17 ಸಾವಿರಕ್ಕಿಂತ ಹೆಚ್ಚು ಅನಧಿಕೃತ ಪ್ಲಾಟ್

•ಅವಳಿ ನಗರದ ಅಕ್ರಮ ಲೇಔಟ್‌ಗಳತ್ತ ತಕ್ಷಣ ಗಮನ ಹರಿಸಲು ಒತ್ತಾಯ

Team Udayavani, Jun 12, 2019, 9:06 AM IST

hubali-tdy-3..

ಹುಬ್ಬಳ್ಳಿ: ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರ ಸಮೀಕ್ಷೆ ಪ್ರಕಾರ ಅವಳಿ ನಗರದಲ್ಲಿ 1400 ಎಕರೆ ಪ್ರದೇಶದಲ್ಲಿ 17 ಸಾವಿರಕ್ಕೂ ಅಧಿಕ ಅನಧಿಕೃತ ಪ್ಲಾಟ್‌ಗಳಿವೆ. ಜಿಲ್ಲಾಧಿಕಾರಿಗಳು ಅಕ್ರಮ ಲೇಔಟ್‌ಗಳ ಬಗ್ಗೆ ತಕ್ಷಣ ಗಮನ ಹರಿಸಬೇಕು. ಹುಡಾದಲ್ಲಿ ಈ ಹಿಂದಿದ್ದ ಟಾಸ್ಕ್ಫೋರ್ಸ್‌ ಸಮಿತಿ ಸಕ್ರಿಯಗೊಳಿಸಬೇಕು ಎಂದು ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಅವಳಿ ನಗರದಲ್ಲಿ ಅಕ್ರಮ ಲೇಔಟ್‌ಗಳ ಹಾವಳಿ ತಡೆಗಟ್ಟುವ ಸಲುವಾಗಿ ಪಾಲಿಕೆ ಆಯುಕ್ತ ಪಿ. ಮಣಿವಣ್ಣನ್‌ ಇದ್ದಾಗ ಹಾಗೂ ನಾನು ಹುಡಾ ಅಧ್ಯಕ್ಷನಾಗಿದ್ದ ವೇಳೆ ಹುಡಾ, ಕಂದಾಯ ಇಲಾಖೆ, ಹೆಸ್ಕಾಂ ಹಾಗೂ ಪಾಲಿಕೆ ಹಿರಿಯ ಅಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್‌ ತಂಡ ರಚಿಸಿದ್ದೆ. ಸಮಿತಿ ನಿಷ್ಕ್ರಿಯವಾಗಿದ್ದು, ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ. ಹೀಗಾಗಿ ಅಕ್ರಮ ಲೇಔಟ್‌ಗಳು ಹುಟ್ಟುಕೊಳ್ಳುತ್ತಿವೆ ಎಂದರು.

ನಗರದಲ್ಲಿ ಕೆಲವರು ಲೇಔಟ್ ಎಂದು ಹೇಳಿ ನಾಲ್ಕು ಕಡೆ ಕಲ್ಲು ನಿಲ್ಲಿಸಿ, ಪ್ಲಾಟ್‌ಗಳನ್ನು ಬಡವರಿಗೆ ಕಡಿಮೆ ದರದಲ್ಲಿ ಹಾಗೂ ಕಂತುಗಳಲ್ಲಿ ಮಾರಾಟ ಮಾಡುವ ನೆಪದಲ್ಲಿ ಮೋಸ ಮಾಡುತ್ತಿದ್ದಾರೆ. ಇಂತಹ ಅಕ್ರಮ ಜಾಗ ಖರೀದಿಸಿದವರು ನಂತರ ಅಲ್ಲಿ ಮನೆ ಕಟ್ಟಿಸಿ ವಾಸಿಸುತ್ತಿದ್ದಾರೆ. ಅಲ್ಲದೆ ನೀರು, ರಸ್ತೆ, ವಿದ್ಯುತ್‌ ಸಂಪರ್ಕ ಪಡೆಯುತ್ತಿದ್ದಾರೆ. ಪಾಲಿಕೆಗೆ ಮನೆ ಕರ ಪಾವತಿಸುತ್ತಿದ್ದಾರೆ. ಕೆಲ ವರ್ಷಗಳ ನಂತರ ಜಮೀನಿನ ಮೂಲ ಮಾಲೀಕರು ತಮ್ಮದೆಂದು ಬಂದು ಅದನ್ನು ತಮ್ಮ ಕಬ್ಜಾಗೆ ಪಡೆಯುವುದು ಸಾಮಾನ್ಯವಾಗಿದೆ. ಇದರಿಂದ ಸಾಲಸೋಲ ಮಾಡಿ, ಕಷ್ಟಪಟ್ಟು ಮನೆ ಕಟ್ಟಿಕೊಂಡ ಬಡವರು ಬೀದಿಗೆ ಬರುತ್ತಿದ್ದಾರೆ. ಈ ರೀತಿ ಬಡವರಿಗೆ ಮೋಸ ಆಗದಂತೆ ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕು. ಅಕ್ರಮ ಲೇಔಟ್‌ಗಳ ಮೇಲೆ ನಿಗಾ ವಹಿಸಬೇಕು. ರಾಜ್ಯ ಸರಕಾರ ಅಕ್ರಮ-ಸಕ್ರಮ ಮಸೂದೆ ಕೂಡಲೇ ಜಾರಿಗೆ ತಂದರೆ ಬಡವರು ಅನಧಿಕೃತವಾಗಿ ಖರೀದಿಸಿದ ಪ್ಲಾಟ್ಅನ್ನು ದಂಡ ಪಾವತಿಸಿ ಸಕ್ರಮಗೊಳಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು. ವೀರೇಶ ಸಂಗಳ, ನಾಗೇಶ ಕಲಬುರ್ಗಿ ಇದ್ದರು.

ದಾಯಗೋಡಿ ಬಿಜೆಪಿಗೆ ಸೇರಿಲ್ಲ:

ಬೆಂಗೇರಿಯಲ್ಲಿ ಬೇರೆಯವರ ಜಾಗವನ್ನು ಬಡವರಿಗೆ ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಹೂವಪ್ಪ ದಾಯಗೋಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರು ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರಿಂದಲೇ ಅವರನ್ನು ಈ ಹಿಂದೆ ಪಕ್ಷದಿಂದ ಹೊರಗೆ ಹಾಕಲಾಗಿತ್ತು ಎಂದು ಬಿಜೆಪಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ನಾಗೇಶ ಕಲಬುರ್ಗಿ ಹೇಳಿದರು. ಇತ್ತೀಚೆಗೆ ನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಅವರು ವೇದಿಕೆ ಹಂಚಿಕೊಂಡಿರಬಹುದು. ಆದರೆ ಪಕ್ಷಕ್ಕೆ ಅವರನ್ನು ಸೇರ್ಪಡೆಗೊಳಿಸಿಕೊಂಡಿಲ್ಲ ಎಂದರು.

ನಗರದಲ್ಲಿ ಅನಧಿಕೃತ ಬಡಾವಣೆಗಳಿಗೆ ಬೆಂಬಲ ನೀಡಬಾರದು ಹಾಗೂ ಇಂತಹ ಲೇಔಟ್‌ಗಳ ನಿರ್ಮಾಣಕ್ಕೆ ಕೈಹಾಕಬಾರದೆಂದು ಪಕ್ಷದ ಧುರೀಣರು, ಪಾಲಿಕೆ ಮಾಜಿ ಸದಸ್ಯರು, ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಜಗದೀಶ ಶೆಟ್ಟರ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಸ್ಪಷ್ಟವಾಗಿ ಸೂಚಿಸಿದ್ದಾರೆ. ನಗರದಲ್ಲಿ ರಸ್ತೆ ಅತಿಕ್ರಮಿಸಿ ನಿರ್ಮಿಸಿದ ದರ್ಗಾಗಳನ್ನು ಜಿಲ್ಲಾಡಳಿತ ತೆರವುಗೊಳಿಸದಿದ್ದರೆ ಈದ್ಗಾ ಮೈದಾನ ರೀತಿ ಪಕ್ಷದಿಂದ ಹೋರಾಟ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.