ಜೀವನದಲ್ಲಿ ಯಶಸ್ಸಿಗೆ ಕಠಿನ ಶ್ರಮ ಮಾತ್ರ ದಾರಿ: ಬಿಷಪ್‌


Team Udayavani, Jun 11, 2019, 6:00 AM IST

1006KDLM9PH

ಕುಂದಾಪುರ: ವಿದ್ಯಾರ್ಥಿಗಳು ತಾವು ಏನಾಗಬೇಕೆಂಬ ಸ್ಪಷ್ಟ ಗುರಿ ಹೊಂದಿರಬೇಕು. ಜೀವನದಲ್ಲಿ ಯಶಸ್ಸು ಗಳಿಸಲು ಕಠಿನ ಶ್ರಮ ಬಿಟ್ಟರೆ ಬೇರೆ ದಾರಿಯಿಲ್ಲ. ಅಸಾಧ್ಯ ಮತ್ತು ಅನುತ್ತೀರ್ಣ ಎಂಬ ಪದಗಳು ನಿಮ್ಮ ಶಬ್ದ ಕೋಶದಲ್ಲಿ ಇರಬಾರದು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಅವರು ಹೇಳಿದರು.

ಇಲ್ಲಿನ ಸಂತ ಮೇರಿಸ್‌ ಪಿ.ಯು. ಕಾಲೇಜಿನ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೀವನದಲ್ಲಿ ಪ್ರಯತ್ನ ಪಡುತ್ತಲೇ ಇರಬೇಕು. ಥಾಮಸ್‌ ಆಲ್ವಾ ಎಡಿಸನ್‌ ಹಲವಾರು ಬಾರಿ ಪ್ರಯೋಗಗಳಲ್ಲಿ ಸಫಲನಾಗದಿದ್ದರೂ, ಛಲದಿಂದ ಪ್ರಯತ್ನ ಪಡುತ್ತಾ ಕೊನೆಗೆ ಯಶಸ್ಸನ್ನು ಪಡೆದು ಜಗತ್ತಿಗೆ ಬೆಳಕು ನೀಡಿದ. ಅವರಂತೆ ನಿಮ್ಮ ಪ್ರಯತ್ನ ಸಾಗಲಿ ಎಂದರು.

ವೈದ್ಯೆ ಡಾ| ರೆನ್ನಿ ವಿಲ್ಸನ್‌, ಪ್ರಪಂಚದಲ್ಲಿ ಯಶಸ್ಸು ಪಡೆದವರ ಬಗ್ಗೆ ತಿಳಿದುಕೊಂಡರೆ, ಅವರುಗಳು ಕಷ್ಟ ಪಟ್ಟು ಪರಿಶ್ರಮ ಪಟ್ಟು ಯಶಸ್ಸು ಗಳಿಸಿದ್ದಾರೆ. ನೀವು ಏನಾಗಬೇಕೆಂದು ಮೊದಲು ಕನಸು ಕಾಣಬೇಕು. ಅದನ್ನು ಸಾಕಾರಗೊಳಿಸಲು ಕಠಿನ ಪರಿಶ್ರಮ ಪಡಿ. ಆಗ ನಿಮಗೆ ಯಶಸ್ಸು ದೊರಕುತ್ತದೆ ಎಂದರು.

ಕಾಲೇಜಿನ ಜಂಟಿ ಕಾರ್ಯದರ್ಶಿ ಫಾ| ಸ್ಟ್ಯಾನಿ ತಾವ್ರೊ, ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು, ಕಾಲೇಜಿನ ಶಿಸ್ತನ್ನು ರೂಢಿಸಿಕೊಳ್ಳಬೇಕು ಎಂದರು.

ಧರ್ಮಾಧ್ಯಕ್ಷರು ಕಾಲೇಜಿನ ಮ್ಯಾಗಜಿನ್‌ ಬ್ಲೊಸಮ್‌ನ್ನು ಉದ್ಘಾಟನೆ ಮಾಡಿದರು.

ದ್ವಿತಿಯ ಪಿ.ಯು.ಸಿ. ಪ್ರಥಮ ಪಿ.ಯು.ಸಿ. ಮತ್ತು ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದವರನ್ನು ಗೌರವಿಸಲಾಯಿತು. ವರ್ಗಾವಣೆಗೊಂಡ ರೋಜರಿ ಚರ್ಚ್‌ನ ಧರ್ಮಗುರು ಫಾ| ರೋಯ್‌ ಲೋಬೊ ಅವರಿಗೆ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

ಪ್ರಾಂಶುಪಾಲ ಫಾ| ಪ್ರವೀಣ್‌ ಅಮೃತ್‌ ಮಾರ್ಟಿಸ್‌ ಕಾಲೇಜಿನ ಬಗ್ಗೆ, ಕಾಲೇಜಿನ ನೀತಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.

ಸಹಾಯಕ ಧರ್ಮಗುರು ಫಾ| ವಿಜಯ್‌ ಡಿ’ಸೋಜಾ, ವಿದ್ಯಾರ್ಥಿಗಳ ಪೋಷಕರ ಪ್ರತಿನಿಧಿಯಾಗಿ ವೇಲಾ ಬ್ರಗಾಂಜಾ, ದೇವದಾಸ್‌ ವಿ.ಜೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪ ಪ್ರಾಂಶುಪಾಲೆ ಮಂಜುಳಾ ನಾಯರ್‌ ಸ್ವಾಗತಿಸಿದರು. ಪ್ರಾಧ್ಯಾಪಕಿಯರಾದ ಅಸ್ಮಿತಾ ಕೊರೆಯಾ, ಸ್ವಾತಿ, ನಿಶಾ ಸುವಾರಿಸ್‌ ಮತ್ತು ವಿದ್ಯಾರ್ಥಿನಿ ಮೇಲಿಟಾ ಡಿಸೋಜಾ ನಿರ್ವಹಿಸಿದರು. ಮೇಲಿÅಯಾ ಕ್ರಾಸ್ತಾ ವಂದಿಸಿದರು.

ಟಾಪ್ ನ್ಯೂಸ್

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

1-qwewqeqw

POK; ಪಾಕ್‌ ವಿರುದ್ಧ ಬೂದಿ ಮುಚ್ಚಿದ ಕೆಂಡ : 4ನೇ ದಿನವೂ ಮುಂದುವರಿದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Theft ಕಳ್ತೂರು: ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ

Theft ಕಳ್ತೂರು: ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.