ನಗರಸಭೆ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ

50 ಕೋಟಿ ರೂ. ಕಾಮಗಾರಿಗೆ ವರ್ಷದ ಬಳಿಕ ಡಿಪಿಆರ್‌ • ಅಧಿಕಾರಿಗಳ ನಡುವೆ ಸಾಮರಸ್ಯ ಕೊರತೆ, ಹಳ್ಳ ಹಿಡಿದ ಆಡಳಿತ

Team Udayavani, Jun 11, 2019, 11:19 AM IST

mandya-tdy-1..

ಮಂಡ್ಯದ ನೂರಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವುದು.

ಮಂಡ್ಯ: ಕಳೆದ ವರ್ಷ ಬಜೆಟ್‌ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಗರಾಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ನಡಿ ನೀಡಿದ 50 ಕೋಟಿ ರೂ. ಹಣಕ್ಕೆ ಒಂದು ವರ್ಷದ ಬಳಿಕ ಈಗ ಯೋಜನಾ ವರದಿ (ಡಿಪಿಆರ್‌) ಸಿದ್ಧಗೊಂಡಿದೆ. ಹದಿನೈದು ಅಥವಾ ಒಂದು ತಿಂಗಳೊಳಗೆ ಪೂರ್ಣಗೊಳಿಸಬಹುದಾದ ಡಿಪಿಆರ್‌ಗೆ ಒಂದು ವರ್ಷ ಹಿಡಿದಿರುವುದು ನಗರಸಭೆ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಈಗ ಯೋಜನಾ ವರದಿ ಸಿದ್ಧಗೊಂಡಿದೆಯಾದರೂ ಅದಕ್ಕಿನ್ನೂ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಸಿಗಬೇಕಿದೆ. ಈ ಪ್ರಕ್ರಿಯೆ ವೇಗವಾಗಿ ನಡೆದರೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಬಹುದು. ಇಲ್ಲದಿದ್ದರೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಅಧ್ಯಕ್ಷ-ಉಪಾಧ್ಯಕ್ಷರಿಲ್ಲದ ನಗರಸಭೆಯಲ್ಲಿ ಅಧಿಕಾರಿಗಳ ನಡುವೆ ಸಾಮರಸ್ಯದ ಕೊರತೆಯಿಂದ ಆಡಳಿತ ಹಳ್ಳ ಹಿಡಿದಿದೆ.

50 ಕೋಟಿ ವಿಶೇಷ ಪ್ಯಾಕೇಜ್‌: 2018-19ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಿಸಿದ್ದರು. ಅಧಿಕಾರಿಗಳಿಗೆ ಅಭಿವೃದ್ಧಿಯ ಕಾಳಜಿ ಇದ್ದಿದ್ದರೆ ಹಣ ಘೋಷಿಸಿದ ಬೆನ್ನಲ್ಲೇ ಸಮಗ್ರ ಯೋಜನಾ ವರದಿಯನ್ನು ರೂಪಿಸಿಟ್ಟುಕೊಂಡು ಸರ್ಕಾರದ ಆದೇಶ ಹೊರಬಿದ್ದ ಕೂಡಲೇ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದು ಜನವರಿಯಲ್ಲಿ ಕಾಮಗಾರಿ ಆರಂಭಿಸಬಹುದಿತ್ತು.

ಆದರೆ, ಸರ್ಕಾರ ಬಜೆಟ್‌ನಲ್ಲಿ 50 ಕೋಟಿ ರೂ. ಹಣ ಘೋಷಿಸಿದ್ದರೂ ಅಧಿಕಾರಿಗಳು ಆ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳಲೇ ಇಲ್ಲ. ಸರ್ಕಾರದ ಆದೇಶ ಬರುವವರೆಗೂ ಡಿಪಿಆರ್‌ ತಯಾರಿ ಸಿಟ್ಟುಕೊಳ್ಳುವ ಗೋಜಿಗೇ ಹೋಗಲಿಲ್ಲ. ಸರ್ಕಾರದ ಆದೇಶ 30 ನವೆಂಬರ್‌ 2018ರಲ್ಲಿ ಹೊರಬಿದ್ದ ಬಳಿಕ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಮುಂದಾಗಿ ದ್ದಾರೆ. ಈ ವರದಿ ಸಿದ್ಧಪಡಿಸುವುದಕ್ಕೂ ಎರಡು ಹಂತದಲ್ಲಿ ಟೆಂಡರ್‌ ನಡೆಸಿದ್ದಾರೆ. ಅದೆಲ್ಲಾ ನಡೆಸಿ ಅಂತಿಮವಾಗಿ ಸಮಗ್ರ ಯೋಜನಾ ವರದಿ ಜೂ.10ಕ್ಕೆ ಸಿದ್ಧಗೊಂಡು ಜಿಲ್ಲಾಧಿಕಾರಿ ಬಳಿಗೆ ಹೋಗಿದೆ.

ಇನ್ನು ಇದಕ್ಕೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದುಕೊಂಡು ಕಾಮಗಾರಿ ಆರಂಭಿಸಬೇಕಾದರೆ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ ತಿಂಗಳವರೆಗೆ ಕಾಯಲೇಬೇಕು. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ನಗರಾಭಿವೃದ್ಧಿ ಎನ್ನುವುದು ಕೇವಲ ಮರೀಚಿಕೆಯಾಗಿ ಉಳಿಯುವಂತಾಗಿದೆ.

17 ಕೋಟಿ ಕಾಮಗಾರಿಗೆ ಬ್ರೇಕ್‌: ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿರುವ 50 ಕೋಟಿ ರೂ. ಕಾಮಗಾರಿಯಲ್ಲಿ 17 ಕೋಟಿ ರೂ. ಕಾಮಗಾರಿ ನಡೆಯುವ ಸಾಧ್ಯತೆಗಳು ಕಡಿಮೆ ಇದೆ. ಏಕೆಂದರೆ, ಈ ಹಣದಲ್ಲಿ 10 ಕೋಟಿ ರೂ.ಗಳನ್ನು ನಗರವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅಭಿವೃದ್ಧಿಗೆ ನಿಗದಿಪಡಿಸಿದೆ.

ಹೆದ್ದಾರಿ ರಸ್ತೆಯನ್ನು ಲೋಕೋಪ ಯೋಗಿ ಇಲಾಖೆ ನಿರ್ಮಾಣ ಮಾಡುತ್ತಿದ್ದು, ನಗರಸಭೆಯಿಂದ ಆ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಮುಂದಾದಲ್ಲಿ ವ್ಯತ್ಯಾಸಗಳಾಗುವ ಸಾಧ್ಯತೆಗಳಾಗು ವುದರಿಂದ ಈ ಹಣವನ್ನು ಲೋಕೋಪಯೋಗಿ ಇಲಾಖೆಗೆ ನೀಡಿ ಆ ಇಲಾಖೆಯಿಂದಲೇ ಕಾಮಗಾರಿ ನಡೆಸಲು ನಗರಸಭೆ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಸಿಮೆಂಟ್ ಕಾಂಕ್ರೀಟ್: ಇನ್ನು ಕುಂಟುತ್ತಾ ತೆವಳುತ್ತಾ ಸಾಗಿರುವ ನಗರದ ನೂರಡಿ ರಸ್ತೆ ಕಾಮಗಾರಿಗೆ 7.50 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದೂ ಸಹ ಸದ್ಯಕ್ಕೆ ಖರ್ಚು ಮಾಡಲಾಗುವುದಿಲ್ಲ. ಏಕೆಂದರೆ, ನೂರಡಿ ರಸ್ತೆಗೆ ಡಾಂಬರು ಹಾಕಿದ ಬಳಿಕ ಆರು ತಿಂಗಳ ಕಾಲ ವಾಹನಗಳ ಸಂಚಾರದಿಂದ ತಹಬದಿಗೆ ಬಂದ ಬಳಿಕ ಸಿಮೆಂಟ್ ಕಾಂಕ್ರೀಟ್ ಹಾಕಲು ನಿರ್ಧರಿಸಲಾಗಿದೆ. ಈಗ ನೂರಡಿ ರಸ್ತೆಯ ಒಂದು ಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಇನ್ನೊಂದು ಭಾಗದ ರಸ್ತೆ ಅಭಿವೃದ್ಧಿಗೆ ಅದೆಷ್ಟು ಕಾಲ ಹಿಡಿಯುವುದೋ ಗೊತ್ತಿಲ್ಲ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿಗಳೆಲ್ಲವೂ ಆಮೆಗತಿಯಲ್ಲಿ ಸಾಗುತ್ತಾ ನಗರದ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.