ಶಿಥಿಲಗೊಂಡ ಶಾಲೆಗಳ ದುರಸ್ತಿಗೆ ಕ್ರಮ

ದಾನಿಗಳಿಂದ ನಿಧಿ ಸಂಗ್ರಹಿಸಲು ಉಸ್ತುವಾರಿ ಸಚಿವರ ಅನುಮತಿ •21 ಅಥವಾ 24ರಂದು ಪಾದಯಾತ್ರೆ

Team Udayavani, Jun 12, 2019, 11:58 AM IST

17

ಶಿವಮೊಗ್ಗ: ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿದರು.

ಶಿವಮೊಗ್ಗ: ನಗರದಲ್ಲಿ ಶಿಥಿಲಗೊಂಡಿರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಕಟ್ಟಡಗಳ ದುರಸ್ತಿಗಾಗಿ ಶಾಸಕ ಕೆ.ಎಸ್‌. ಈಶ್ವರಪ್ಪ ಅವರ ಒತ್ತಾಯದ ಮೇರೆಗೆ ಜೂ.21 ಅಥವಾ 24ರಂದು ಪಾದಯಾತ್ರೆ ಮೂಲಕ ದಾನಿಗಳಿಂದ ನಿಧಿ ಸಂಗ್ರಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಒಪ್ಪಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಬಹಳಷ್ಟು ಸರಕಾರಿ ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿರುವ ಸಂಗತಿ ಚರ್ಚೆಗೆ ಬಂದು ಅಂತಿಮವಾಗಿ ಪಾದಯಾತ್ರೆ ಮೂಲಕ ದಾನಿಗಳಿಂದ ನಿಧಿ ಸಂಗ್ರಹಿಸಲು ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಹಿಂದಿನ ತ್ತೈಮಾಸಿಕ ಕೆಡಿಪಿ ಸಭೆ ನಡವಳಿಯ ಅನುಪಾಲನಾ ವರದಿ ಮೇಲೆ ನಡೆಸಿದ ಚರ್ಚೆ ಸಂದರ್ಭದಲ್ಲಿ ವಿಷಯ ಪ್ರಸ್ತಾಪಿಸಿದ ಈಶ್ವರಪ್ಪ ಅವರು, ‘ಶಿಥಿಲಗೊಂಡಿರುವ ಶಾಲೆ ಕಟ್ಟಡಗಳ ದುರಸ್ತಿಗೆ ಅಗತ್ಯವಾದಷ್ಟು ಅನುದಾನವನ್ನು ಸರಕಾರ ಬಿಡುಗಡೆ ಮಾಡುತ್ತಿಲ್ಲ. ಅತಿವೃಷ್ಟಿ ಹಾನಿ ಪರಿಹಾರದಲ್ಲಿ ಗರಿಷ್ಠ 1.50 ಲಕ್ಷ ರೂ.ಗಳಿಗಿಂತ ಅಧಿಕ ವೆಚ್ಚ ನೀಡಲು ಸಾಧ್ಯವಿಲ್ಲವೆಂದು ಡಿಸಿ ಹೇಳುತ್ತಾರೆ. ಮಕ್ಕಳು, ಶಿಕ್ಷಕರು ಜೀವ ಭಯದಲ್ಲಿದ್ದಾರೆ. ಶಾಲೆ ಕಟ್ಟಡ ದುರಸ್ತಿಗೆ ದಾನಿಗಳು ದಾನ ನೀಡಲು ಸಿದ್ಧರಿದ್ದಾರೆ. ಜಿಲ್ಲೆಯ ಎಲ್ಲ ಶಾಲೆಗಳನ್ನು ಇದೇ ಮಾದರಿಯಲ್ಲಿ ದುರಸ್ತಿ ಮಾಡಬಹುದು. ನಗರವನ್ನೇ ಮಾದರಿಯಾಗಿಟ್ಟುಕೊಳ್ಳೋಣ. ನಿಮ್ಮ ಜತೆಗೆ ನಾವೂ ನಿಧಿ ಸಂಗ್ರಹಕ್ಕೆ ಬರುತ್ತೇವೆ. ಇಂದೇ ದಿನಾಂಕ ನಿಗದಿಪಡಿಸಿ, ಇಲ್ಲವಾದರೆ ಮುಂದಿನ ಕೆಡಿಪಿಗೆ ನಾನು ಬರುವುದಿಲ್ಲ’ ಎಂದು ಪಟ್ಟು ಹಿಡಿದರು. ಈಶ್ವರಪ್ಪ ಅವರ ಒತ್ತಾಸೆಗೆ ಮಣಿದ ಸಚಿವರು ಜೂ.21 ಅಥವಾ 24ರಂದು ಕಾರ್ಯಕ್ರಮ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ನಡೆಸುತ್ತಿರುವ ಕಾಮಗಾರಿಗಳು ಹಲವು ವರ್ಷಗಳಿಂದ ಕುಂಟುತ್ತಾ ನಡೆಯುತ್ತಿರುವ ಬಗ್ಗೆ ಎಲ್ಲ ಶಾಸಕರು ಸಚಿವರ ಗಮನ ಸೆಳೆದರು. ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಗ್ರಾಮೀಣ ಕುಡಿವ ನೀರು ಯೋಜನೆಗಳು ಏಳೆಂಟು ವರ್ಷಗಳಿಂದ ನಡೆಯುತ್ತಲೇ ಇವೆ. ಒಂದು ಹನಿ ನೀರು ಹರಿಯದಿದ್ದರೂ ಯೋಜನೆ ಪೂರ್ಣವಾಗಿ ಹಸ್ತಾಂತರಿಸಲಾಗಿದೆ ಎಂದು ವರದಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ಗೆ ಇನ್ನೊಂದು ವಾರದೊಳಗೆ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಎಲ್ಲ ಕುಡಿವ ನೀರು ಯೋಜನೆಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಜಲಧಾರೆ ಯೋಜನೆಯಲ್ಲಿ ನದಿಯಲ್ಲಿನ ಹೆಚ್ಚುವರಿ ನೀರನ್ನು ಕೆರೆಗಳಿಗೆ ಹರಿಸುವುದರ ಜತೆಗೆ ಕುಡಿಯುವುದಕ್ಕೂ ಬಳಸುವಂತಹ ವಿವಿಧೋದ್ದೇಶ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದಕ್ಕಾಗಿ ಸರಕಾರ 50 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ಭಾಗದಲ್ಲಿ ಜಾರಿಗೊಳಿಸಬಹುದಾದ ಯೋಜನೆಗಳ ಪಟ್ಟಿ ಮಾಡಿ ಸಲ್ಲಿಸುವಂತೆ ಸಚಿವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಬಹಳಷು ಇಲಾಖೆಗಳು ಖಾಸಗಿ ಕಟ್ಟಡದಲ್ಲಿದ್ದು ಬಾಡಿಗೆ ಕಟ್ಟುತ್ತಿವೆ. ಕೆಲವೆಡೆ ಸರಕಾರಿ ಕಟ್ಟಡಗಳು ಖಾಲಿ ಬಿದ್ದಿವೆ. ಅದಂತಹ ಕಟ್ಟಡಗಳಿಗೆ ಖಾಸಗಿ ಕಟ್ಟಡದಲ್ಲಿರುವ ಇಲಾಖೆ ಕಚೇರಿಗಳನ್ನು ಸ್ಥಳಾಂತರಿಸಬೇಕೆಂದು ಶಾಸಕರು ಆಗ್ರಹಿಸಿದರು. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಚಿವರು, ಸರಕಾರಿ ಇಲಾಖೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಶಾಸಕರಿಗೆ ಸಲಹೆ ನೀಡಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್‌ ಮಾತನಾಡಿ, ಕಳೆದ ವರ್ಷ ಶಾಲೆ ಮಕ್ಕಳಿಗೆ ಕೊಟ್ಟ ಸೈಕಲ್ಗಳು ಕಳಪೆಯಾಗಿದ್ದವು. ಕಳೆದ ವರ್ಷದಂತಹ ಸೈಕಲ್ಗಳು ಮತ್ತೆ ಬಂದಲ್ಲಿ ಅವುಗಳನ್ನು ಹಂಚಿಕೆ ಮಾಡುವುದಿಲ್ಲ. ಐಎಸ್‌ಐ ಗುಣಮಟ್ಟದ ಸೈಕಲ್ಗಳನ್ನು ವಿತರಣೆ ಮಾಡಬೇಕೆಂದು ಆಗ್ರಹಿಸಿದರು. ಸಚಿವರು ಇದರ ಬಗ್ಗೆ ಸಿಎಂ ಅವರೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.