ಸರ್ಕಾರದ ನಿರ್ಲಕ್ಷ್ಯ: ನೇಕಾರರ ಬದುಕು ಅತಂತ್ರ


Team Udayavani, Jun 12, 2019, 3:00 AM IST

sar-nir

ನೆಲಮಂಗಲ: ತಾಲೂಕಿನ ತ್ಯಾಮಗೊಂಡ್ಲು ಮತ್ತು ಕುದೂರು ಗ್ರಾಮಗಳಲ್ಲಿರುವ ಕೈಮಗ್ಗಗಳಿಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ(ಕೆಎಚ್‌ಡಿಸಿ), 2 ತಿಂಗಳಿಂದ ಸಮರ್ಪಕವಾಗಿ ನೂಲು ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ಕೈಮಗ್ಗವನ್ನೇ ನೆಚ್ಚಿಕೊಂಡು ಬದುಕುತ್ತಿರುವ ನೇಕಾರರ ಬದುಕು ಮೂರಾಬಟ್ಟೆಯಾಗುವ ಹಂತಕ್ಕೆ ತಲುಪಿದೆ.

ಇದರಿಂದಾಗಿ ದುಡಿಯುವ ರಟ್ಟೆಗೆ ಕೆಲಸವಿಲ್ಲ, ಹೊಟ್ಟೆಗೆ ಹಿಟ್ಟಿಲ್ಲದಂತಾಗಿದೆ. ಕೆಲಸವಿಲ್ಲದೆ ಬದುಕು ಅತಂತ್ರವಾದರೆ, ಇತ್ತ ಉಪಕರಣಗಳು ದೂಳು ಹಿಡಿಯುತ್ತಿವೆ. ಇಲ್ಲಿನ ಬಹುತೇಕ ಕುಟುಂಬಗಳು ಒಬ್ಬರ ದುಡಿತವನ್ನೆ ನಚ್ಚಿಕೊಂಡಿದ್ದು, ತಿಂಗಳ ಅಂತ್ಯದಲ್ಲಿ ದೊರೆಯುತ್ತಿದ್ದ 2500ರಿಂದ 3000 ಆದಾಯಕ್ಕೂ ಈಗ ಕುತ್ತು ಬಂದಿದೆ.

ವೇತನ ಸ್ಥಗಿತ: ತ್ಯಾಮಗೊಂಡ್ಲು ಮತ್ತು ಕುದೂರು ಗ್ರಾಮಗಳಲ್ಲಿ ಕಳೆದ ವರ್ಷ 150ಕ್ಕೂ ಹೆಚ್ಚು ಕೈಮಗ್ಗದ ನೇಕಾರರು ಕೆಲಸ ಮಾಡುತ್ತಿದ್ದರು. ಅದರೆ ಕಳೆದ ಒಂದು ವರ್ಷದಿಂದ ಸರಿಯಾದ ಸಮಯಕ್ಕೆ ವೇತನ ಮತ್ತು ನೂಲು ಪೂರೈಕೆಯಾದ ಕಾರಣ 90ಕ್ಕೂ ಹೆಚ್ಚು ಜನ ನೇಕಾರಿಕೆಯನ್ನು ಬಿಟ್ಟು ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತ ಜೀವನ ನಡೆಸುತ್ತಿದ್ದಾರೆ. ಉಳಿದಿರುವ 45 ಜನ ನೇಕಾರರಿಗೆ ಸಮಯಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ. ಇದ್ದರಿಂದ ಅವರ ಬದುಕು ಅತಂತ್ರವಾಗಿದೆ.

ಸರ್ಕಾರವೇ ಕಣ್ಮುಚ್ಚಿ ಕುಳಿತಿದೆ: ಕಳೆದ ಒಂದು ವರ್ಷದಿಂದ ಕೈಮಗ್ಗ ನಿಗಮ ಮಂಡಳಿಗೆ ಮುಖ್ಯಸ್ಥರನ್ನು ನೇಮಕ ಮಾಡದೇ ಅಡಳಿತವನ್ನು ಮುಖ್ಯಮಂತ್ರಿಯವರೆ ನಡೆಸುತ್ತಿದ್ದರು. ಆದರೆ ಪ್ರಯೋಜನವಾಗಿಲ್ಲ. ಸಿಎಂ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ನೇಕಾರರ ಬದುಕು ಬೀದಿಗೆ ಬಂದಿದೆ. ಸಮಯಕ್ಕೆ ಸರಿಯಾಗಿ ಕಚ್ಚಾ ಪದಾರ್ಥಗಳು ಪೂರೈಕೆಯಾಗುತ್ತಿಲ್ಲ. ಮಾಡಿದ ಕೆಲಸಕ್ಕೆ ಕೂಲಿಯನ್ನೂ ನೀಡುತ್ತಿಲ್ಲ.

ಈ ಸಂಬಂಧ ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ರೈತರು ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ರೀತಿಯಲ್ಲಿಯೇ ನೇಕಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಸರ್ಕಾರಕ್ಕೆ ಮಾಹಿತಿ ಇದ್ದರೂ ಕಣ್ಮುಚ್ಚಿ ಕುಳಿತಿದೆ ಎಂದು ನೇಕಾರರು ಅಕ್ರೋಶ ವ್ಯಕ್ತಪಡಿಸಿದರು.

ಮಕ್ಕಳ ವಿದ್ಯಾಭ್ಯಾಸಕ್ಕೆ ಕುತ್ತು: ಕೈಮಗ್ಗದ ಆದಾಯದಿಂದಲೇ ಜೀವನ ನಡೆಸುತ್ತಿರುವ ನೇಕಾರರ ಬದುಕು ಅಕ್ಷರ ಸಹ ಬೀದಿಗೆ ಬೀಳುವ ಹಂತದಲ್ಲಿದೆ. ಏಪ್ರಿಲ್‌ ಮತ್ತು ಜೂನ್‌ ತಿಂಗಳಲ್ಲಿ ಮಕ್ಕಳನ್ನು ಶಾಲೆಗೆ ದಾಖಲಿಸಬೇಕಾಗುತ್ತದೆ. ಅದರೆ ಈ ಬಾರಿ ಸಕಾಲಕ್ಕೆ ಕೆಲಸವೂ ಇಲ್ಲ, ಮಾಡಿದ ಕೆಲಸಕ್ಕೆ ಕೂಲಿಯೂ ಸಿಗದೇ ಜೀವನ ಸಾಗಿಸುವುದೇ ಕಷ್ಟವಾಗಿ ಇನ್ನೂ ಮಕ್ಕಳ ವಿದ್ಯಾಭ್ಯಾಸಕ್ಕು ಕುತ್ತು ಬಂದಿದೆ.

ಪ್ರೋತ್ಸಾಹ ಧನ ಸ್ಥಗಿತ: ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಸರ್ಕಾರದಲ್ಲಿ ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ನೀಡುತ್ತಿರುವ ಲೀಟರ್‌ಹಾಲಿಗೆ 5 ರೂ ಪ್ರೋತ್ಸಹ ಧನದಂತೆ ಕೈಮಗ್ಗದ ನೇಕಾರರಿಗೂ ಸೀರೆಗಳ ಮೌಲ್ಯದ ಆಧಾರದ ಮೇಲೆ 15 ರಿಂದ 30 % ಪ್ರೋತ್ಸಹ ಧನ ಸಿಗುತಿತ್ತು. ಅದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದ ಪ್ರೋತ್ಸಹ ಧನವೂ ಸ್ಥಗಿತವಾಗಿದೆ ಎಂದು ನೇಕಾರರು ಬೇಸರ ವ್ಯಕ್ತಪಡಿಸಿದರು.

ನಮ್ಮ ಬದುಕು ಬೀದಿಗೆ ಬೀಳುವ ಆತಂಕದಲ್ಲಿದೆ. ಸಮಯಕ್ಕೆ ಸರಿಯಾಗಿ ಕೂಲಿ ಮತ್ತು ನೂಲು ಪೂರೈಕೆಯಾಗುತ್ತಿಲ್ಲ. ಈ ಸಂಬಂಧ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಉತ್ಪಾದನಾ ವ್ಯವಸ್ಥಾಪಕ ಚಂದ್ರಶೇಖರ್‌, ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಣ ಬಿಡುಗಡೆಗೊಳಿಸುವಲ್ಲಿ ವಿಳಂಬ ಮಾಡುತ್ತಿದ್ದು, ಅವರನ್ನು ವರ್ಗಾವಣೆಗೊಳಿಸಬೇಕು. ಅಲ್ಲದೆ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು.
-ಹೊನ್ನರಾಜು, ಕುದೂರು ಕೈಮಗ್ಗ ನೇಕಾರ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.