ರಿಷಿ ಈಗ ಸಕಲಕಲಾವಲ್ಲಭ


Team Udayavani, Jun 12, 2019, 3:01 AM IST

Rishi-(3)

“ಆಪರೇಷನ್‌ ಅಲಮೇಲಮ್ಮ’ ಚಿತ್ರದ ಬಳಿಕ ನಟ ರಿಷಿ ಬ್ಯುಝಿಯಾಗಿದ್ದು ಗೊತ್ತೇ ಇದೆ. ಆ ನಂತರ ಅವರು ಪುನೀತ್‌ರಾಜಕುಮಾರ್‌ ನಿರ್ಮಾಣದ “ಕವಲುದಾರಿ’ ಚಿತ್ರದಲ್ಲಿ ಕಾಣಿಸಿಕೊಂಡರು. ಅದರ ಜೊತೆ ಜೊತೆಯಲ್ಲೇ ಅವರು “ರಾಮನ ಅವತಾರ’, “ಸಾರ್ವಜನಿಕರಲ್ಲಿ ವಿನಂತಿ’ ಸೇರಿದಂತೆ ಕೈಯಲ್ಲಿನ್ನೂ ಎರಡು ಹೊಸ ಚಿತ್ರಗಳನ್ನಿಟ್ಟುಕೊಂಡು ಬಿಝಿಯಾಗಿದ್ದಾರೆ. ಅದರ ಬೆನ್ನಲ್ಲೇ ಅವರೀಗ ಮತ್ತೂಂದು ಹೊಸ ಚಿತ್ರಕ್ಕೆ ಜೈ ಎಂದಿದ್ದಾರೆ.

ಹೌದು, ಈ ಹಿಂದೆ ರಿಷಿ ಅವರು ಜೇಕಬ್‌ ವರ್ಗೀಸ್‌ ನಿರ್ದೇಶನದ ಚಿತ್ರದಲ್ಲಿ ನಟಿಸುವುದಾಗಿ ಹೇಳಿಕೊಂಡಿದ್ದರು. ಆಗ ಆ ಚಿತ್ರಕ್ಕೆ ನಾಮಕರಣ ಮಾಡಿರಲಿಲ್ಲ. ಈಗ ನಿರ್ದೇಶಕ ಜೇಕಬ್‌ ವರ್ಗೀಸ್‌ ಅವರು ನಾಮಕರಣ ಮಾಡಿದ್ದಾರೆ. ಹೌದು, ರಿಷಿ ಅಭಿನಯಿಸುತ್ತಿರುವ ಚಿತ್ರಕ್ಕೆ “ಸಕಲಕಲಾವಲ್ಲಭ’ ಎಂದು ಹೆಸರಿಡಲಾಗಿದೆ. ಅಲ್ಲಿಗೆ ಇದು ಕೂಡ ಮನರಂಜನೆಯ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ.

ರಿಷಿ ಇಟ್ಟುಕೊಂಡು ಆ್ಯಕ್ಷನ್‌ ಚಿತ್ರ ಮಾಡುವ ಧೈರ್ಯ ಮಾಡುವುದು ಕಡಿಮೆ. ಯಾಕೆಂದರೆ, ರಿಷಿ ಅವರ ಮೊದಲ ಚಿತ್ರ “ಆಪರೇಷನ್‌ ಅಲಮೇಲಮ್ಮ’ ಪಕ್ಕಾ ಮನರಂಜನಾತ್ಮಕವಾಗಿತ್ತು. ಅದರ ಬಳಿಕ ಅವರು ಒಪ್ಪಿಕೊಂಡ “ಕವಲುದಾರಿ’ ಕೂಡ ಹೊಸ ಜಾನರ್‌ನ ಕಥೆಯಾಗಿತ್ತು. ಈಗ ಅವರ ಕೈಯಲ್ಲಿರುವ “ಸಾರ್ವಜನಿಕರಲ್ಲಿ ವಿನಂತಿ’ ಮತ್ತು “ರಾಮನ ಅವತಾರ’ ಚಿತ್ರಗಳು ಸಹ ಆ್ಯಕ್ಷನ್‌ ಸಿನಿಮಾ ಅನ್ನುವುದನ್ನು ಒಪ್ಪಲು ಸಾಧ್ಯವಿಲ್ಲ.

ರಿಷಿ ಸದ್ಯಕ್ಕೆ ಬ್ಯುಝಿಯಾಗಿರುವುದಂತೂ ನಿಜ. ಎಷ್ಟರಮಟ್ಟಿಗೆ ಅಂದರೆ, ಅವರು ಮುಂದಿನ ಮಾರ್ಚ್‌ವರೆಗೂ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ಳದಷ್ಟು ಬ್ಯುಝಿಯಂತೂ ಹೌದು. ಈಗ ಜೇಕಬ್‌ ವರ್ಗೀಸ್‌ ಅವರ ನಿರ್ದೇಶನದ “ಸಕಲ ಕಲಾವಲ್ಲಭ’ ಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಈ ಚಿತ್ರ ಯಾವಾಗ ಶುರುವಾಗುತ್ತೆ, ಕಥೆಯ ಎಳೆ ಏನು, ಯಾರೆಲ್ಲಾ ಇರುತ್ತಾರೆ, ಎಲ್ಲೆಲ್ಲಿ ಚಿತ್ರೀಕರಣ ಆಗಲಿದೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ.

ರಿಷಿ ಅವರನ್ನು ಹುಡುಕಿಕೊಂಡು ಹಲವು ಕಥೆಗಳು ಬರುತ್ತಿದ್ದರೂ, ರಿಷಿ ಮಾತ್ರ, ಯಾವ ಕಥೆಯನ್ನೂ ಓಕೆ ಮಾಡದೆ, ಸದ್ಯ ಕೈಯಲ್ಲಿರುವ ಚಿತ್ರಗಳನ್ನು ಮುಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ರಿಷಿ ಕಥೆ ಕೇಳಿದರೆ ಅದು ಮೊದಲು ಒಬ್ಬ ಪ್ರೇಕ್ಷಕನಾಗಿ ಅವರಿಗೆ ಇಷ್ಟವಾಗಬೇಕು. ಕಥೆಯಲ್ಲಿ ಹೀರೋಗೆ ಎಷ್ಟು ಇಂಪಾರ್ಟೆನ್ಸ್‌ ಇದೆ ಅನ್ನೋದಕ್ಕಿಂತ, ನೋಡುವವರಿಗೆ ಇಷ್ಟವಾಗುವ ಎಲಿಮೆಂಟ್ಸ್‌ ಏನಿದೆ ಅನ್ನೋದನ್ನ ಗಮನಿಸಿ, ಅದನ್ನು ಒಪ್ಪುತ್ತಾರಂತೆ. ಹಾಗಾಗಿ, ಅವರು ಎಷ್ಟೇ ಕಥೆ ಬಂದರೂ, ಅಳೆದು-ತೂಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.