ಸ್ವಚ್ಛ ಮಂಗಳೂರು ಅಭಿಯಾನ ದೇಶಕ್ಕೇ ಮಾದರಿ: ಸ್ವಾಮಿ ವೇದನಿಷ್ಠಾನಂದಜಿ


Team Udayavani, Jun 10, 2019, 6:10 AM IST

swatcha

ಮಹಾನಗರ: ರಾಮಕೃಷ್ಣ ಮಿಷನ್‌ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 27ನೇ ವಾರದ ಶ್ರಮದಾನ ರವಿವಾರ ಜಪ್ಪಿನಮೊಗರು ಪ್ರದೇಶದಲ್ಲಿ ನಡೆಯಿತು.

ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯ ಲ್ಲಿರುವ ನೂತನವಾಗಿ ನಿರ್ಮಿಸಲಾದ ಬಸ್‌ ತಂಗುದಾಣದ ಮುಂಭಾಗದಲ್ಲಿ 27ನೇ ಶ್ರಮದಾನಕ್ಕೆ ರಾಮಕೃಷ್ಣ ಮಿಷನ್‌ನ ‘ವೇದಾಂತ ಕೇಸರಿ’ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಸ್ವಾಮಿ ಮಹಾಮೇಧಾನಂದಜಿ ಅವರು ಚಾಲನೆ ನೀಡಿದರು.

ಜಪ್ಪಿನಮೊಗರುವಿನಲ್ಲಿ ನೂತನವಾಗಿ ನಿರ್ಮಿ ಸಲಾದ ಬಸ್‌ ತಂಗುದಾಣವನ್ನು ರಾಮಕೃಷ್ಣ ಮಿಷನ್‌ನ ರಾಜಕೋಟ್‌ನ ಸ್ವಾಮಿ ವೇದ ನಿಷ್ಠಾನಂದಜಿ ಅವರು ಲೋಕಾರ್ಪಣೆ ಮಾಡಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌, ಸುರೇಂದ್ರ ಜೆ., ಉಮಾಪ್ರಸಾದ್‌ ಕಡೇಕಾರ್‌, ರಾಜೇಶ್‌ ಕರ್ಕೇರ, ರಾಕೇಶ್‌ ಆ್ಯಂಟನಿ, ಹರೀಶ್‌ ಗೌರಿಶಂಕರ್‌, ಚಿಂತನ್‌ ಡಿ.ವಿ. ಮತ್ತಿತರರು ಉಪಸ್ಥಿತರಿದ್ದರು.

ಸ್ವಾಮಿ ವೇದನಿಷ್ಠಾನಂದಜಿ ಮಾತನಾಡಿ, ಸ್ವಾಮಿ ವಿವೇಕಾನಂದರ ಆಶಯದಂತೆ ಈ ರಾಷ್ಟ್ರವನ್ನು ಕಟ್ಟುವವರು ಯುವ ಜನತೆ. ಆ ನಿಟ್ಟಿನಲ್ಲಿ ಈ ಅಭಿಯಾನದಲ್ಲಿ ಅನೇಕ ಯುವ ಜನಾಂಗ ಭಾಗವಹಿಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ ದೇಶಾದ್ಯಂತ ಇರುವ ರಾಮಕೃಷ್ಣ ಮಿಷನ್‌ನ ಇತರ ಕೆಂದ್ರಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದರು.

ಶ್ರಮದಾನಕ್ಕೆ ಚಾಲನೆ ನೀಡಿದ ಸ್ವಾಮಿ ಮಹಾಮೇಧಾನಂದಜಿ ಅವರು ಮಾತ ನಾಡಿ, ಸಮಾಜದ ಉನ್ನತಿಗಾಗಿ ಮನುಷ್ಯ ತನ್ನ ಸ್ವಾರ್ಥವನ್ನು ತ್ಯಾಗ ಮಾಡಬೇಕಾಗುತ್ತದೆ. ನಾವು ಒಳ್ಳೆಯವರಾಗಿದ್ದರೆ ಸಾಲದು ನಮ್ಮ ಸುತ್ತಲಿನವರನ್ನು ಒಳ್ಳೆಯವರನ್ನಾಗಿ ಮಾಡಲು ಪ್ರಯತ್ನಿಸಬೇಕು. ನಿಸ್ವಾರ್ಥ ಜನರು ಮಂಗಳೂರಿನ ಸ್ವಚ್ಛತೆಯಲ್ಲಿ ಒಂದು ತಂಡವಾಗಿ ಕಾರ್ಯ ನಿರ್ವಹಿಸು ತ್ತಿರುವುದರಿಂದ ನಗರ ಸ್ವಚ್ಛವಾಗಿ ಕಾಣಲು ಸಾಧ್ಯವಾಗಿದೆ. ದೇಶಾದ್ಯಂತ ಇರುವ ಎಲ್ಲ ರಾಮಕೃಷ್ಣ ಮಿಷನ್‌ ಕೇಂದ್ರಗಳಿಗೆ ಸ್ವಚ್ಛ ಮಂಗಳೂರು ಎಂಬ ಮಾದರಿ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಮಂಗಳೂರಿಗೆ ಸಲ್ಲಬೇಕು ಎಂದು ಹೇಳಿ ಶುಭ ಹಾರೈಸಿದರು.

ಶ್ರಮದಾನ

ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯ ಬದಿಗಳು ಕಟ್ಟಡ, ಪ್ಲಾಸ್ಟಿಕ್‌ ತ್ಯಾಜ್ಯದಿಂದ ತುಂಬಿ ಅಸಹ್ಯ ಹುಟ್ಟಿಸುತ್ತಿದ್ದವು. ಪರಿಸರ ವನ್ನು ಸ್ವಚ್ಛಗೊಳಿಸಲಾಯಿತು. ಸ್ವಯಂ ಸೇವಕರು ಜಪ್ಪು ರಸ್ತೆಯಲ್ಲಿರುವ ಹಳೆ ಬಸ್‌ ತಂಗುದಾಣದ ಸುತ್ತಮುತ್ತ ಹಾಗೂ ನೂತನವಾಗಿ ನಿರ್ಮಿಸಿದ ಬಸ್‌ ತಂಗುದಾಣದ ಹಿಂಭಾಗ, ಬದಿಗಳನ್ನು ಸ್ವಚ್ಛಗೊಳಿಸಿದರು. ಸ್ವಚ್ಛ ಎಕ್ಕೂರು ತಂಡ ಯಶೋಧರ ಚೌಟ, ಪ್ರಶಾಂತ ಎಕ್ಕೂರ್‌ ನೇತೃತ್ವದಲ್ಲಿ ನೇತ್ರಾವತಿ ಸೇತುವೆಯ ಬದಿಗಳನ್ನು ಸ್ವಚ್ಛಗೊಳಿಸಿತು. ಸಿಟಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಜೆಸ್ಲಿ ಬಾರ್ವಿನ್‌, ಹರ್ಷ ಎಲಿಜಬೆತ್‌ ಮಾರ್ಗದರ್ಶನದಲ್ಲಿ ತೋಡುಗಳಲ್ಲಿದ್ದ ಪ್ಲಾಸ್ಟಿಕ್‌ ಹಾಗೂ ಕಲ್ಲು , ಮಣ್ಣು ತೆಗೆದು ಶುಚಿ ಮಾಡಿದರು.

ಜಪ್ಪಿನಮೊಗರು ಹೆದ್ದಾರಿಯಲ್ಲಿ ಬಸ್‌ ಪ್ರಯಾಣಿಕರಿಗೆ ತಂಗುದಾಣ ಇಲ್ಲದೆ ರಸ್ತೆ ಬದಿಯಲ್ಲಿ ನಿಂತುಕೊಳ್ಳಬೇಕಾದ ಪರಿಸ್ಥಿತಿ ಇತ್ತು. ಅಲ್ಲದೇ ಅದು ಅಪ ಘಾತಕ್ಕೆ ಆಹ್ವಾನವನ್ನೂ ನೀಡುತ್ತಿತ್ತು. ಪೊಲೀಸ್‌ ಇಲಾಖೆಯ ಕೋರಿಕೆ, ಜನರ ಮನವಿಯ ಮೇರೆಗೆ ರಾಮಕೃಷ್ಣ ಮಿಷನ್‌ ಸ್ವಚ್ಛ ಮಂಗಳೂರು ಅಭಿಯಾನದಡಿ ಅಲ್ಲಿ ಇದೀಗ ನೂತನವಾಗಿ ಬಸ್‌ ತಂಗುದಾಣವನ್ನು ನಿರ್ಮಿಸಿ ಕೊಟ್ಟಿದೆ. ಸ್ವಚ್ಛತೆಯ ಸಂದೇ ಶ ಸಾರುವ ಬೋರ್ಡುಗಳನ್ನು ತಂಗು ದಾಣದಲ್ಲಿ ಅಳವಡಿಸಲಾಗಿದೆ. ಅಭಿಯಾನ ದ ಪ್ರಧಾನ ಸಂಯೋಜಕ ದಿಲ್ರಾಜ್‌ ಆಳ್ವ ಮುತುವರ್ಜಿಯಲ್ಲಿ ತಂಗುದಾಣ ನಿರ್ಮಾಣವಾಗಿದೆ. ಎಂಆರ್‌ಪಿಎಲ್ ಸಂಸ್ಥೆ ಆರ್ಥಿಕ ನೆರವು ಒದಗಿಸಿ ಸಹಕರಿಸಿದೆ.

ಬಸ್‌ ತಂಗುದಾಣ ನಿರ್ಮಾಣ ಮಾಡಬೇಕಾಗಿದ್ದ ಸ್ಥಳದಲ್ಲಿ ಹಳೆಯ ಕಟ್ಟಡ ತ್ಯಾಜ್ಯ ಸುರಿದಿದ್ದರು. ಕಳೆದ ಒಂದು ವಾರದಿಂದ ಅದನ್ನೆಲ್ಲ ತೆಗೆದು ಆ ಸ್ಥಳವನ್ನು ಸಮತಟ್ಟುಗೊಳಿಸಿ ಬಸ್‌ ತಂಗುದಾಣವನ್ನು ನಿರ್ಮಿಸಲಾಗಿದೆ. ಇಂದು ಕೂಡ ಕಟ್ಟಡ, ಪ್ಲಾಸ್ಟಿಕ್‌ ತ್ಯಾಜ್ಯವನ್ನು ತೆಗೆದು ಜಾಗವನ್ನು ಸಮತಟ್ಟು ಮಾಡಲಾಯಿತು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.