ಪಿಡಿಒ ವರ್ಗಾವಣೆ ವಿರೋಧಿಸಿ ಕಲಖಾಂಬ ಗ್ರಾಮಸ್ಥರ ಮನವಿ
Team Udayavani, Jun 12, 2019, 10:05 AM IST
ಬೆಳಗಾವಿ: ತಾಲೂಕಿನ ಕಲಖಾಂಬ ಗ್ರಾಮದ ಪಿಡಿಒ ಅವರನ್ನು ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿ: ತಾಲೂಕಿನ ಕಲಖಾಂಬ ಗ್ರಾಮದ ಪಿಡಿಒ ಅವರ ವರ್ಗಾವಣೆ ಖಂಡಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು. ಪಿಡಿಒ ಗೋಪಾಲ ಗುಡಿ ಅವರು ನಮ್ಮ ಗ್ರಾಮಕ್ಕೆ ಪಿಡಿಒ ಆಗಿ ಬಂದಾಗಿನಿಂದ ಯಾವುದೇ ಸಮಸ್ಯೆ ಇಲ್ಲ. ಕುಡಿಯುವ ನೀರು, ವಿದ್ಯುತ್, ರಸ್ತೆ, ಚರಂಡಿ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಯಾವುದೇ ಸಮಸ್ಯೆ ಇಲ್ಲವಾಗಿದೆ. ಗ್ರಾಮಸ್ಥರ ಯಾವುದೆ ಕಾರ್ಯಗಳಿಗೆ ತೊಂದರೆ ಆಗಿಲ್ಲ. ಆದರೆ ಹಠಾತ್ತನೇ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ದೂರಿದರು. ಪಿಡಿಒ ಗೋಪಾಲ ಗುಡಿ ಅವರನ್ನು ವರ್ಗಾವಣೆ ಮಾಡಿರುವುದನ್ನು ಹಿಂಪಡೆಯಬೇಕು. ಕೂಡಲೇ ಅವರನ್ನು ಮತ್ತೆ ಕಲಖಾಂಬ ಗ್ರಾಮಕ್ಕೆ ನೇಮಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ