ನೀರಿನ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ

12ಕ್ಕೆ ನಗರಸಭೆ ವಿರುದ್ಧ ರಸ್ತೆ ತಡೆ ಹೋರಾಟಕ್ಕೆ ನಾಗರಿಕ ಸಮಿತಿ ಸಭೆ ನಿರ್ಧಾರ

Team Udayavani, Jun 10, 2019, 3:52 PM IST

kolar-tdy-5..

ಕೋಲಾರದ ಜಯನಗರ 14ನೇ ವಾರ್ಡ್‌ನ ನಾಗರೀಕರು ಭಾನುವಾರ ಸಫಲಮ್ಮ ದೇವಾಲಯದ ಮುಂಭಾಗ ಸಭೆ ನಡೆಸಿ ನೀರಿಗಾಗಿ ಜೂ.12 ರಂದು ರಸ್ತೆ ತಡೆ ನಡೆಸಲು ತೀರ್ಮಾನ ಕೈಗೊಂಡರು.

ಕೋಲಾರ: ನೀರಿನ ಸಮಸ್ಯೆ ನಿವಾರಿಸುವಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಜಯನಗರದ 14ನೇ ವಾರ್ಡ್‌ನ ನಾಗರಿಕರು ಬುಧವಾರ ಬೆಳಗ್ಗೆ 10 ಗಂಟೆಗೆ ಟೇಕಲ್ ರಸ್ತೆಯ ಸಫಲಮ್ಮ ದೇಗುಲದ ಮುಂದೆ ರಸ್ತೆ ತಡೆ ನಡೆಸಲು ತೀರ್ಮಾನ ಕೈಗೊಂಡರು.

ಸಫಲಮ್ಮ ದೇವಾಲಯದ ಆವರಣದಲ್ಲಿ ಭಾನುವಾರ ಬೆಳಗ್ಗೆ ಕರೆಯಲಾಗಿದ್ದ ಈ ಭಾಗದ ನಾಗರಿಕರ ಸಭೆಯಲ್ಲಿ ಹೋರಾಟ ನಡೆಸಲು ಒಮ್ಮತದ ನಿರ್ಣಯ ಅಂಗೀಕರಿಸಲಾಯಿತು.

ನಾಗರಿಕ ಸಮಿತಿ ಅಧ್ಯಕ್ಷ ಎನ್‌.ಗೋವಿಂದಪ್ಪ, ಕಾರ್ಯದರ್ಶಿ ಪ್ರಮೋದ್‌ಕುಮಾರ್‌ ಮಾತನಾಡಿ, ಈ ಭಾಗದ ಜನತೆ ಸತತ ಆರು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ, ಕೊಳಾಯಿಗಳ ಮೂಲಕ ನೀರು ಬರೋದಿಲ್ಲ, ಟ್ಯಾಂಕರ್‌ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಈಗಾಗಲೇ ನಾಲ್ಕಾರು ಬಾರಿ ನಗರಸಭೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ಪಂಪ್‌ಸೆಟ್ ನೀಡದೇ ನಿರ್ಲಕ್ಷ್ಯ: ನಿಕಟಪೂರ್ವ ನಗರಸಭಾ ಸದಸ್ಯ ಎಸ್‌.ಆರ್‌.ಮುರಳಿಗೌಡ, ನಮ್ಮ ವಾರ್ಡ್‌ಗೆ ನೀರು ಪೂರೈಕೆ ಮಾಡುವ ಕೊಳವೆ ಬಾವಿಗಳ ಪಂಪ್‌ ಮೋಟಾರ್‌ ಕೆಟ್ಟಿದ್ದರೂ ಸರಿಪಡಿಸದೇ ನಿರ್ಲಕ್ಷ್ಯ ತೋರಿದ್ದಾರೆ. ತಮ್ಮ ಅಧಿಕಾರ ಹೋಗಿ ಆಡಳಿತಾಧಿಕಾರಿ ನೇಮಕವಾದ ನಂತರ ನಮ್ಮ ಮಾತನ್ನು ಕೇಳುತ್ತಿಲ್ಲ ಎಂದರು.

ಕೊಳವೆ ಬಾವಿಗಳಲ್ಲಿ ನೀರಿದ್ದರೂ, ಸರಬರಾಜು ಆಗುತ್ತಿಲ್ಲ, ಪಂಪ್‌ಹೌಸ್‌ ನಿರ್ವಹಣೆಗೆ ಓರ್ವ ನಿರ್ವಾಹಕನ ನೇಮಕಕ್ಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ಈಗ ಕೇವಲ ಬೆಳಗ್ಗಿನ ಹೊತ್ತು ಮಾತ್ರ ಸಿಬ್ಬಂದಿ ನೇಮಕ ಮಾಡಿದ್ದಾರೆ. ರಾತ್ರಿ ಹೊತ್ತು ನೀರೆತ್ತಲು ಸಾಧ್ಯವಾಗುತ್ತಿಲ್ಲ ಎಂದರು.

ಜನತೆಯೂ ನೀರಿನ ಮಿತ ಬಳಕೆ ಮತ್ತು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆಯಲು ಕ್ರಮ ವಹಿಸಬೇಕು, ನೀರಿಗಾಗಿ ನಡೆಸುತ್ತಿರುವ ಈ ಹೋರಾಟದಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.

ಈ ಭಾಗದ ಮುಖಂಡರಾದ ಗಿರೀಶ್‌, ಶ್ರೀನಿವಾಸ್‌, ಮಾರ್ಕೋಂಡಪ್ಪ, ಶಿವಣ್ಣ, ಶ್ರೀರಾಮಪ್ಪ ಮಾತನಾಡಿ, ಈ ಭಾಗದ ಜನತೆ ಸಮರ್ಪಕವಾಗಿ ನಗರಸಭೆಗೆ ತೆರಿಗೆ ಪಾವತಿಸುತ್ತಿದ್ದಾರೆ, ಆದರೂ ಇಂತಹ ಅನ್ಯಾಯ ಸರಿಯೇ ಎಂದು ಪ್ರಶ್ನಿಸಿದರು. ನಗರಸಭೆ ಅಧಿಕಾರಿಗಳ ಈ ಧೋರಣೆಯಿಂದಾಗಿ ಖಾಸಗಿ ಟ್ಯಾಂಕರ್‌ಗಳನ್ನೇ ಅವಲಂಬಿಸಬೇಕಾಗಿದ್ದು, ಸಮಸ್ಯೆ ನಿವಾರಣೆಯಾಗುವವರೆಗೂ ಉಗ್ರ ಹೋರಾಟ ನಡೆಸಲು ತೀರ್ಮಾನ ಕೈಗೊಳ್ಳಿ ಎಂದು ಆಗ್ರಹಿಸಿದರು.

ಸೇರಿದ್ದ ನೂರಾರು ಮಂದಿ ನಾಗರಿಕರು, ಮಹಿಳೆಯರು ಬುಧವಾರ ಸಫಲಮ್ಮ ದೇವಾಲಯದ ಮುಂದೆ ಟೇಕಲ್ ರಸ್ತೆ ಬಂದ್‌ ಮಾಡುವ ಮೂಲಕ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡೋಣ, ನ್ಯಾಯ ಸಿಗದಿದ್ದರೆ ಹೋರಾಟ ತೀವ್ರಗೊಳಿಸೋಣ ಎಂದು ಒಮ್ಮತದ ತೀರ್ಮಾನ ಕೈಗೊಂಡರು.ಸಭೆಯಲ್ಲಿ ಈ ಭಾಗದ ಮುಖಂಡರಾದ ನಿವೃತ್ತ ಪೋಸ್ಟ್‌ ಮಾಸ್ಟರ್‌ ಶ್ರೀರಾಮಪ್ಪ, ಎಸ್‌.ಮನೋರವಿಕುಮಾರ್‌, ಮಂಜುನಾಥರೆಡ್ಡಿ, ನಾಗರಾಜ್‌, ವೆಂಕಟಕೃಷ್ಣ, ಕೃಷ್ಣೇಗೌಡ, ಪರಮೇಶ್‌, ರಾಜಗೋಪಾಲ್, ಶ್ರೀನಿವಾಸ್‌, ಗಿರೀಶ್‌, ವೆಂಕಟೇಶಪ್ಪ ಭಾಗವಹಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.