ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ
Team Udayavani, Jun 12, 2019, 10:58 AM IST
ಹಾವೇರಿ: ಉದ್ಯೋಗ ವಾಹಿನಿ ಜಾಗೃತಿ ರಥ ಸಂಚಾರಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.
ಹಾವೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಯಡಿ ಉದ್ಯೋಗ ವಾಹಿನಿ ಜಾಗೃತಿ ರಥ ಸಂಚಾರಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.
ನಗರದ ತಾಪಂ ಕಚೇರಿ ಆವರಣದಲ್ಲಿ ಉದ್ಯೋಗ ವಾಹಿನಿ ಜಾಗೃತಿ ರಥ ವಾಹನ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನರೇಗಾ ಯೋಜನೆಯ ಮಾಹಿತಿಯನ್ನು ನೀಡಲು ಈ ವಾಹನವು ಆರು ದಿನ ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಸಂಚಾರ ಮಾಡಲಿದೆ ಎಂದರು. ವಾಹನವು ಗ್ರಾಮಗಳ ಭೇಟಿ ಸಮಯದಲ್ಲಿ ಜನರಿಗೆ ನರೇಗಾ ಯೋಜನೆ ಸಂಪೂರ್ಣ ಮಾಹಿತಿ ನೀಡುವುದು, ಕೂಲಿಕಾರರ ಕೂಲಿ ಬೇಡಿಕೆ, ಹೊಸ ಉದ್ಯೋಗ ಚೀಟಿ ಬೇಡಿಕೆ ಮತ್ತು ವೈಯಕ್ತಿಕ ಕಾಮಗಾರಿಗಳ ಬೇಡಿಕೆಯ ಮಾಹಿತಿಯನ್ನು ತಿಳಿಸಲಾಗುವುದು ಎಂದರು. ತಾಪಂ ಇಒ ಅನ್ನಪೂರ್ಣ ಮುದಕಮ್ಮನವರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬರೇಗಾರ, ನರೇಗಾ ಸಹಾಯಕ ನಿರ್ದೇಶಕ ಟಿ.ಆರ್. ಮಲ್ಲಾಡದ, ಮಾಹಿತಿ ಶಿಕ್ಷಣ ಸಂಯೋಜನಾಧಿಕಾರಿ ಜಿ.ಎಸ್. ಬೆನ್ನೂರ, ಕೆ.ಸಿ. ಕೋರಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ