ಎರಡು ಗುಜರಿ ವ್ಯಾಪಾರ ಸಂಸ್ಥೆಗಳಿಂದ 83 ಕೋಟಿ ರೂ. ಜಿಎಸ್ಟಿ ವಂಚನೆ ಪತ್ತೆ
Team Udayavani, Jun 10, 2019, 3:00 AM IST
ಮಂಗಳೂರು: ಎರಡು ಗುಜರಿ ವ್ಯಾಪಾರಿ ಸಂಸ್ಥೆಗಳು 83 ಕೋಟಿ ರೂ.ಗಳಷ್ಟು ಸರಕು ಸೇವಾ ತೆರಿಗೆ (ಜಿಎಸ್ಟಿ) ವಂಚನೆ ಮಾಡಿದ ಪ್ರಕರಣವನ್ನು ಮಂಗಳೂರಿನ ಕೇಂದ್ರೀಯ ಜಿಎಸ್ಟಿ ಕಮಿಷನರೆಟ್ ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದೆ.
ಮಂಗಳೂರಿನ ಗುಜರಿ ವ್ಯಾಪಾರಿ ಮೆ| ತೌಹೀದ್ ಸ್ಕ್ರೇಪ್ ಡೀಲರ್ನ ಪಿ.ಕೆ.ಅಬ್ದುಲ್ ರಹೀಂ ಮತ್ತು ಮೆ|ಎಂ.ಕೆ. ಟ್ರೇಡರ್ಸ್ ಮಾಲೀಕ ಅಬ್ದುಲ್ ಖಾದರ್ ಕೂಳೂರು ಚಾಯಬ್ಬ ಬಂಧಿತರು. ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇವರಿಬ್ಬರೂ 2018ರಿಂದ ನಕಲಿ ಬಿಲ್ ತಯಾರಿಸಿ, ಸರಕಾರಕ್ಕೆ ಜಿಎಸ್ಟಿ ಪಾವತಿಸದೆ ವಂಚನೆ ಎಸಗುತ್ತಿದ್ದರು. ಎರಡೂ ಸಂಸ್ಥೆಗಳು ಸುಮಾರು 15 ಕೋಟಿ ರೂ.ಮೊತ್ತದ ನಕಲಿ ಬಿಲ್ ಬಳಕೆ ಮಾಡಿದ್ದು, ಒಟ್ಟು 83 ಕೋಟಿ ರೂ.ಮೊತ್ತದ ಸರಕು ಇದರಲ್ಲಿ ಒಳಗೊಂಡಿದೆ ಎಂದು ಕೇಂದ್ರೀಯ ಜಿಎಸ್ಟಿ ಕಮಿಷನರ್ ಧರ್ಮಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ವ್ಯವಹಾರ ನಡೆಯುತ್ತಿದ್ದುದು ಹೀಗೆ: ಮೆ| ತೌಹೀದ್ ಸ್ಕ್ರೇಪ್ ಡೀಲರ್ ಮತ್ತು ಮೆ| ಎಂ.ಕೆ. ಟ್ರೇಡರ್ ಸಂಸ್ಥೆಗಳು ಬೇರೆ, ಬೇರೆ ಸಂಸ್ಥೆಗಳಿಂದ ಸರಕು ಸಾಗಾಟಕ್ಕೆ ಸಂಬಂಧಿಸಿ ನಕಲಿ ಬಿಲ್ (ಇನ್ವಾಯ್ಸ) ತಯಾರಿಸಿ ಅದರ ಆಧಾರದಲ್ಲಿ ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ಪಡೆದು ಸರಕಾರಕ್ಕೆ ವಂಚಿಸುತ್ತಿದ್ದವು. ಇಲ್ಲಿ ನಿಜವಾಗಿಯೂ ಸರಕು ಸಾಗಾಟ ಆಗುತ್ತಿರಲಿಲ್ಲ.
ಈ ಸಂಸ್ಥೆಗಳ ಮಾಲೀಕರು ನೋಂದಣಿ ರಹಿತ ವ್ಯಾಪಾರಿಗಳಿಂದ ಖರೀದಿಸಿದ ಲೋಹದ ಗುಜರಿ ಸಾಮಗ್ರಿಗಳನ್ನು ಅಲ್ಯೂಮಿನಿಯಂ ಎಂಎಸ್ ಕಾಪರ್ ರಾಡ್ಸ್ ಇಂಗೊಟ್ಸ್ ಕಾಸ್ಟಿಂಗ್ಸ್ ಮತ್ತಿತರ ಸಾಮಗ್ರಿಗಳ ತಯಾರಿಕ ಸಂಸ್ಥೆಗಳಿಗೆ ಪೂರೈಕೆ ಮಾಡುವ ಸಂದರ್ಭದಲ್ಲಿ ಜಿಎಸ್ಟಿ ಪಾವತಿಯಿಂದ ತಪ್ಪಿಸಿಕೊಳ್ಳಲು ಈ ನಕಲಿ ಐಟಿಸಿಗಳನ್ನು ಉಪಯೋಗಿಸುತ್ತಿದ್ದರು.
ಅಲ್ಲದೆ, ಅವರು ನಕಲಿ ಬಿಲ್ ಹೊಂದಿದವರಿಗೆ ನಕಲಿ ಐಟಿಸಿ ಕ್ರೆಡಿಟ್ ವರ್ಗಾವಣೆ ಮಾಡಲು ಕೂಡ ಈ ನಕಲಿ ಬಿಲ್ಗಳನ್ನು ಉಪಯೋಗಿಸುತಿದ್ದರು. ಆರೋಪಿಗಳು ನಕಲಿ ಬಿಲ್ ತಯಾರಿಸುವ ವ್ಯಕ್ತಿಗೆ ಶೇ.3ರಷ್ಟು ಕಮಿಷನ್ ಪಾವತಿ ಮಾಡುತ್ತಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ