ಅದಿರು ಲಾರಿ ಸಂಚಾರಕ್ಕೆ ನಿರ್ಬಂಧ ಹೇರದಿದ್ರೆ ಹೋರಾಟ

ಭೀಮಸಮುದ್ರ-ಚಿತ್ರದುರ್ಗ ಮಾರ್ಗದಲ್ಲಿ ಸಂಚರಿಸುವ ಅದಿರು ಸಾಗಣೆ ಲಾರಿಗಳಿಂದ ಜನರಿಗೆ ಕಿರಿಕಿರಿ

Team Udayavani, Jun 12, 2019, 3:53 PM IST

30

ಚಿತ್ರದುರ್ಗ: ಅದಿರು ಲಾರಿಗಳ ಓಡಾಟವನ್ನು ನಿರ್ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ: ಭೀಮಸಮುದ್ರ-ಚಿತ್ರದುರ್ಗ ಮಾರ್ಗದಲ್ಲಿ ಅದಿರು ಲಾರಿಗಳನ್ನು ಸಂಪೂರ್ಣ ನಿರ್ಬಂಧಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಹಿರೇಗುಂಟನೂರು ಹೋಬಳಿಯ ಗ್ರಾಮಗಳ ಜನರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹಿರೇಗುಂಟನೂರಿನ ಹಳಿಯೂರು ಸಮೀಪ ಸೋಮವಾರ ಅದಿರು ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ದಂಪತಿ ಸೇರಿದಂತೆ ಮೂವರನ್ನು ಬಲಿ ತೆಗೆದುಕೊಂಡಿದೆ. ಅಪಘಾತದಲ್ಲಿ ಏಳು ತಿಂಗಳ ತುಂಬು ಗರ್ಭಿಣಿ, ಪತಿ, ಮತ್ತೂಬ್ಬ ಯುವಕ ಸೇರಿದಂತೆ ಗರ್ಭದಲ್ಲಿದ್ದ ಶಿಶು ಕೂಡ ಹೊರಗಿನ ಪ್ರಪಂಚವನ್ನು ನೋಡುವ ಮುನ್ನವೇ ಬಲಿಯಾಗಿದ್ದಾರೆ. ಒಟ್ಟು ನಾಲ್ಕು ಅಮಾಯಕರ ಜೀವ ಬಲಿ ತೆಗೆದುಕೊಂಡಿರುವ ಅದಿರು ಕಂಪನಿ ಯಾವುದೇ ಕಾರಣಕ್ಕೂ ಬೇಡ ಎಂದು ಪ್ರತಿಭಟನಾಕಾರರು ತಿಳಿಸಿದರು.

ಹಿರೇಗುಂಟನೂರು ಹೋಬಳಿಯ ಭೀಮಸಮುದ್ರದ ಬಳಿ ವೇದಾಂತ ಲಿಮಿಟೆಡ್‌ ಕಂಪನಿಯವರು ಅದಿರು ಸಾಗಾಣಿಕೆ ಮಾಡುತ್ತಿದ್ದಾರೆ. ಪ್ರತಿನಿತ್ಯ ಸಾವಿರಾರು ಲಾರಿಗಳು ಭೀಮಸಮುದ್ರ ರಸ್ತೆಯಲ್ಲಿ ಸಂಚರಿಸುತ್ತಿವೆ. ಅನೇಕ ಬಾರಿ ಅಪಘಾತಗಳಾಗಿ ಸಾವು-ನೋವು ಸಂಭವಿಸಿದರೂ ಅದಿರು ಸಾಗಿಸುವ ಕಂಪನಿಯ ಲಾರಿಗಳು ಮಾರ್ಗವನ್ನು ಬದಲಾಯಿಸುತ್ತಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಈ ಬಗ್ಗೆ ಗಮನ ಹರಿಸದೇ ಇರುವುದರಿಂದ ಮೇಲಿಂದ ಮೇಲೆ ಅಪಘಾತಗಳುಂಟಾಗಿ ಮುಗ್ಧರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಅಳಲು ವ್ಯಕ್ತಪಡಿಸಿದರು.

ಅಪಘಾತದಲ್ಲಿ ಮಹಂತೇಶ್‌ ನಾಯ್ಕ, ಪತ್ನಿ ದೀಪಾಬಾಯಿ ಹಾಗೂ ದೀಪಾಬಾಯಿ ಅಣ್ಣನ ಮಗ ಚೇತನ್‌ ಮೃತಪಟ್ಟಿದ್ದಾರೆ. ಜೀವಕ್ಕೆ ಎಷ್ಟು ಬೆಲೆ ಕಟ್ಟಿದರೂ ಸಾಲದು. ಆದರೂ ಮೃತ ಜೀವಗಳಿಗೆ ಕನಿಷ್ಠ ತಲಾ ಒಂದೊಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಪಟ್ಟು ಹಿಡಿದರು.

ಸುಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದರಿಂದ ಒನಕೆ ಓಬವ್ವ ವೃತ್ತ ಹಾಗೂ ಜಿಲ್ಲಾಧಿಕಾರಿ ಬಂಗಲೆ ಕಡೆಯಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹೊರಗೆ ಪ್ರತಿಭಟನೆ ನಡೆಯುತ್ತಿದ್ದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ರೈತ ಸಂಘ ಹಾಗೂ ಹಿರೇಗುಂಟನೂರು ಗ್ರಾಮದ ಮುಖಂಡರು ಮತ್ತು ವೇದಾಂತ ಗಣಿ ಕಂಪನಿ ಪ್ರತಿನಿಧಿಗಳ ಮಧ್ಯೆ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸುವ ಕುರಿತು ಚರ್ಚೆ ನಡೆಯಿತು.

ಅಖೀಲ ಕರ್ನಾಟಕ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮಿತಿ ಜಿಲ್ಲಾಧ್ಯಕ್ಷ ಕೆ.ಜಿ. ಅನಂತಮೂರ್ತಿ ನಾಯ್ಕ, ಕನ್ನಡಸೇನೆ ಜಿಲ್ಲಾಧ್ಯಕ್ಷ ರಮೇಶ್‌, ಗೋವಿಂದ ನಾಯ್ಕ, ತಿಪ್ಪೇಶ್‌ ನಾಯ್ಕ, ಕುಮಾರ್‌ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜೀವದ ಬೆಲೆಯೇ ಗೊತ್ತಿಲ್ಲವೇ?
ಅಧಿಕಾರಿಗಳಿಗೆ, ಗಣಿ ಕಂಪನಿಗಳಿಗೆ ಜನರ ಜೀವದ ಬೆಲೆಯೇ ಗೊತ್ತಿಲ್ಲ. ಬಡವರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅದಿರು ತುಂಬಿದ ಲಾರಿಗಳು ಕಿರಿದಾದ ರಸ್ತೆಯಲ್ಲಿ ಅತಿ ವೇಗವಾಗಿ ಸಂಚರಿಸುತ್ತಿವೆ. ಶಾಲಾ ಮಕ್ಕಳು, ಮಹಿಳೆಯರು, ವಯೋವೃದ್ಧರು ನಿತ್ಯ ರಸ್ತೆ ದಾಟುವುದೇ ಕಷ್ಟವಾಗಿದೆ. ಅಧಿಕಾರಿಗಳು ಮತ್ತು ಗಣಿ ಕಂಪನಿಗಳ ಕುಟುಂಬಗಳು ಅಪಘಾತಕ್ಕೀಡಾಗಿದ್ದರೆ ಆಗ ಅವರಿಗೆ ಸಾವಿನ ನೋವು ಏನೆಂದು ತಿಳಿಯುತ್ತಿತ್ತು, ಅಮಾಯಕರ ಪ್ರಾಣ ಹೋಗುತ್ತಿರುವುದರಿಂದ ಜೀವದ ಬೆಲೆ ತಿಳಿದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.