ಕೆರೆ ಭರ್ತಿ ಯೋಜನೆಗೆ ಮಂಜೂರಾತಿ ನೀಡಿ

ಜಿಲ್ಲೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೆ ಶಾಸಕ ರವಿ ಒತ್ತಾಯ

Team Udayavani, Jun 10, 2019, 4:54 PM IST

10-Juen-35

ಚಿಕ್ಕಮಗಳೂರು: ಜಿಲ್ಲೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಕೆರೆ ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಶಾಶ್ವತ ಕುಡಿಯುವ ನೀರು ಒದಗಿಸಲು ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ನೀಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ತುಂಗಾ, ಭದ್ರಾ, ನೇತ್ರಾವತಿ, ಹೇಮಾವತಿ, ವೇದಾವತಿ ನದಿಗಳು ಉಗಮವಾಗಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ನೀರುಣಿಸುವ ಜೀವನದಿಗಳಾಗಿವೆ. ಇಂತಹ ಮಲೆನಾಡು, ಅರೆಮಲೆನಾಡು, ಬಯಲುಸೀಮೆಯನ್ನು ಹೊಂದಿರುವ ಜಿಲ್ಲೆಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ. ಕಳೆದ 5-6 ವರ್ಷಗಳಿಂದ ತೀವ್ರ ಬರಗಾಲ ಕಾಡುತ್ತಿದ್ದು, ನೂರಾರು ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿಯಲ್ಲಿ ಹೇಳಿದ್ದಾರೆ.

ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾದ ಭದ್ರಾನದಿಗೆ ಲಕ್ಕವಳ್ಳಿಯ ಗೋಂಧಿ ಬಳಿ ಚೆಕ್‌ ಡ್ಯಾಂ ನಿರ್ಮಿಸಿ, ಕೆರೆ ತುಂಬಿಸುವ ಯೋಜನೆಗೆ ಈಗಾಗಲೇ ಸಮಗ್ರ ಯೋಜನಾ ವರದಿ ತಯಾರಾಗಿದೆ. ಈ ಯೋಜನೆಗೆ ಅಗತ್ಯ ಅನುದಾನದೊಂದಿಗೆ ಮಂಜೂರಾತಿ ನೀಡಬೇಕು ಎಂದು ಕೋರಿದರು.

ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಭೇಟಿಯಾಗಿರುವ ಶಾಸಕರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಜಿಲ್ಲಾಪ್ರಮುಖ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಮನವಿ ಮಾಡಿದರು.

ಚಿಕ್ಕಮಗಳೂರು ತಾಲೂಕು ಬಸವನಕೋಡಿ-ಸಿಂದಿಗೆರೆ ಮೂಲಕ ಕಡೂರು ತಾಲೂಕು ಎಸ್‌.ಬಿದರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಚಿಕ್ಕಮಗಳೂರು ತಾಲೂಕು ದೇವಗೊಂಡನಹಳ್ಳಿ ಕಬ್ಬಿಗರಹಳ್ಳಿ, ಸಿಂದಿಗೆರೆ ಮುಖಾಂತರ ಕಡೂರು ತಾಲೂಕು ಹುಲಿಕೆರೆ, ಹೊಸಳ್ಳಿ ಮೂಲಕ ಬಾಣೂರು ಗ್ರಾಮಕ್ಕೆ ಸೇರುವ ರಸ್ತೆ ಮೇಲ್ದರ್ಜೆಗೇರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ, ಲಕ್ಕಮ್ಮನಹಳ್ಳಿ, ಸಿರಬಡಿಗೆ ಮೂಲಕ ಕಡೂರು ತಾಲೂಕು ಹುಲಿಕೆರೆ ಗ್ರಾಮಕ್ಕೆ ಸೇರುವ ರಸ್ತೆ, ನರಿಗುಡ್ಡೇನಹಳ್ಳಿ, ಕುರುವಂಗಿ, ನೆಟ್ಟೆಕೆರೆಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ 173 ಕ್ಕೆ ಸೇರುವ ರಸ್ತೆ. ಮಾಗಡಿ, ಜಾವಗಲ್ ರಸ್ತೆಯಿಂದ ಮಾಚೇನಹಳ್ಳಿ, ಧರ್ಮಾಪುರ, ಎಸ್‌. ಬಿದರೆ ರಸ್ತೆ, ಚಿಕ್ಕಮಗಳೂರು ತಾಲೂಕು ಬಿ.ಟಿ. ರಸ್ತೆ ಹಲಸಬಾಳು ಗೇಟ್ನಿಂದ ಹಲಸಬಾಳು ಮುಖಾಂತರ ಕಾಮೇನಹಳ್ಳಿ ಗ್ರಾಮದ ರಸ್ತೆ, ಬಿ.ಟಿ. ರಸ್ತೆ ಕುಮಾರಗಿರಿ, ಹೂವೇನಹಳ್ಳಿ, ಕಾಮೇನಹಳ್ಳಿ, ಪಾದಮನೆ ಮೂಲಕ ಕಡೂರು ತಾಲೂಕು ಕೆ.ಎಂ.ರಸ್ತೆ ಸೇರುವ ರಸ್ತೆ, ಕೊಳಗಾಮೆ ಗ್ರಾಮದಿಂದ ಅತ್ತಿಗುಂಡಿ ಕ್ರಾಸ್‌ವರೆಗಿನ ರಸ್ತೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಚಿಕ್ಕಮಗಳೂರು ತಾಲೂಕು ಗಾಳಿಗುಡ್ಡೆ ಗ್ರಾಮದಿಂದ ಅರುಣೋದಯ ಗಂಧರ್ವಗಿರಿ ರಸ್ತೆ, ಮುತ್ತೋಡಿ, ಕೊಳಗಾಮೆ, ಹುಲುವತ್ತಿ ಮೂಲಕ ನೆತ್ತಿಚೌಕ ರಸ್ತೆ, ಕಡೂರು ತಾಲೂಕು ನಿಡಘಟ್ಟ ಗ್ರಾಮದಿಂದ ಚಟ್ನಳ್ಳಿ ಮುಖಾಂತರ ಟಿ.ಬಿ. ಕಾವಲು, ಚಿಕ್ಕಜ್ಜಿಕಟ್ಟೆ ಗಡಿ, ನೀರುಗುಂಡಿ ತಾಂಡಾದ ಮೂಲಕ ಕಾಮೇನಹಳ್ಳಿ, ದೇವನೂರು ರಸ್ತೆ, ನಿಡಘಟ್ಟ, ಚನ್ನನಕೊಪ್ಪಲು, ನಾಗರಾಳು ಮೂಲಕ ಸಖರಾಯಪಟ್ಟಣ, ಜಾವಗಲ್ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲ್ದರ್ಜೆಗೇರಿಸಬೇಕೆಂದು ಲೋಕೋಪಯೋಗಿ ಸಚಿವರನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.