ನವಯುಗ ಕಂಪೆನಿ ಕಚೇರಿಗೆ ಪಡುಬಿದ್ರಿ ಗ್ರಾ. ಪಂ. ಸದಸ್ಯರ ಮುತ್ತಿಗೆ


Team Udayavani, Jun 11, 2019, 6:00 AM IST

1006RA2E_1006MN__1

ಪಡುಬಿದ್ರಿ: ಕಳೆದ 5 ವರ್ಷಗಳಿಂದ ಪಡುಬಿದ್ರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯನ್ನುಪೂರ್ಣಗೊಳಿಸದ ನವಯುಗ ಕಂಪೆನಿಯ ಸ್ಥಳೀಯ ಕಚೇರಿಗೆ ಮುತ್ತಿಗೆ ಹಾಕಿದ ಪಡುಬಿದ್ರಿ ಗ್ರಾ. ಪಂ. ಸದಸ್ಯರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿದರು.

ಪಡುಬಿದ್ರಿ ಗ್ರಾಪಂ ಸದಸ್ಯರು ಕಳೆದ ಮೂರು ತಿಂಗಳ ಚುನಾವಣಾ ನೀತಿ ಸಂಹಿತೆಯ ಬಳಿಕ ಸೋಮವಾರ ಕರೆಯಲಾಗಿದ್ದ ಪಡುಬಿದ್ರಿ ಗ್ರಾ. ಪಂ. ನ ಸಾಮಾನ್ಯ ಸಭೆಯಲ್ಲಿ ಗ್ರಾಮದಲ್ಲಿನ ಚರಂಡಿಗಳ ಸಮಸ್ಯೆ ಸೇರಿದಂತೆ ಹೆದ್ದಾರಿ ಅಪೂರ್ಣ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಂದ ಬಂದಿದ್ದ ಹಲವಾರು ಅರ್ಜಿಗಳ ಕುರಿತಾಗಿ ನಡೆದಿದ್ದ ಕಾವೇರಿದ ಚರ್ಚೆ ಬಳಿಕ ಈ ಕ್ರಮ ಕೈಗೊಂಡಿತ್ತು.

ಮಳೆಗಾಲದಲ್ಲಿ ಅನಾಹುತ ಸಂಭವಿಸುವ ಹಿನ್ನಲೆಯಲ್ಲಿ ಎಚ್ಚೆತ್ತ ಗ್ರಾ. ಪಂ. ಅಧ್ಯಕ್ಷೆ ದಮಯಂತಿ ಅಮೀನ್‌, ಉಪಾಧ್ಯಕ್ಷ ವೈ. ಸುಕುಮಾರ್‌ ಸಹಿತ ಸದಸ್ಯೆರೆಲ್ಲರೂ ಪಡುಬಿದ್ರಿ ಪಂಪ್‌ಹೌಸ್‌ ಬಳಿಯಿರುವ ಕಂಪೆನಿ ಕಚೇರಿಗೆ ನೇರವಾಗಿ ಆಗಮಿಸಿ ಹೆದ್ದಾರಿ ಕಾಮಗಾರಿಯ ಬಗ್ಗೆ ಅಸಮಾದಾನ ವ್ಯಕ್ತಪಡಿಸಿದರು. ಅಲ್ಲಿನ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು, ಕಾಮಗಾರಿಗೆ ಸಂಬಂಧಿಸಿದ ಸಿಬಂದಿಯನ್ನು ಸ್ಥಳಕ್ಕೆ ಆಗಮಿಸುವಂತೆ ತಾಕೀತು ಮಾಡಿದರು. ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿಯೂ ಕೆಲ ಸದಸ್ಯರು ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಆಗಮಿಸಿದ ಸೈಟ್‌ ಎಂಜಿನಿಯರ್‌ ದುರ್ಗಾ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ ಸದಸ್ಯರು. ಬಾಕಿಯಿರುವ ಕಾಮಗಾರಿಗಳಾದ ಎರ್ಮಾಳು ಕಲ್ಸಂಕ ಬಳಿ ಸೇತುವೆಗೆ ಅಡ್ಡಲಾಗಿ ಮಣು ಹಾಕಿ ನಿರ್ಮಿಸಿದ ತಾತ್ಕಾಲಿಕ ರಸ್ತೆ ತೆರವು, ನಡಾÕಲು ಗ್ರಾಮದ ಕೆಳಗಿನ ಪೇಟೆಯ ಮಳೆ ನೀರು ಹರಿಯುವ ಚರಂಡಿ, ಪೇಟೆಯಲ್ಲಿನ ಇಕ್ಕೆಲಗಳ ಸರ್ವೀಸ್‌ ರಸ್ತೆ ಹಾಗೂ ಅರ್ಧಕ್ಕೆ ನಿಲ್ಲಿಸಿರುವ ಒಳಚರಂಡಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಅಪೂರ್ಣವಾಗಿರುವ ಚರಂಡಿ ಕಾಮಗಾರಿಯನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ನವಯುಗ ಸಿಬಂದಿ ಈ ಸಂದರ್ಭದಲ್ಲಿ ತಿಳಿಸಿದರು.

ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಿಮಠ ಸಹಿತ ಗ್ರಾ. ಪಂ. ಸದಸ್ಯರೆಲ್ಲರೂ ಹಾಜರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.