ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿ
Team Udayavani, Jun 11, 2019, 2:07 PM IST
ಮುಂಡರಗಿ: ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವಂತೆ ಆಗ್ರಹಿಸಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯಿಂದ ತಾಪಂ ಕಾರ್ಯಾಲಯ ಆವರಣದಲ್ಲಿ ಬಿಇಒ ಎಸ್.ಎನ್. ಹಳ್ಳಿಗುಡಿಯವರಿಗೆ ಮನವಿ ಸಲ್ಲಿಸಲಾಯಿತು.
ಮುಂಡರಗಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಎರಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯಿಂದ ತಾಪಂ ಆವರಣದಲ್ಲಿ ಬಿಇಒ ಎಸ್.ಎನ್. ಹಳ್ಳಿಗುಡಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ, ಶೈಕ್ಷಣಿಕವಾಗಿ ಹಿಂದುಳಿದರುವ ತಾಲೂಕಿನ ಮುಂಡರಗಿ ಹೋಬಳಿಯಲ್ಲಿ ಸರಕಾರವು ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆಯದೇ ಅನ್ಯಾಯ ಮಾಡಲಾಗುತ್ತಿದೆ. ಈ ಕೊಡಲೇ ಮುಂಡರಗಿ ಪಟ್ಟಣ ಮತ್ತು ಹೋಬಳಿಯ ಯಾವುದೇ ಸ್ಥಳದಲ್ಲಿ ಆಂಗ್ಲ ಮಾಧ್ಯಮ ಶಾಲೆ ತೆರೆಯುವ ಮೂಲಕ ತಾಲೂಕಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು. ಸರಕಾರಿ ಶಾಲೆಯಲ್ಲಿ ಎಂಟನೆಯ ತರಗತಿ ಪಾಸು ಮಾಡಿದ ವಿದ್ಯಾರ್ಥಿಗಳಿಗೆ ಒಂಬತ್ತನೇಯ ತರಗತಿಗೆ ಪಟ್ಟಣದ ಪ್ರೌಢಶಾಲೆಗಳಲ್ಲಿ ಅವಕಾಶ ಕಲ್ಪಿಸಿ ಕೊಡಬೇಕು. ಮುಂಡರಗಿ ಪಟ್ಟಣದಲ್ಲಿ ಎರಡು ಸರಕಾರಿ ಪ್ರೌಢಶಾಲೆ ತೆರೆಯಬೇಕು ಎಂದರು.
ಮನವಿಗೆ ಸ್ಪಂದಿಸಿದ ಬಿಇಒ ಎಸ್.ಎನ್. ಹಳ್ಳಿಗುಡಿ, ಸರಕಾರಿ ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಪಟ್ಟಣದಲ್ಲಿ ಸರಕಾರಿ ಪ್ರೌಢಶಾಲೆ ತೆರೆಯಲು ಕೂಡಾ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.
ತಾಪಂ ಇಒ ಎಸ್.ಎಸ್. ಕಲ್ಮನಿ ಇದ್ದರು. ವಿ.ಎಸ್. ಘಟ್ಟಿ, ದ್ರುವ ಹೂಗಾರ, ನಿಂಗಪ್ಪ ಕುಂಬಾರ, ಸುರೇಶ ಮಾಳೆಕೊಪ್ಪ, ಮಂಜುನಾಥ ಮುಧೋಳ, ದೇವಪ್ಪ ಇಟಗಿ, ಮೌಲಾಸಾಬ ಬಾಗವಾನ್, ದುರಗಪ್ಪ ಮೋರನಾಳ, ಸುರೇಶ ಹಲವಾಗಲಿ ಮತ್ತಿತರರು ಮನವಿ ಸಲ್ಲಿಸುವ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ