಥಿಗಳ ಪೈಕಿ ಬೆಳಗ್ಗೆ ಒಟ್ಟು 354 ಮಂದಿ ಹಾಜರಾಗಿ ಉಳಿದ 126 ವಿದ್ಯಾರ್ಥಿಗಳು ಗೈರಾದರೆ ಮಧ್ಯಾಹ್ನ ನಡೆದ ಪರೀಕ್ಷೆಯಲ್ಲಿ 350 ಮಂದಿ ಹಾಜರಾಗಿ ಉಳಿದ 130 ಮಂದಿ ಅಭ್ಯಥಿ ìಗಳು ಗೈರಾಗಿದ್ದರು.

ನಗರದ ಬಿಬಿ ರಸ್ತೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 480 ವಿದ್ಯಾರ್ಥಿಗಳ ಪೈಕಿ 355 ಮಂದಿ ಹಾಜರಾಗಿ ಉಳಿದ 125 ಮಂದಿ ಗೈರಾದರೆ ಮಧ್ಯಾಹ್ನ 353 ಮಂದಿ ಹಾಜರಾಗಿ 127 ಮಂದಿ ಗೈರಾಗಿದ್ದರು. ನಗರದ ಹೊರ ವಲಯದ ಬಿಜಿಎಸ್‌ ಗ್ರಾಮಾಂತರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟಿಉ 480 ಅಭ್ಯರ್ಥಿಗಳ ಪೈಕಿ 348 ಮಂದಿ ಪರೀಕ್ಷೆ ಬರೆದು ಉಳಿದ 132 ಮಂದಿ ಗೈರಾದರೆ ಮಧ್ಯಾಹ್ನ 347 ಮಂದಿ ಹಾಜರಾಗಿ 133 ಮಂದಿ ಗೈರಾಗಿದ್ದರು.

ಸರ್‌ಎಂವಿ ಪ್ರೌಢ ಶಾಲೆಯಲ್ಲಿ ಒಟ್ಟು 360 ಅಭ್ಯರ್ಥಿಗಳ ಪೈಥಕಿ 270 ಮಂದಿ ಪರೀಕ್ಷೆ ಬರೆದು 90 ಮಂದಿ ಗೈರಾದರೆ, ಮಧ್ಯಾಹ್ನ 269 ಮಂದಿ ಪರೀಕ್ಷೆ ಬರೆದು 91 ಮಂದಿ ಗೈರಾಗಿದ್ದರು. ಬಿಜಿಎಸ್‌ ಗ್ರಾಮಾಂತರ ಪ್ರೌಢ ಶಾಲೆಯಲ್ಲಿ ಒಟ್ಟು 360 ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡು ಪರೀಕ್ಷೆಗೆ 253 ಮಂದಿ ಹಾಜರಾಗಿ ಉಳಿದ 107 ಮಂದಿ ಗೈರಾದರೆ, ಮಧ್ಯಾಹ್ನ 252 ಮಂದಿ ಪರೀಕ್ಷೆ ಬರೆದು 108 ಮಂದಿ ಗೈರಾಗಿದ್ದರು.

ನಗರದ ವಾಪಸಂದ್ರದ ಜಚನಿ ಕಾಲೇಜಿನಲ್ಲಿ ಒಟ್ಟು 264 ಮಂದಿ ನೊಂದಾಯಿತ ಅಭ್ಯರ್ಥಿಗಳ ಪೈಕಿ 178 ಮಂದಿ ಮಾತ್ರ ಪರೀಕ್ಷೆ ಬರೆದು ಉಳಿದ 86 ಅಭ್ಯರ್ಥಿಗಳು ಗೈರಾಗಿದ್ದು, ಮಧ್ಯಾಹ್ನ 178 ಮಂದಿ ಪರೀಕ್ಷೆ ಬರೆದು 86 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಭದ್ರತೆ: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದ್ವೀತಿಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಪ್ರವೇಶ ಪರೀಕ್ಷೆ ನಡೆಸಿ 8 ಕೇಂದ್ರಗಳಿಗೂ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಪ್ರತಿ ಕೇಂದ್ರಕ್ಕೆ ಪುರುಷ ಹಾಗೂ ಮಹಿಳಾ ವೀಕ್ಷಕರನ್ನು ನೇಮಿಸಲಾಗಿತ್ತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಜಿಲ್ಲಾ ಮಟ್ಟದಲ್ಲಿ ಜಾಗೃತ ದಳ ಹಾಗೂ ವೀಕ್ಷಕ ದಳವನ್ನು ನಿಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.