ಕಟ್ಟಡ ಛಾವಣಿ ಕುಸಿತ; ಹೆಚ್ಚಾಯ್ತು ಭಯ


Team Udayavani, Jun 10, 2019, 11:14 AM IST

10-Juen-11

ಬೀದರ: ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್‌) ಆಸ್ಪತ್ರೆ ಕಟ್ಟಡ ಮುಂಭಾಗದ ಛಾವಣಿ ಬಿದ್ದಿರುವುದು.

ಬೀದರ: ಬಹುಕೋಟಿ ರೂ.ವೆಚ್ಚದಲ್ಲಿ ನಿಮಾರ್ಣಗೊಂಡಿರುವ ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್‌) ಆಸ್ಪತ್ರೆ ಉದ್ಘಾಟನೆಗೊಂಡ ಎರಡೇ ವರ್ಷದಲ್ಲಿ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯಲು ಶುರುವಾಗಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಂತಾಗಿದೆ. ಅಲ್ಲದೇ ರೋಗಿಗಳಲ್ಲಿ ಆತಂಕ ಹುಟ್ಟುವಂತೆ ಮಾಡಿದೆ.

13-08-2017ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಯ ಕಟ್ಟಡ ಉದ್ಘಾಟಿಸಿದ್ದರು. ನಗರದಲ್ಲಿ 450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸುವ ಮೂಲಕ ಈ ಭಾಗದ ಬಡವರಿಗೆ ಆರೋಗ್ಯ ಸೇವೆ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಕಟ್ಟಡ ಕಾಮಗಾರಿ ಆರಂಭಗೊಂಡ ದಿನದಿಂದಲೇ ಕಳಪೆಯಾಗಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಅಲ್ಲದೆ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೆ ತರಾತುರಿಯಲ್ಲಿ ಆಸ್ಪತ್ರೆ ಉದ್ಘಾಟಿಸುವುದು ಬೇಡವೆಂದು ವಿರೋಧ ವ್ಯಕ್ತಪಡಿಸಿದ್ದವು.

ಕಳಪೆ ಕಾಮಗಾರಿ ಕುರಿತು ಅನೇಕ ಬಾರಿ ಆರೋಪಗಳು ಕೇಳಿ ಬಂದಿದ್ದರೂ ಜಿಲ್ಲೆಯ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿದ್ದಿಲ್ಲ. ಆದರೆ, ಶನಿವಾರ ಸಂಜೆ ಸುರಿದ ಸಾಧಾರಣ ಮಳೆಗೆ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯುವ ಮೂಲಕ ಕಟ್ಟಡ ಕಾಮಗಾರಿ ಕಳಪೆ ಎಂಬುದು ಸಾಬೀತು ಆದಂತಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ. ಅಲ್ಪ ಪ್ರಮಾಣ ಮಳೆಗೇ ಹೀಗಾದರೆ ಭಾರೀ ಮಳೆ ಬಂದರೆ ಕಟ್ಟಡ ಉಳಿಯುತ್ತಾ ಎಂಬ ಪ್ರಶ್ನೆ ಹುಟ್ಟಿಕೊಳ್ಳುವಂತಾಗಿದೆ.

ಯಾರು ಹೊಣೆ: ಸರ್ಕಾರದ ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಯ ದುಸ್ಥಿತಿಗೆ ಯಾರು ಹೊಣೆ ಎಂಬ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಸದ್ಯ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆ ಎಂದು ಗೊತ್ತಾದರೂ ಯಾವ ಅಧಿಕಾರಿಗಳು, ಸಂಬಂಧಿಸಿದ ರಾಜಕಾರಣಿಗಳು ಯಾಕೆ ಮೌನಕ್ಕೆ ಶರಣಾಗಿದ್ದಾರೆ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.

ಸಚಿವರೂ ಭೇಟಿ ನೀಡಿದ್ದರು: ಎರಡು ತಿಂಗಳ ಹಿಂದಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿದ್ದರು. ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಕಳಪೆ ಕಾಮಗಾರಿ ಕುರಿತು ಅನೇಕ ಬಾರಿ ಆರೋಪಗಳು ಕೇಳಿ ಬಂದಿದ್ದರೂ ಜಿಲ್ಲೆಯ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿದ್ದಿಲ್ಲ. ಆದರೆ, ಶನಿವಾರ ಸಂಜೆ ಸುರಿದ ಸಾಧಾರಣ ಮಳೆಗೆ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯುವ ಮೂಲಕ ಕಟ್ಟಡ ಕಾಮಗಾರಿ ಕಳಪೆ ಎಂಬುದು ಸಾಬೀತು ಆದಂತಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ.

ಆಸ್ಪತ್ರೆಯ ಕಟ್ಟಡ ಕಾಮಗಾರಿ ಆರಂಭದಿಂದ, ಆಸ್ಪತ್ರೆಯಲ್ಲಿ ಖರೀದಿಸಿದ ವಸ್ತುಗಳವರೆಗೂ ರಾಜ್ಯಮಟ್ಟದ ಅಧಿಕಾರಿಗಳ ತಂಡದಿಂದ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಅಕ್ರಮಕ್ಕೆ ಸಾಥ್‌ ನೀಡಿದವರ, ಅಕ್ರಮ ನಡೆಸಿದವರ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು. ಈ ಅಕ್ರಮದಲ್ಲಿ ರಾಜಕಾರಣಿಗಳು, ಅಧಿಕಾರಿಗಳು, ಗುತ್ತೆದಾರರು ಯಾರೇ ಶಾಮೀಲಾಗಿದ್ದರೂ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸವಾಗಬೇಕು.
ಗುರುನಾಥ ರಾಜಗೀರಾ,
ಹೋರಾಟಗಾರ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.