ವಿಕೋಪಗಳಿಗೆ ಪರಿಸರ ನಾಶ ಕಾರಣ

ಕೀಲಾರದಲ್ಲಿ ಸ್ವಚ್ಛಮೇವ ಜಯತೆ ಆಂದೋಲನಕ್ಕೆ ಸಂಸದೆ ಸುಮಲತಾ ಚಾಲನೆ •ಪರಿಸರ ಕಾಪಾಡಲು ಸಲಹೆ

Team Udayavani, Jun 12, 2019, 1:02 PM IST

mandya-tdy-2..

ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದ ಸ್ವಚ್ಛಮೇವ ಜಯತೆ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅಂಬರೀಶ್‌ ಚಾಲನೆ ನೀಡಿದರು.

ಮಂಡ್ಯ: ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ನಾಶ ಮಾಡುವುದು ಅಮಾನವೀಯ. ಹುಟ್ಟಿನಿಂದ ಸಾಯುವವರೆಗೂ ನಮ್ಮನ್ನು ಜೀವಂತ ವಾಗಿಡುವುದೇ ಪ್ರಕೃತಿ. ಅದರ ಜೀವಂತಿಕೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ವತಿಯಿಂದ ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದ ಸ್ವಚ್ಛಮೇವ ಜಯತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅಭಿವೃದ್ಧಿ ಹೆಸರಲ್ಲಿ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಜಾಗತಿಕ ತಾಪಮಾನ ತೀವ್ರಗೊಳ್ಳುತ್ತಿದ್ದು, ಬರಗಾಲ, ಚಂಡಮಾರುತ, ಸುನಾಮಿಯಂತಹ ಪ್ರಕೃತಿ ವಿಕೋಪಗಳನ್ನು ನಾವು ಕಾಣುತ್ತಿದ್ದೇವೆ. ಇದೆಲ್ಲಕ್ಕೂ ಪರಿಸರ ಅಸಮತೋಲನವೇ ಕಾರಣ. ಈ ನಿಟ್ಟಿನಲ್ಲಿ ನಾವು ಪರಿಸರವನ್ನು ನಾವು ಕಾಪಾಡಿದರೆ, ಪರಿಸರ ನಮ್ಮನ್ನು ಕಾಪಾಡುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪರಿಸರದ ಮಹತ್ವ ಕುರಿತು ಮಕ್ಕಳಿಗೆ ಶಿಕ್ಷಕರು ಅರಿವು ಮೂಡಿಸಬೇಕು. ಒಂದು ಮಗು ಒಂದು ಗಿಡ ನೆಟ್ಟು ಬೆಳೆಸಿದರೆ ಪರಿಸರ ಸಮತೋಲನ ಸಾಧ್ಯವಾಗುತ್ತದೆ. ನಾವೂ ಸಹ ಪ್ರಕೃತಿ ಸಂರಕ್ಷಕರಾಗಿ ನಿಸರ್ಗದ ಮಡಿಲಿನಲ್ಲಿ ಜೀವಿಸುವಂತಹ ವಾತಾವರಣವನ್ನು ಸೃಷ್ಟಿಸಿಕೊಂಡಾಗ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡುಗೆಯಾಗಿ ನೀಡಲು ಸಾಧ್ಯವಿದೆ ಎಂದು ಹೇಳಿದರು.

ಸ್ವಚ್ಛತೆ, ಪರಿಸರಕ್ಕೆ ಸಂಬಂಧಿಸಿದಂತೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ನಾವು, ರಸ್ತೆ, ಚರಂಡಿ ಸ್ವಚ್ಛತೆ ಬಗ್ಗೆ ಮಾತನಾಡುತ್ತೇವೆ. ಆದರೆ ಪರಿಸರ ಮತ್ತು ನೀರಿನ ಬಗ್ಗೆ ಮಾತನಾಡುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಒಂದು ಬಿಂದಿಗೆ ನೀರಿಗಾಗಿ ಕಿಲೋಮೀಟರ್‌ ದೂರ ಹೋಗಬೇಕಿದೆ. ಮುಂದಿನ ದಿನಗಳಲ್ಲಿ ಇದೇ ಸ್ಥಿತಿ ಎಲ್ಲೆಡೆ ಬರಬಹುದು. ಅದಕ್ಕೂ ಮೊದಲು ನಾವು ಎಚ್ಚೆತ್ತು ಪರಿಸರ ಉಳಿಸಲು ಪಣ ತೊಡಬೇಕು ಎಂದು ಸುಮಲತಾ ತಿಳಿಸಿದರು.

ಹಣ ಮಾಡಿದರೆ ಏನು ಪ್ರಯೋಜನ: ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ನಾವು ಈಗಲೇ ಜಾಗೃತರಾಗಿ ಪರಿಸರ ಉಳಿವಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕಿದೆ. ಎಲ್ಲೆಡೆ ಸಮೃದ್ಧವಾಗಿ ಗಿಡ-ಮರಗಳು ಬೆಳೆದರೆ ಕಾಡು ಹೆಚ್ಚಾಗಿ ಸಕಾಲದಲ್ಲಿ ಮಳೆ ಬೀಳುತ್ತದೆ. ಭೂಮಿ ತಂಪಾಗುವುದರ ಜತೆಗೆ ಜಾಗತಿಕ ತಾಪಮಾನವೂ ಕ್ಷೀಣಿಸುತ್ತದೆ. ಪ್ರಾಕೃತಿಕ ಸಮತೋಲನ ಕಾಪಾಡಿದಾಗ ಜೀವಸಂಕುಲದ ಉಳಿವು ಸಾಧ್ಯವಾಗುತ್ತದೆ. ಅದಕ್ಕಾಗಿ ಎಲ್ಲರಲ್ಲೂ ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ನಾವು ಜೀವಂತವಾಗಿರಲು ಪ್ರಕೃತಿಯನ್ನೇ ಉಳಿಸದೆ, ಕೋಟಿಗಟ್ಟಲೆ ಆಸ್ತಿ, ಹಣ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಪ್ರವಾಸಿ ತಾಣಗಳ ಸುತ್ತಮುತ್ತ ಪರಿಸರ ಹಾನಿ ಹೆಚ್ಚಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಪರಸರ ಹಾಳು ಮಾಡಲಾಗುತ್ತಿದೆ. ಇನ್ನಾದರೂ ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ಒಂದು ಮರ ಕಡಿದು ಅಭಿವೃದ್ಧಿಪಡಿಸಿದರೆ ನಾಲ್ಕು ಮರ ನೆಟ್ಟು ಪರಿಸರವನ್ನು ಕಾಪಾಡುವ ಕೆಲಸ ಆಗಬೇಕು. ಆಗ ಮಾತ್ರ ಪರಿಸರಕ್ಕೆ ನಾವು ನಿಜವಾಗಲೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಸಲಹೆ ನೀಡಿದರು.

ಯುವ ಶಕ್ತಿಯ ಮುಂದೆ ಯಾವ ಶಕ್ತಿಯೂ ಏನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಪರಿಸರದ ಬಗ್ಗೆ ಯುವ ಶಕ್ತಿ ಕಾಳಜಿ ವಹಿಸಬೇಕಿದೆ. ಪ್ರತಿ ವಿಚಾರದಲ್ಲೂ ತಮ್ಮ ಕರ್ತವ್ಯ ಏನೆಂಬುದನ್ನು ಅರಿತು ಕೆಲಸ ಮಾಡಬೇಕು. ಪರಿಸರವನ್ನು ಉಳಿಸಿ ಬೆಳೆಸುವುದು ಯುವಶಕ್ತಿಯ ಮುಂದಿರುವ ಸವಾಲಾಗಿದೆ ಎಂದು ಹೇಳಿದರು. ಶಾಸಕ ಎಂ.ಶ್ರೀನಿವಾಸ್‌ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಸರಳ ಕಾರ್ಯಕ್ರಮ: ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್‌ ಕಾರ್ನಾಡ್‌ ನಿಧನದ ಹಿನ್ನಲೆಯಲ್ಲಿ ಸ್ವಚ್ಚಮೇವ ಜಯತೆ ಕಾರ್ಯಕ್ರಮ ಸರಳವಾಗಿ ನಡೆಯಿತು. ಸಂಸದೆ ಸುಮಲತಾ ಅವರು ಶಾಲೆ ಆವರಣದಲ್ಲಿ ಗಿಡ ನೆಟ್ಟು ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗಿರೀಶ್‌ ಕಾರ್ನಾಡ್‌ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಸಂಸದೆ ಸುಮಲತಾಗೆ ರೈತಸಂಘದಿಂದ ಮನವಿ:

ಮೈಶುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆಗಳನ್ನು ತಕ್ಷಣವೇ ಆರಂಭಿಸುವುದು, ಕಬ್ಬಿಗೆ ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತಸಂಘದ ಕಾರ್ಯಕರ್ತರು ಮಂಗಳವಾರ ಸಂಸದೆ ಸುಮಲತಾ ಅವರಿಗೆ ಮನವಿ ಸಲ್ಲಿಸಿದರು. ಕೆಆರ್‌ಎಸ್‌ ಮತ್ತು ಹೇಮಾವತಿ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದು. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡುವುದು. ಭತ್ತ ಖರೀದಿ ಕೇಂದ್ರವನ್ನು ಶೀಘ್ರ ತೆರೆಯಬೇಕು. ರಾಜ್ಯಸರ್ಕಾರದ ಸಾಲ ಮನ್ನಾ ಪರಿಹಾರ ಇದುವರೆಗೂ ರೈತರಿಗೆ ತಲುಪಿಲ್ಲ. ಅದರ ಪ್ರಯೋಜನ ರೈತರಿಗೆ ಸಿಗುವಂತೆ ಮಾಡಬೇಕು ಎಂದು ಕೋರಿದರು. ಕಂದಾಯ ಇಲಾಖೆಯಲ್ಲಿ ರೈತರ ಯಾವುದೇ ಕೆಲಸಗಳೂ ನಡೆಯುತ್ತಿಲ್ಲ. ವಿನಾಕಾರಣ ರೈತರನ್ನು ಕಚೇರಿಗೆ ಅಲೆಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಅಂತೆಯೇ ಕೆಆರ್‌ಎಸ್‌ ಸುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಷೇಧಿಸಿ ಅಣೆಕಟ್ಟು ಉಳಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.