ಕೋಡಿಕನ್ಯಾಣ ಮೀನುಗಾರಿಕೆ ಜೆಟ್ಟಿ: ಸಮಸ್ಯೆ ಈಗಲೂ ಜೀವಂತ, ಈಡೇರದ ಆಶ್ವಾಸನೆಗಳು


Team Udayavani, Jun 12, 2019, 6:10 AM IST

kodi-kanyana

ಕೋಟ: ನೈಸರ್ಗಿಕ ಬಂದರು ಎಂಬ ಹೆಗ್ಗಳಿಕೆ ಪಡೆದಿರುವ ಕೋಡಿಕನ್ಯಾಣ ಮೀನುಗಾರಿಕೆ ಜೆಟ್ಟಿಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ನೂರಾರು ಬೋಟ್‌ಗಳನ್ನು ಲಂಗರು ಹಾಕಲಾಗುತ್ತದೆ. ಈ ಜೆಟ್ಟಿಯನ್ನು ಅಭಿವೃದ್ಧಿಗೊಳಿಸಿ ಸರ್ವಕಾಲಿಕ ಬಂದರಾಗಿ ಪರಿವರ್ತನೆಗೊಳ್ಳಬೇಕು ಎನ್ನುವುದು ಇಲ್ಲಿನ ಮೀನುಗಾರರ ಹಲವು ದಶಕಗಳ ಕನಸಾಗಿದೆ. ಆದರೆ ಇಲ್ಲಿನ ಸಮಸ್ಯೆಗಳು ಜೀವಂತವಾಗಿರುವುದರಿಂದ ಜೆಟ್ಟಿಯ ಕಾರ್ಯನಿರ್ವಹಣೆಗೇ ಸಮಸ್ಯೆಯಾಗುತ್ತಿದೆ.

ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ಸ್ಥಗಿತ
ಇಲ್ಲಿನ ಅಳಿವೆಯಲ್ಲಿ ಹೂಳಿನ ಸಮಸ್ಯೆಯಿಂದ ಬೋಟ್‌ಗಳ ಸಂಚಾರಕ್ಕೆ ಹಿನ್ನಡೆಯಾಗಿತ್ತು. ಹೀಗಾಗಿ 2017ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಸುಮಾರು 6 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಹೂಳೆತ್ತುವ ಕಾಮಗಾರಿ ಚಾಲನೆ ನೀಡಿತ್ತು. ಆದರೆ ಹಲವು ಕಾರಣಗಳನ್ನು ನೀಡಿ ಗುತ್ತಿಗೆ ವಹಿಸಿಕೊಂಡ ಕಂಪೆನಿ ಕಾಮಗಾರಿಯನ್ನು ವರ್ಷಗಟ್ಟಲೆ ಸ್ಥಗಿತಗೊಳಿಸಿತ್ತು. ಜತೆಗೆ ಸಿ.ಆರ್‌.ಝಡ್‌ ಸಮಸ್ಯೆ ಕೂಡ ಕಾಮಗಾರಿಗೆ ಹಿನ್ನಡೆಯಾಗಿತ್ತು. ಹೂಳೆತ್ತುವ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ.

ಇದರಿಂದ ಬೋಟ್‌ಗಳು ಜೆಟ್ಟಿ ತಲುಪಲು ಸಾಧ್ಯವಾಗುತ್ತಿಲ್ಲ ಮತ್ತು ಈ ಹಿಂದೆ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಿಸಿದ ಜೆಟ್ಟಿ, ಬದಿಕಟ್ಟುವ ಕಾಮಗಾರಿ ಎಲ್ಲವೂ ವ್ಯರ್ಥವಾಗಿದೆ.

ಅನುಷ್ಠಾನವಾಗದ ಟೀ-ಜೆಟ್ಟಿ ಕಾಮಗಾರಿ
ಟೀ-ಜೆಟ್ಟಿ ನಿರ್ಮಿಸುವ ಸಲುವಾಗಿ ಈ ಹಿಂದೆ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಹಾಗೂ ಮಳೆಗಾಲಕ್ಕೆ ಮೊದಲು ಕಾಮಗಾರಿ ಪೂರ್ಣಗೊಳ್ಳಲಿದೆ ಎನ್ನಲಾಗಿತ್ತು. ಆದರೆ ಕಾಮಗಾರಿ ಇನ್ನೂ ಟೆಂಡರ್‌ ಹಂತದಲ್ಲಿದೆ.

ಈಡೇರದ ಆಶ್ವಾಸನೆಗಳು
ಈ ಹಿಂದೆ ಬಂದರು,ಮೀನುಗಾರಿಕೆ ಸಚಿವರು, ಸಂಸದರು, ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡಿ ಮೀನುಗಾರರ ಜತೆ ಸಭೆ ನಡೆಸಿ ಜೆಟ್ಟಿಯನ್ನು ಅಭಿವೃದ್ಧಿಪಡಿಸುವ ಆಶ್ವಾಸನೆಯನ್ನು ನೀಡಿದ್ದರು. ಆದರೆ ಇವುಗಳಲ್ಲಿ ಹಲವು ಆಶ್ವಾಸನೆಗಳು ಇಂದಿಗೂ ಈಡೇರಿಲ್ಲ.

ಮಲ್ಪೆ ಬಂದರಿನ ಒತ್ತಡ ಕುಗ್ಗಿಸಲು ಸಹಾ ಯಕ
ಬೋಟ್‌ಗಳ ಸಂಖ್ಯೆ ಹೆಚ್ಚಿರುವುದರಿಂದ ಮಲ್ಪೆ ಬಂದರಿನಲ್ಲಿ ಪ್ರತಿ ವರ್ಷ ಬೋಟ್‌ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗುತ್ತದೆ. ಹೀಗಾಗಿ ಕೋಡಿಕನ್ಯಾಣದ ಜೆಟ್ಟಿ ಅಭಿವೃದ್ಧಿಗೊಂಡರೆ ಈ ಭಾಗದ 500ಕ್ಕೂ ಹೆಚ್ಚು ಬೋಟ್‌ಗಳನ್ನು ಇಲ್ಲಿ ಲಂಗರು ಹಾಕಬಹುದು ಹಾಗೂ ಇದರಿಂದ ಮಲ್ಪೆಯ ಒತ್ತಡ ಕಡಿಮೆಯಾಗುತ್ತದೆ.

ಬೇಡಿಕೆ ಸಲ್ಲಿಸಿ ಸಾಕಾಗಿದೆ
ಕೋಡಿ ಕನ್ಯಾಣ ಮೀನುಗಾರಿಕೆ ಜೆಟ್ಟಿಯ ಕುರಿತು ಹಲವಾರು ವರ್ಷದಿಂದ ಮೀನುಗಾರರು ಹೋರಾಟ ನಡೆಸುತ್ತಿದ್ದೇವೆ. ಆದರೆ ಸಮಸ್ಯೆ ಇಂದಿಗೂ ಜೀವಂತವಾಗಿದೆ. ಮಂಜೂರಾದ ಹಣದಲ್ಲಿ ಹೂಳೆತ್ತುವ ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿ, ಜೆಟ್ಟಿ ಅಭಿವೃದ್ಧಿಪಡಿಸಿದರೆ ಅನುಕೂಲವಾಗುತ್ತಿತ್ತು. ಆದರೆ ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ನಿಂತಿದೆ. ಟೀ-ಜೆಟ್ಟಿಗೆ ಬಿಡುಗಡೆಯಾದ ಹಣ ಅನುಷ್ಠಾನವಾಗಿಲ್ಲ. ಹೀಗಾಗಿ ಮೀನುಗಾರರಿಗೆ ಹೋರಾಟ ನಡೆಸುವ ಮನಸ್ಸು ಇಲ್ಲವಾಗಿದೆ.
-ಚಂದ್ರ ಕಾಂಚನ್‌ ಕೋಡಿ, ಅಧ್ಯಕ್ಷರು ಕೋಡಿ ಮೀನುಗಾರರ ಸಂಘ

ಸಿ.ಆರ್‌.ಝಡ್‌. ಅನುಮತಿಗೆ ಕಾಯುತ್ತಿದ್ದೇವೆ
ಸಿ.ಆರ್‌.ಝಡ್‌. ಸಮಸ್ಯೆಯಿಂದಾಗಿ ಜಟ್ಟಿ ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಇದೀಗ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗಿದ್ದು,ಅನುಮತಿ ಸಿಗುವ ನಿರೀಕ್ಷೆ ಇದೆ. ಟೀ-ಜೆಟ್ಟಿ ಕಾಮಗಾರಿ ಟೆಂಡರ್‌ ಹಂತದಲ್ಲಿದೆ. ಈ ವರ್ಷ ಮಳೆಗಾಲ ಮುಗಿದ ತತ್‌ಕ್ಷಣ ಹೂಳೆತ್ತುವ ಕಾಮಗಾರಿ ಜತೆಗೆ ಟೀ-ಜೆಟ್ಟಿಗೆ ಚಾಲನೆ ನೀಡಲಿದ್ದೇವೆ.
-ಮಂಚೇಗೌಡ, ಸಹಾಯಕ ಅಭಿಯಂತರು ಬಂದರು ಇಲಾಖೆ

– ರಾಜೇಶ ಗಾಣಿಗ ಅಚಾÉಡಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.