ಸಾಹಿತ್ಯಕ್ಕೆ ದೇಸೀಯ ನೆಲೆಗಟ್ಟು ಅಗತ್ಯ: ಡಾ| ವಸಂತ ಕುಮಾರ ಪೆರ್ಲ

"ಪರಸ್ಪರ' ಸಾಹಿತ್ಯ ಉತ್ಸವದ ಬಹುಭಾಷಾ ಸಾಹಿತ್ಯ ವಿಚಾರ ಸಂಕಿರಣ

Team Udayavani, Jun 11, 2019, 5:00 AM IST

10KSDE3

ಕಾಸರಗೋಡು: ಜಾಗತೀ ಕರಣದ ದೆಸೆಯಿಂದಾಗಿ ಸಾಹಿತ್ಯಿಕ- ರಾಜಕೀಯ ಮುಂತಾದ ಕ್ಷೇತ್ರಗಳ ಸಿದ್ಧಾಂತಗಳನ್ನು ಕೂಡ ಪುನಾರೂಪಿಸುವ ಅಗತ್ಯ ಬಂದೊದಗಿದೆ. ಬದುಕು ಮತ್ತು ಸಮಾಜದ ಕಡೆಗೆ ನಮ್ಮ ದೃಷ್ಟಿ ಬದಲಾಗಿರುವ ಈ ಸಂದರ್ಭದಲ್ಲಿ ನಮ್ಮ ದೇಸೀಯತೆಯನ್ನು ಮತ್ತು ಸಂಸ್ಕೃತಿಯನ್ನು ಹೊಸ ನೆಲೆಗಟ್ಟಿನಲ್ಲಿ ಕಟ್ಟಿಕೊಂಡು ಜಾಗತೀಕರಣದ ಸವಾಲು ಗಳನ್ನು ಎದುರಿಸಬೇಕಾಗಿದೆ. ನಮ್ಮ ನೆಲೆಯನ್ನು ಗಟ್ಟಿ ಮಾಡಿಕೊಂಡು ಚಿಂತನೆಗಳನ್ನು ಹೊಸ ಚೌಕಟ್ಟಿನಲ್ಲಿ ಮರು ವ್ಯಾಖ್ಯಾನಿಸಿ ವಿಶ್ವ ಸಮುದಾಯದೊಂದಿಗೆ ಕೊಳುಕೊಡೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕವಿ, ಸಾಹಿತಿ ಹಾಗೂ ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ| ವಸಂತ ಕುಮಾರ ಪೆರ್ಲ ಅವರು ಹೇಳಿದರು.

ಕಾಸರಗೋಡಿನ ಪಿಲಿಕುಂಜೆಯ ನಗರಸಭಾ ಸಭಾಂಗಣದಲ್ಲಿ ಜಿಲ್ಲಾ ಲೈಬ್ರೆರಿ ಕೌನ್ಸಿಲ್‌ ಆಶ್ರಯದಲ್ಲಿ “ಪರಸ್ಪರ’ ಎಂಬ ಎರಡು ದಿನಗಳ ಕಾಲ ನಡೆದ ಸಾಹಿತ್ಯ ಉತ್ಸವದ ಬಹುಭಾಷಾ ಸಾಹಿತ್ಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಪಾಡªನಗಳ ನಾಡು ನುಡಿ ಪ್ರೇಮ’ ಎಂಬ ವಿಷಯದ ಬಗ್ಗೆ ಶಂಕರ ಸ್ವಾಮಿ ಕೃಪಾ ಮತ್ತು ಜಯರಾಜನ್‌ ಕುಂಡಂಕುಳಿ ಸೋದಾಹರಣವಾಗಿ ಮಾತನಾಡಿದರು. ಜಾಗತೀಕರಣದ ನಾಟಕ ಕಲೆ ಎಂಬ ವಿಷಯದ ಕುರಿತು ಡಾ| ಮೀನಾಕ್ಷಿ ರಾಮಚಂದ್ರ ಮತ್ತು ಉಮೇಶ್‌ ಸಾಲಿಯಾನ್‌ ಉಪನ್ಯಾಸ ನೀಡಿದರು. ಅನಂತರ ಚರ್ಚಾಗೋಷ್ಠಿ ನಡೆಯಿತು.

ಲೈಬ್ರೆರಿ ಕೌನ್ಸಿಲ್‌ ಸಂಚಾಲಕರಾದ ಅಹಮ್ಮದ್‌ ಹುಸೇನ್‌ ಪಿ.ಕೆ. ಸ್ವಾಗತಿಸಿ ದರು. ಸದಸ್ಯ ಎ.ಜಿ. ರಾಧಾಕೃಷ್ಣ ಬಲ್ಲಾಳ್‌ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರತಿಷ್ಠಿತ ಪ್ರಕಾಶಕರಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟವಿತ್ತು.

ನಮ್ಮ ಭಾಷೆ ಮತ್ತು ಸಂಸ್ಕೃತಿಗೆ ಸವಾಲುಗಳು ಎದುರಾದ ಸಂದರ್ಭಗಳಲ್ಲಿ ನೆಲಮೂಲ ಜಾನಪದಕ್ಕೆ ಹಿಂದಿರುಗಿ ಜೀವಸತ್ವವನ್ನು ಪಡೆದುಕೊಂಡು ಹೊಸ ಅವತಾರಗಳೊಂದಿಗೆ ಪ್ರತ್ಯಕ್ಷ ವಾದುದನ್ನು ಇತಿಹಾಸದುದ್ದಕ್ಕೂ ಕಾಣುತ್ತೇವೆ. ಅಂತಹ ಸಂದರ್ಭಗಳಲ್ಲಿ ಭಾಷಾ ಸಾಮರಸ್ಯ ಮುಖ್ಯ ಅಂಶವಾಗಿರಬೇಕು ಎಂದು ಡಾ| ಪೆರ್ಲ ಅವರು ಹೇಳಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.