ಹಾಸನದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ
Team Udayavani, Jun 10, 2019, 10:57 AM IST
ಹಾಸನ ನಗರಸಭೆ ಆರೋಗ್ಯ ನಿರೀಕ್ಷಕರು ಮತ್ತು ಸಿಬ್ಬಂದಿ ಸಗಟು ವ್ಯಾಪಾರಿ ಮಳಿಗೆಗಳು ಹಾಗೂ ಟ್ರಾನ್ಸ್ಪೋರ್ಟ್ ಗೋದಾಮುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿಕೊಂಡರು.
ಹಾಸನ: ಪ್ಲಾಸ್ಟಿಕ್ ನಿಷೇಧ ಆಂದೋಲನ ಆರಂಭಿಸಿರುವ ಹಾಸನ ನಗರಸಭೆ ನೌಕರರು ಭಾನುವಾರವೂ ನಗರದ ವಿವಿಧ ಸಗಟು ವ್ಯಾಪಾರಿ ಮಳಿಗೆಗಳು ಹಾಗು ಟ್ರಾನ್ಸ್ಪೋರ್ಟ್ ಗೋದಾಮುಗಳ ಮೇಲೆ ದಾಳಿ ನಡೆಸಿ ಸಾವಿರಾರು ರೂ. ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿದಕೊಂಡರು.
ನಗರದ ಶ್ರೀ ಚೌಡೇಶ್ವರಿ ದೇವಾಲಯ ರಸ್ತೆ ಬಳಿ ಇರುವ ಎಸ್.ಆರ್.ಕೆ. ಟ್ರೇಡರ್ ಗೋದಾಮು ಸೇರಿದಂತೆ ವಿವಿ ಧೆಡೆ ಹಾಸನ ನಗರಸಭೆ ಆರೋಗ್ಯಾಧಿ ಕಾರಿಗಳು ದಾಳಿ ಮಾಡಿ ಪ್ಲಾಸ್ಟಿಕ್ ಕವರ್ಗಳು, ಪ್ಲಾಸ್ಟಿಕ್ ಲೋಟಗಳು ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್ನ್ನು ವಶಪಡಿಸಿ ಕೊಂಡರು. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಮಾರಾಟ ಮಾಡಬಾರದೆಂದು ಹಲ ವಾರು ಬಾರಿ ಸೂಚನೆ ನೀಡಿದರೂ ಸಗಟು ವ್ಯಾಪಾರ ಮಾಡುತ್ತಿದ್ದ ಮಾಹಿತಿ ಅಧರಿಸಿ ನಗರಸಭೆ ಆರೋಗ್ಯ ನಿರೀಕ್ಷಕ ಆದೀಶ್ ಕುಮಾರ್ ಮತ್ತು ಮಂಜುನಾಥ್ ಅವರು ಸಿಬ್ಬಂದಿ ಯೊಂದಿಗೆ ದಾಳಿ ನಡೆಸಿದರು.
ಗೋದಾಮುಗಳಲ್ಲಿ ಚೀಲಗಟ್ಟಲೆ ದಾಸ್ತಾನಿದ್ದ ನಿಷೇಧಿತ ಪ್ಲಾಸ್ಟಿಕ್ನ್ನು ವಶಕ್ಕೆ ಪಡೆದುಕೊಂಡ ನಗರಸಭೆ ನೌಕರರು ವ್ಯಾಪಾರಿಗಳಿಗೆ ದಂಡ ವಿಧಿಸಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು. ಹಾಸನ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದರೂ ಪ್ಲಾಸ್ಟಿಕ್ ಬಳಕೆ ಮಾತ್ರ ನಿಂತಿಲ್ಲ. ಹಾಗಾಗಿ ನಗರಸಭೆ ಸಿಬ್ಬಂದಿ ಸಗಟು ಮಾರಾಟ ಮಳಿಗೆಗಳು ಹಾಗೂ ಲಾರಿ ಟ್ರಾನ್ಸ್ಫೋರ್ಟ್ಗಳ ಗೋದಾಮುಗಳ ಮೇಲೆ ದಾಳಿ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ